ಬಿಜೆಪಿ ದೇಶದ ʼಜಾತ್ಯತೀತತೆʼಗೆ ಅಪಾಯ ತಂದೊಡ್ಡುತ್ತಿದೆ: ಕೇರಳ ಸಿಎಂ

Date:

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳು ದೇಶದಲ್ಲಿ ಜಾತ್ಯತೀತತೆಗೆ ಅಪಾಯ ಉಂಟುಮಾಡುತ್ತಿವೆ.  ಪರಿಣಾಮವಾಗಿ, ದಶಕಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಬಹುಸಂಖ್ಯಾತರು ಈ ದೇಶದಲ್ಲಿ ವಾಸಿಸುವುದನ್ನು ಮುಂದುವರಿಸಬಹುದೇ ಎಂದು ಚಿಂತಿತರಾಗಿದ್ದಾರೆ. ದೇಶದ ಕೋಟ್ಯಂತರ ಜನರು ಆತಂಕದಲ್ಲಿ ಬದುಕುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದರು.

ಎಲ್ಎ‌ಡಿಎಫ್‌ನ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಅವರು, 2019ರ ಚುನಾವಣೆಯಲ್ಲಿ ಕೇರಳದ 20 ಲೋಕಸಭಾ ಸ್ಥಾನಗಳಲ್ಲಿ 19 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ವಿರುದ್ಧವೂ ವಾಗ್ದಾಳಿ ನಡೆಸಿದರು. “ಯುಡಿಎಫ್‌ ಸಂಸದರು ಸಂಸತ್ತಿನಲ್ಲಿ ಕೇರಳದ ಪರವಾಗಿ ಧ್ವನಿ ಎತ್ತಿ ಅಭಿಪ್ರಾಯಗಳನ್ನು ಸ್ಪಷ್ಟಪಡಿಸಲು ಸಾಧ್ಯವಾಗಲಿಲ್ಲ. ದಕ್ಷಿಣ ರಾಜ್ಯದ ಬಗ್ಗೆ ಕೇಂದ್ರದ ನಿರ್ಬಂಧಿತ ಆರ್ಥಿಕ ನಿಲುವಿನ ವಿಚಾರದಲ್ಲಿ ಮೂಕ ಪ್ರೇಕ್ಷಕರಂತೆ ವರ್ತಿಸಿದ್ದಾರೆ” ಎಂದು ಹೇಳಿದರು.

“ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳು ವಿಶ್ವದ ಮುಂದೆ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ರಾಷ್ಟ್ರ ಎಂಬ ಭಾರತದ ಚಿತ್ರಣದ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ. ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಅಮ್ನೆಸ್ಟಿಯಂತಹ ಸಂಸ್ಥೆಗಳು, ಯುಎಸ್, ಜರ್ಮನಿಯಂತಹ ದೇಶಗಳು – ಭಾರತದಲ್ಲಿ ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಟೀಕಿಸುತ್ತಿವೆ. ಇಲ್ಲಿ ಪ್ರಜಾಪ್ರಭುತ್ವದ ಮಾರ್ಗಗಳನ್ನು ಅನುಸರಿಸಲಾಗುತ್ತಿದೆಯೇ ಎಂದು ಪ್ರಶ್ನಿಸುತ್ತಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನ ಮತ್ತು ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಬಗ್ಗೆ ವಿಶ್ವಸಂಸ್ಥೆ ಮತ್ತು ಅನೇಕ ದೇಶಗಳು ಭಾರತವನ್ನು ಟೀಕಿಸಿವೆ” ಎಂದರು.

“ಕೇಂದ್ರದ ಆರ್ಥಿಕ ನೀತಿಯಿಂದ ಸಮೃದ್ಧಿಗೆ ಸಂಬಂಧಿಸಿದಂತೆ ಭಾರತವು ವಿಶ್ವದಲ್ಲಿ 55ನೇ ಸ್ಥಾನದಿಂದ 107ನೇ ಸ್ಥಾನಕ್ಕೆ ಕುಸಿಯಲು ಕಾರಣವಾಗಿದೆ. ವಿಶ್ವದ ದೃಷ್ಟಿಯಲ್ಲಿ ಭಾರತವು ಬಡ ರಾಷ್ಟ್ರವಾಗಿದೆ. ಇದಕ್ಕೆ ಕಾರಣ ಸರ್ಕಾರದ ನೀತಿಗಳು” ಎಂದು ಹೇಳಿದ್ದಾರೆ.

