ರಾಜಕೀಯವಾಗಿ ಬೆಳೆಯುತ್ತಿರುವ ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ ಮಸಿ ಬಳಿಯುತ್ತಿದೆ: ಡಿ ಕೆ ಶಿವಕುಮಾರ್‌ ಕಿಡಿ

Date:

  • ʼಸಿ ಟಿ ರವಿ, ಅಶ್ವತ್ಥನಾರಾಯಣ ಎಂಬ ಅವಿವೇಕಿಗಳು ಒಕ್ಕಲಿಗ ಸಮುದಾಯದ ವಿರುದ್ಧ ಬೇರೆಯವರನ್ನು ಎತ್ತಿ ಕಟ್ಟುತ್ತಿದ್ದಾರೆʼ
  • ಜಾತಿ, ಕೋಮುಗಳ ನಡುವೆ ದ್ವೇಷ ತಂದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ಪ್ರಯತ್ನಿಸುತ್ತಿದೆ: ಡಿಕೆಶಿ

ಸಿ ಟಿ ರವಿ ಮತ್ತು ಅಶ್ವತ್ಥನಾರಾಯಣ ಎಂಬ ಅವಿವೇಕಿಗಳು ಈ ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯದ ವಿರುದ್ಧ ಬೇರೆಯವರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಕಿಡಿಕಾರಿದರು.

ಬೆಳಗಾವಿಯಲ್ಲಿ ಸೋಮವಾರ ಮಾತನಾಡಿ, “ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪು ಸುಲ್ತಾನನನ್ನು ಒಕ್ಕಲಿಗರು ಕೊಂದರು, ಆ ಮೂಲಕ ಒಕ್ಕಲಿಗರು ದೇಶವಿರೋಧಿಗಳು, ಕೊಲೆಗಡುಕರು ಎಂದು ಅವರ ಗೌರವ, ಸ್ವಾಭಿಮಾನಕ್ಕೆ ಮಸಿ ಬಳಿಯಲಾಗುತ್ತಿದೆ” ಎಂದು ಆರೋಪಿಸಿದರು.

“ಇತಿಹಾಸದ ಯಾವ ದಾಖಲೆಯಲ್ಲಿ ಉರಿಗೌಡ ನಂಜೇಗೌಡ ಟಿಪ್ಪು ಸುಲ್ತಾನ್ ಕೊಂದರು ಎಂಬುದು ಇದೆ? ಬಿಜೆಪಿಯವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯಾರನ್ನು ಬೇಕಾದರೂ ಸೃಷ್ಟಿಸುತ್ತಾರೆ, ಯಾರ ಮನೆಯನ್ನು ಬೇಕಾದರೂ ಹಾಳು ಮಾಡುತ್ತಾರೆ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟಿಪ್ಪು ಇತಿಹಾಸದ ಬಗ್ಗೆ ರಾಷ್ಟ್ರಪತಿಗಳು ರಾಜ್ಯ ವಿಧಾನಮಂಡಲ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಟಿಪ್ಪು ಬದುಕು, ಸಾವು, ಸಾಧನೆ ಬಗ್ಗೆ ಹಲವು ಇತಿಹಾಸ ಪುಸ್ತಕಗಳಿವೆ. ಅವುಗಳಲ್ಲಿ ಇಲ್ಲದ ವಿಚಾರವನ್ನು ಇವರು ಸೃಷ್ಟಿಸಿದ್ದಾರೆ” ಎಂದರು.

