ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿ ಜನರನ್ನು ಎತ್ತಿಕಟ್ಟುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Date:

“ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದ ಬಿಜೆಪಿಯು ಅಸ್ತಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.

ಮಂಡ್ಯದಲ್ಲಿ ಹನುಮಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಮಾಧ್ಯಮದ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದರು.

“ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ದೇಶದ ಕಾನೂನಿಗೆ ನಾವು ಗೌರವ ನೀಡಬೇಕು. ಬಿಜೆಪಿ ಅಭ್ಯರ್ಥಿಗಳು ಅನೇಕ ಕಡೆಗಳಲ್ಲಿ ಠೇವಣಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಇಂತಹ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದರಿಂದ ಏನೂ ಪ್ರಯೋಜನವಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಡ್ಯದ ಜನರು ಬಹಳ ಸಹಿಷ್ಣುತೆಯುಳ್ಳವರು, ಜಾತ್ಯತೀತರಾಗಿದ್ದಾರೆ. ಅವರು ಇಂತಹ ವಿಚಾರಗಳಿಗೆ ಮಾರು ಹೋಗುವುದಿಲ್ಲ. ನಮಗೆ ನಮ್ಮದೇ ಆದ ಸಂವಿಧಾನವಿದೆ. ಈ ಭಾಗವನ್ನು ನಮ್ಮ ಮಹಾರಾಜರು ಹೇಗೆ ಆಳ್ವಿಕೆ ನಡೆಸಿದ್ದಾರೆ ಎಂಬ ಇತಿಹಾಸವಿದೆ. ಈ ಎಲ್ಲ ಗೊಂದಲಗಳು ಬಿಜೆಪಿಯ ಸೃಷ್ಟಿ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ನಮ್ಮ ಆದ್ಯತೆ” ಎಂದು ತಿಳಿಸಿದರು.

ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಯಾರು ಹಿಂದೂ ವಿರೋಧಿ? ನಾವೆಲ್ಲರೂ ಮೊದಲು ಭಾರತೀಯರು. ಅಲ್ಲಿ ದಲಿತ ಸಂಘರ್ಷ ಸಮಿತಿ, ಕೆಂಪೇಗೌಡ ಸಮಿತಿ ಸೇರಿದಂತೆ ಅನೇಕರು ನಾವು ಬಾವುಟ ಹಾಕುತ್ತೇವೆ ಎಂದು ಕೇಳುತ್ತಿದ್ದಾರೆ. ನಾವೆಲ್ಲರೂ ಹಿಂದೂಗಳಲ್ಲವೇ? ನಮ್ಮ ಹಳ್ಳಿಯಲ್ಲಿರುವ ಜನ ಹಿಂದೂಗಳಲ್ಲವೇ? ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...