“ಕೇಂದ್ರದ ನೀತಿಗಳು ಜನರ ಅನುಕೂಲಕ್ಕಾಗಿ ಅಲ್ಲ. ಆದರೆ ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿ ಮಾಡುತ್ತವೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಬಡವರನ್ನು ಹೊಂದಿದ್ದರೆ, ಕೇರಳವು ದೇಶದಲ್ಲಿ ಕಡಿಮೆ ಸಂಖ್ಯೆಯ ಬಡವರನ್ನು ಹೊಂದಿದೆ. ಏಕೆಂದರೆ ರಾಜ್ಯ ಸರ್ಕಾರ ಜನರಿಗಾಗಿ ಕೆಲಸ ಮಾಡುತ್ತಿದೆ” ಎಂದು ವಾದಿಸಿದರು.

“ಕೇರಳ ಸರ್ಕಾರದ ಸಾರ್ವಜನಿಕ ಕಲ್ಯಾಣ ಕ್ರಮಗಳಿಗೆ ಅಡ್ಡಿಪಡಿಸಲು, ತೆರಿಗೆ ಹಂಚಿಕೆಯಲ್ಲಿ ತನ್ನ ಪಾಲನ್ನು ಕಡಿಮೆ ಮಾಡುವ ಮೂಲಕ ಮತ್ತು ರಾಜ್ಯದ ಸಾಲದ ಮಿತಿಯನ್ನು ಕಡಿತಗೊಳಿಸುವ ಮೂಲಕ ಕೇಂದ್ರವು ಆರ್ಥಿಕವಾಗಿ ರಾಜ್ಯವನ್ನು ಅತಂತ್ರತೆಗೆ ತಳ್ಳಲು ಪ್ರಯತ್ನಿಸುತ್ತಿದೆ” ಎಂದು ಪಿಣರಾಯಿ ವಿಜಯನ್ ಆರೋಪಿಸಿದರು.

“ಕೇರಳದ ಆರ್ಥಿಕ ಪರಿಸ್ಥಿತಿ ತುಂಬಾ ಕಳಪೆಯಾಗಿದೆ. ರಾಜ್ಯವು ಭಾರೀ ಸಾಲಗಳನ್ನು ತೆಗೆದುಕೊಳ್ಳುವ ಮೂಲಕ ಹೇಗೋ ಬದುಕುಳಿಯುತ್ತಿದೆ. ಕಳೆದ ಹಲವು ವರ್ಷಗಳಿಂದ ಕೇರಳದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಸರ್ಕಾರಗಳು ಆಡಳಿತ ನಡೆಸುತ್ತಿರುವುದರಿಂದ ರಾಜ್ಯದ ಕಳಪೆ ಆಡಳಿತದಿಂದಾಗಿ ಕೇರಳದಲ್ಲಿ ಆರ್ಥಿಕ ಸಂಕಷ್ಟ ಉಂಟಾಗಿದೆ ಎಂದು ಸೀತಾರಾಮನ್ ಹೇಳಿದ್ದರು. ಕೇರಳದಲ್ಲಿ ಖರ್ಚು ಮಾಡುವ ಪ್ರತಿ ಒಂದು ರೂಪಾಯಿಯಲ್ಲಿ ಶೇ.75ರಷ್ಟು ರಾಜ್ಯ ಸರ್ಕಾರ ಮತ್ತು ಶೇ.25ರಷ್ಟು ಕೇಂದ್ರ ಸರ್ಕಾರದಿಂದ ಬರುತ್ತದೆ. ಮುಂದಿನ ದಿನಗಳಲ್ಲಿ ಇದು ಕ್ರಮವಾಗಿ ಶೇ.81 ಮತ್ತು ಶೇ.19ಕ್ಕೆ ಬದಲಾಗುತ್ತದೆ” ಎಂದು ಪಿಣರಾಯಿ ವಿಜಯನ್ ಹೇಳಿದರು.

“ದಕ್ಷಿಣ ಭಾರತದ ರಾಜ್ಯಗಳು ದೇಶದ ಜಿಡಿಪಿಗೆ ಶೇ.35 ರಷ್ಟು ಕೊಡುಗೆ ನೀಡುತ್ತವೆ. ರಾಷ್ಟ್ರದ ಜನಸಂಖ್ಯೆಯ ಶೇ.18 ರಷ್ಟನ್ನು ಒಳಗೊಂಡಿದ್ದರೆ, ಈ ಪ್ರದೇಶವು ಕೇಂದ್ರ ತೆರಿಗೆ ಪಾಲನ್ನು ಶೇ.15 ಕ್ಕಿಂತ ಕಡಿಮೆ ಪಡೆಯುತ್ತದೆ. ಆದರೆ ಕಾಂಗ್ರೆಸ್ ಈ ಎಲ್ಲದರ ಬಗ್ಗೆ ಚರ್ಚಿಸುವುದನ್ನು ಬಿಟ್ಟು ಕಣ್ಣುಮುಚ್ಚಿ ಕುಳಿತಿದ್ದು, ರಾಜ್ಯ ಸರ್ಕಾರವನ್ನು ಟೀಕಿಸಲು ಮಾತ್ರ ಆಸಕ್ತಿ ಹೊಂದಿದೆ” ಎಂದು ಅವರು ಆರೋಪಿಸಿದರು.

