ಕಾಂಗ್ರೆಸ್ ಕಟ್ಟಿಹಾಕಲು ಚುನಾವಣಾ ಕಾರ್ಯಕ್ಕೆ ಐಟಿ ಅಧಿಕಾರಿಗಳ ನೇಮಕ: ಸಿದ್ದರಾಮಯ್ಯ ಆರೋಪ

Date:

  • ನಿಷ್ಪಕ್ಷಪಾತ ಚುನಾವಣೆ ಮಾಡುವುದು ಆಯೋಗದ ಜವಾಬ್ದಾರಿ
  • ಬಿಜೆಪಿ ಸರ್ಕಾರ ಅಕ್ರಮ ನಡೆಸುವ ಸಾಧ್ಯತೆ ಹೆಚ್ಚಿದೆ ಸಿದ್ದರಾಮಯ್ಯ

ರಾಜ್ಯ ವಿಧಾನಸಭೆ ಚುನಾವಣಾ ಕಾರ್ಯಕ್ಕೆ ಐಟಿ ಅಧಿಕಾರಿಗಳನ್ನು ಬಿಜೆಪಿ ನಿಯೋಜನೆ ಮಾಡಿದೆ. ಇದು ಚುನಾವಣಾ ಅಕ್ರಮಕ್ಕೆ ಅವರು ಮಾಡಿಕೊಂಡಿರುವ ದಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಚುನಾವಣಾ ನೀತಿ ಸಂಹಿತೆ ಘೋಷಣೆ ಬೆನ್ನಲ್ಲೇ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ. ಆದರೆ ಇದನ್ನು ತಡೆಯಲು ಬಿಜೆಪಿ ತೆರೆಮರೆಯ ಪ್ರಯತ್ನ ಮಾಡುತ್ತಿದೆ.
ಇದಕ್ಕಾಗಿ ರಾಜ್ಯ ವಿಧಾನಸಭೆ ಚುನಾವಣಾ ಕಾರ್ಯಕ್ಕೆ 300ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ನೇಮಕ ಮಾಡಲಾಗಿದೆ. ಇದು ನಮ್ಮ ಪಕ್ಷವನ್ನು ಕಟ್ಟಿಹಾಕಲು ಮಾಡಿರುವ ತಂತ್ರ ಎಂದು ಕಿಡಿಕಾರಿದರು.

ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮ ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷ ಚುನಾವಣೆಗೆ ಸಿದ್ಧವಾಗಿದೆ. ನಿಷ್ಪಕ್ಷಪಾತ, ಸ್ವತಂತ್ರ ಚುನಾವಣೆ ಮಾಡುವುದು ಆಯೋಗದ ಜವಾಬ್ದಾರಿ. ಬಿಜೆಪಿ ಸಂಪೂರ್ಣ ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದೆ. ದೇಶದಲ್ಲಿ ಆಪರೇಷನ್ ಕಮಲದಂತಹ ಜನವಿರೋಧಿ ಪದ್ಧತಿಯನ್ನು ಪಕ್ಷ ಬಳಕೆಗೆ ತಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಇದರದ್ದೇ ಭಾಗವಾಗಿ ಈ ಬಾರಿ ಪೊಲೀಸರು ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳನ್ನೇ ಬಳಸಿಕೊಂಡು ಅಕ್ರಮ ನಡೆಸುವ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? : ನೀತಿ ಸಂಹಿತೆ ಬಿಸಿ: ಸರ್ಕಾರಿ ಕಾರು ವಾಪಾಸ್ ಕಳುಹಿಸಿದ ಸಿದ್ದರಾಮಯ್ಯ

ನಮ್ಮ ನಿರೀಕ್ಷೆಯಂತೆಯೇ ಇಂದು ಚುನಾವಣೆ ಘೋಷಣೆಯಾಗಿದೆ. ನಾವೂ ಕೂಡ ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ.ಏಪ್ರಿಲ್ 5ಕ್ಕೆ ರಾಹುಲ್ ಗಾಂಧಿ ರಾಜ್ಯಕ್ಕೆ ಬರುತ್ತಿದ್ದಾರೆ.ಅವರ ನೇತೃತ್ವದಲ್ಲಿ ನಾವು ಪಕ್ಷ ಕಟ್ಟುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕಾಂಗ್ರೆಸ್‌ನವರು ಕೊಟ್ಟ ಭರವಸೆ ಈಡೇರಿಸದಿದ್ದರೇ ಒಂದು ಕ್ಷಣವೂ ಅಧಿಕಾರದಲ್ಲಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು. ನಾನು ರಾಜ್ಯ ಸುತ್ತಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದರು.

ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕರು,ಸಿಎಂ ಜನರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡಿಕೊಂಡೇ ಅಧಿಕಾರ ಮುಗಿಸಿದರು. ಬಿಜೆಪಿ ಅವಧಿಯಲ್ಲಿ ಆಗಿದ್ದು ಅಭಿವೃದ್ದಿಯಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...