ಇತಿಹಾಸ ತಿರುಚುವಲ್ಲಿ ಬಿಜೆಪಿ ಎತ್ತಿದ ಕೈ

“ಬಸವಣ್ಣ, ಕುವೆಂಪು, ನಾರಾಯಣ ಗುರು, ಅಂಬೇಡ್ಕರ್ ಸೇರಿದಂತೆ ಹಲವು ಮಹನೀಯರ ಇತಿಹಾಸ ತಿರಿಚಿದ್ದ ಬಿಜೆಪಿ, ಈಗ ಉರಿಗೌಡ ನಂಜೇಗೌಡ ಎಂಬ ಹೆಸರಲ್ಲಿ ಒಕ್ಕಲಿಗರ ಇತಿಹಾಸ ತಿರುಚುತ್ತಿದೆ. ಜಾತಿ, ಕೋಮುಗಳ ನಡುವೆ ದ್ವೇಷ ತಂದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಮಂಡ್ಯ ಜಿಲ್ಲೆಗೆ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಾ. ದೇ. ಜವರೇಗೌಡ ಅವರ ಸಂಪಾದಕತ್ವದಲ್ಲಿ ‘ಸುವರ್ಣ ಮಂಡ್ಯ ‘ ಎಂಬ ಸಂಚಿಕೆ ತರಲಾಗಿತ್ತು. ಅದರ ಪರಿಸ್ಕೃತ ಸಂಚಿಕೆಯಲ್ಲಿ ಸಂಶೋಧಕ ಹ.ಕ. ರಾಜೇಗೌಡರು ಮಂಡ್ಯ ಐವತ್ತು; ಒಂದು ಪಕ್ಷಿ ನೋಟ ಎಂಬ ಲೇಖನ ಬರೆದಿದ್ದರು. ಅದರಲ್ಲಿ ದೊಡ್ಡನಂಜೆಗೌಡ, ಉರಿಗೌಡ ಎಂಬುವರು ಹೈದರಾಲಿ, ಟಿಪ್ಪು ವಿರುದ್ಧ ಸೆಟೆದು ನಿಂತಿದ್ದರು ಎಂದು ಉಲ್ಲೇಖವಿದೆ. ಇತಿಹಾಸದಲ್ಲಿ ಇಲ್ಲದ ಉರಿಗೌಡ, ನಂಜೇಗೌಡರ ಬಗ್ಗೆ ಉಲ್ಲೇಖ ಮಾಡಿರುವ ಬಗ್ಗೆ ಕೆಲವರು ರಾಜೇಗೌಡರನ್ನು ಪ್ರಶ್ನಿಸಿದಾಗ ಒಕ್ಕಲಿಗರಿಗೆ ಪ್ರಾಮುಖ್ಯತೆ ಸಿಗಲಿ ಎಂದು ಹೀಗೆ ಬರೆದಿದ್ದೇನೆ, ಇರಲಿ ಬಿಡಿ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಈಗ ಸ್ಪಷ್ಟನೆ ನೀಡಲು ಹ.ಕ. ರಾಜೇಗೌಡರು ಜೀವಂತವಾಗಿ ಇಲ್ಲ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ಬಿಜೆಪಿಯ ವಾಟ್ಸಾಪ್ ಯೂನಿವರ್ಸಿಟಿ ಹೊಸ ಇತಿಹಾಸ ಸೃಷ್ಟಿಸಲು ಹೊರಟಿದೆ” ಎಂದು ಟೀಕಿಸಿದರು.

“ಒಕ್ಕಲಿಗ ಸಮುದಾಯದ ಹೆಸರನ್ನು ಬಳಸಿಕೊಂಡು ರಾಜಕೀಯವಾಗಿ ಬೆಳೆಯುತ್ತಿರುವ ಇವರು ಈಗ ಅದೇ ಸಮಾಜದ ಸ್ವಾಭಿಮಾನ ಮತ್ತು ಘನತೆಗೆ ಮಸಿ ಬಳಿಯುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹಲವು ಸಂಘಟನೆಗಳು ನನಗೆ ಒತ್ತಡ ಹೇರುತ್ತಿದ್ದು, ಇತಿಹಾಸ ತಿರುಚುವ ಈ ಷಡ್ಯಂತ್ರ ಖಂಡಿಸಿ, ಅದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...