“ಕಾಂಗ್ರೆಸ್, ಕೇಂದ್ರದ ನೀತಿಗಳನ್ನು ಪ್ರಶ್ನಿಸದೆ ಬಿಜೆಪಿಗೆ ಸಹಾಯ ಮಾಡುವ ನಿಲುವನ್ನು ತೆಗೆದುಕೊಳ್ಳುತ್ತದೆ. ಆದ್ದರಿಂದ, ಅದು ಬಿಜೆಪಿಗೆ ಬೆಂಬಲವಾಗಿ ಪರಿಣಮಿಸುತ್ತದೆ” ಎಂದು ಹೇಳಿದರು.

“ಚುನಾವಣಾ ಬಾಂಡ್‌ಗಳಿಂದ ಬಿಜೆಪಿಗೆ ಹೆಚ್ಚು ಲಾಭವಾಗಿದ್ದರೆ, ಕಾಂಗ್ರೆಸ್ ಕೂಡ 1,000 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದೆ. ಅವರಿಬ್ಬರೂ ಒಂದೇ ನಿಲುವನ್ನು ಹೊಂದಿದ್ದಾರೆ. ಎಡಪಕ್ಷಗಳು ಮಾತ್ರ ಮೊದಲಿನಿಂದಲೂ ಚುನಾವಣಾ ಬಾಂಡ್‌ಗಳನ್ನು ವಿರೋಧಿಸಿತ್ತು” ಎಂದು ಹೇಳಿದರು.

“ಬಿಜೆಪಿ ನಮ್ಮ ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯಕ್ಕೆ ಅಪಾಯವನ್ನುಂಟುಮಾಡುತ್ತಿದೆ. ಹಾಗಾಗಿ ಅವರನ್ನು ಸೋಲಿಸಬೇಕು” ಎಂದು ಹೇಳಿದರು.

“ಬಿಜೆಪಿ ಮತ್ತು ಕೇಂದ್ರವು ತಮ್ಮನ್ನು ಸೋಲಿಸಲು ಸಾಧ್ಯವಿಲ್ಲವೆಂದು ನಂಬಿದೆ. 2004ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಾಯಕತ್ವದಲ್ಲಿ ಅವರು ಈ ದೃಷ್ಟಿಕೋನವನ್ನು ಹೊಂದಿದ್ದರು. ಆದರೆ ಅವರು ಮತ್ತೆ ಅಧಿಕಾರಕ್ಕೆ ಬಂದರೆ ಅಪಾಯಕಾರಿ ಎಂದು ಜನರು ಅರಿತುಕೊಂಡರು” ಎಂದು ನೆನಪಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? ಅಬಕಾರಿ ನೀತಿ ಪ್ರಕರಣದ ಸಾಕ್ಷಿಗೂ ಬಿಜೆಪಿಗೂ ಸಂಬಂಧವಿದೆ: ಎಎಪಿ

“ರಾಜ್ಯದ ಜನರು ಅವರ ನೀತಿಗಳು ಮತ್ತು ಸಿದ್ಧಾಂತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲದ ಕಾರಣ ಅವರು ಯಾವುದೇ ಕಾರ್ಯತಂತ್ರವನ್ನು ಅಳವಡಿಸಿಕೊಂಡರೂ ಕೇರಳದಲ್ಲಿ ಬಿಜೆಪಿ ಗೆಲ್ಲುವ ಅವಕಾಶಗಳಿಲ್ಲ” ಎಂದು ಪಿಣರಾಯಿ ವಿಜಯನ್ ಪ್ರತಿಪಾದಿಸಿದರು.

ತಿರುವನಂತಪುರಂ ಲೋಕಸಭಾ ಕ್ಷೇತ್ರದ ಎಲ್‌ಡಿಎಫ್‌ ಅಭ್ಯರ್ಥಿ ಪನ್ನಿಯನ್ ರವೀಂದ್ರನ್ ಅವರಿಗೆ ಮತ ಚಲಾಯಿಸುವಂತೆ ಅವರು ಜನರನ್ನು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...