ವಾಕ್ ಸ್ವಾತಂತ್ರ್ಯ ದುರ್ಬಳಕೆಯಲ್ಲಿ ಬಿಜೆಪಿಯೇ ನಂ.1: ಸಚಿವ ಸಂತೋಷ ಲಾಡ್

Date:

ಸಂವಿಧಾನದ ಮೂಲಕ ಅಂಬೇಡ್ಕರ್ ವಾಕ್‌ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಆದರೆ, ವಾಕ್‌ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡುವುದರಲ್ಲಿ ಬಿಜೆಪಿಯೇ ನಂಬರ್ ಒನ್ ಸ್ಥಾನದಲ್ಲಿದೆ. ಬಿಜೆಪಿಗರು ಎಲ್ಲಿ ಏನು ಬೇಕಾದರೂ ಮಾತನಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.

ಧಾರವಾಡದ ನವಲಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲದಕ್ಕೂ ಒಂದು ಮಿತಿ ಇರುತ್ತದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆಲ್ಲುತ್ತದೆ ಎನ್ನುತ್ತಿದ್ದಾರೆ. ಎನ್‌ಡಿಎ ಈಗ 300 ಸ್ಥಾನ ಗೆಲ್ಲೋದಕ್ಕೂ ಆಗುಲ್ಲ. ಅವರು ಹೇಳಿದ್ದನ್ನೆಲ್ಲ ಮಾಧ್ಯಮಗಳು ತೋರಿಸುತ್ತವೆ. ನಾವು ಅವರಂತೆ ಮಾತನಾಡುವುದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ಕನಿಷ್ಠ 18 ಸ್ಥಾನ ಗೆಲ್ಲುತ್ತದೆ” ಎಂದು ಹೇಳಿದರು.

“ಚುನಾವಣೆಗೆ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರು ಪ್ರಕಟವಾಗುತ್ತದೆ. ಸಚಿವರಿಗೆ ಟಿಕೆಟ್ ನೀಡುವ ವಿಚಾರ ಹೈಕಮಾಂಡ್‌ ನಿರ್ಧಾರಕ್ಕೆ ಬಿಟ್ಟಿದ್ದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...