ದೇಶದ ವಾಸ್ತವ ಸ್ಥಿತಿ ಮರೆಮಾಚಲು ಬಿಜೆಪಿ ಭ್ರಮೆ ಬಿತ್ತುತ್ತಿದೆ: ಪರಕಾಲ ಪ್ರಭಾಕರ್

Date:

ನಮ್ಮ ದೇಶವು ಶೇ. 24ರಷ್ಟು ಮಂದಿ ಯುವಜನತೆ ನಿರುದ್ಯೋಗಿಗಳಾಗಿದ್ದಾರೆ. ಇದು ಪ್ರಪಂಚದಲ್ಲೇ ಅತೀ ಹೆಚ್ಚು. ಆದರೆ ಕೇಂದ್ರ ಸರ್ಕಾರ ಈ ವಾಸ್ತವವನ್ನು ಮರೆಮಾಚಿ, ಆರ್ಥಿಕತೆಯಲ್ಲಿ ನಮ್ಮ ದೇಶ ಮುಂದುವರಿಯುತ್ತಿದೆ ಎಂಬ ಭ್ರಮೆ ಹರಡುತ್ತಿದೆ ಎಂದು ಖ್ಯಾತ ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ತಿಳಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ ‘2014ರ ನಂತರದ ಭಾರತ: ಭ್ರಮೆಯೇ ವಾಸ್ತವವಾಗಿʼ ಎಂಬ ವಿಚಾರದ ಕುರಿತು ಮಾತನಾಡಿದರು.

“ದೇಶದಲ್ಲಿ ಯುವಕರು ನಿರುದ್ಯೋಗದಿಂದಾಗಿ ಬಳಲುತ್ತಿದ್ದಾರೆ. ಇರಾನ್, ಲೆಬನಾನ್, ಸಿರಿಯಾ ದೇಶಗಳಿಗಿಂತೂ ಹೆಚ್ಚು ಜನ ನಿರುದ್ಯೋಗಿಗಳು ನಮ್ಮಲ್ಲಿದ್ದಾರೆ. ನಮ್ಮ ದೇಶದ ನಿರುದ್ಯೋಗದ ಪ್ರಮಾಣ 24ರಷ್ಟಾದರೆ, ನಮ್ಮ ನೆರೆಯ ರಾಷ್ಟ್ರ ಬಾಂಗ್ಲಾದೇಶದ ನಿರುದ್ಯೋಗದ ಪ್ರಮಾಣ 12 ಶೇ. ಅಂದರೆ ನಮ್ಮ ಅರ್ಧದಷ್ಟು. ಇದು ದೇಶದ ಜನರಿಗೆ ತಿಳಿಯದಂತೆ ವ್ಯವಸ್ಥಿತವಾಗಿ ಮರೆಮಾಚಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಹಣದುಬ್ಬರದ ದರ ತಾಳಿಕೊಳ್ಳಲು ಸಾಧ್ಯವಾಗದ ಮಟ್ಟಕ್ಕೆ ಏರಿದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಆಂತರಿಕ ಉಳಿತಾಯ ದರ ಶೇ.5ಕ್ಕಿಂತಲೂ ಕಡಿಮೆ ಇದೆ ಎಂದು ವಿವರಿಸಿದರು.

ಬಡತನ, ಹಸಿವಿನ ಸೂಚ್ಯಂಕ ಹೆಚ್ಚಾಗುತ್ತಿದೆ. ಆದರೆ ಈ ವಾಸ್ತವಾಂಶಗಳನ್ನು ಸರ್ಕಾರ ವ್ಯವಸ್ಥಿತವಾಗಿ ಮರೆಮಾಚುತ್ತಿದೆ. ಭಾರತ ಜಗತ್ತಿನಲ್ಲೇ ಮುಂದುವರಿಯುತ್ತಲಿರುವ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿದೆ ಎಂಬ ಭ್ರಮೆಯನ್ನು ವ್ಯವಸ್ಥಿತವಾಗಿ ತೇಲಿ ಬಿಡಲಾಗುತ್ತಿದೆ. ವಾಸ್ತವಗಳನ್ನು ದೇಶದ ಜನ ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ನಮ್ಮ ದೇಶ ಸಂಸದೀಯ ವ್ಯವಸ್ಥೆ ಹೊಂದಿದೆ. ಆದರೆ ಇಂದು ಕಾನೂನುಗಳನ್ನು ಯಾವುದೇ ಚರ್ಚೆಗಳಿಲ್ಲದೆಯೇ ಪಾಸ್ ಮಾಡಲಾಗುತ್ತಿದೆ. ಪ್ರಶ್ನಿಸಿದವರನ್ನು ಸಂಸತ್ತಿನಿಂದಲೇ ಅಮಾನತು ಮಾಡಲಾಗುತ್ತಿದೆ. ಮೂರು ಕರಾಳ ಕೃಷಿ ಕಾನೂನನ್ನು ದೇಶದಲ್ಲಿ ಜಾರಿಗೆ ತರಲಾಯಿತು. ರೈತರು ವಿರೋಧ ವ್ಯಕ್ತಪಡಿಸಿ, ನಿರಂತರ ಪ್ರತಿಭಟನೆ ನಡೆಸಿದ್ದರಿಂದ ಹಿಂದೆ ಪಡೆಯುವುದಾಗಿ ಪ್ರಧಾನಿಗಳು ಟಿವಿ ಮಾಧ್ಯಮದ ಪರದೆಯ ಮೂಲಕ ಘೋಷಿಸಿದರು. ಆ ಬಳಿಕ ಯಾವುದೇ ರೀತಿಯ ಚರ್ಚೆ ಇಲ್ಲದೆಯೇ ಸಂಸತ್ತಿನಲ್ಲಿ ವಾಪಸ್ ಪಡೆಯಲಾಯಿತು. ಕೃಷಿ ಕಾನೂನು ಜಾರಿಗೆ ತಂದ ಉದ್ದೇಶವಾಗಲೀ, ಹಿಂಪಡೆದ ಉದ್ದೇಶವಾಗಲೀ ಸರ್ಕಾರ ಈವರೆಗೆ ತಿಳಿಸಿಲ್ಲ. ಇದು ನಿಜಕ್ಕೂ ಅಪಾಯಕಾರಿ ಸನ್ನಿವೇಶ” ಎಂದು ಪರಕಾಲ ಪ್ರಭಾಕರ್ ಅಭಿಪ್ರಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...