ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ | ಮಾತುಕತೆ ಇನ್ನೂ ಅಂತಿಮ ಆಗಿಲ್ಲ ಎಂದ ಯಡಿಯೂರಪ್ಪ

Date:

  • ನಾಲ್ಕು ಸೀಟು ಹಂಚಿಕೆಯ ಮಾತುಕತೆ ಆಗಿದೆ ಎಂದಿದ್ದ ಮಾಜಿ ಸಿಎಂ ಬಿಎಸ್‌ವೈ
  • ನಾನು ಹೇಳುವಾಗಲೂ ಒಂದು ರೂಪಕ್ಕೆ ಬಂದಿರಲಿಲ್ಲ ಎಂದ ಬಿಜೆಪಿ ಮುಖಂಡ

ಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿದ್ದು, ನಾಲ್ಕು ಸೀಟು ಬಿಟ್ಟುಕೊಡುವ ಬಗ್ಗೆ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ‘ಮಾತುಕತೆ ಇನ್ನೂ ಅಂತಿಮ ಆಗಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, “ಪ್ರಧಾನಿ ನರೇಂದ್ರ ಮೋದಿ ಬೇರೆ ವಿಷಯದಲ್ಲಿ ಬ್ಯುಝಿಯಾಗಿದ್ದಾರೆ. ಜೆಡಿಎಸ್​ ಜೊತೆ ಮೈತ್ರಿ ಬಗ್ಗೆ ಬಹುಶಃ ನಾಳೆ ಅಥವಾ ನಾಡಿದ್ದು ನಂತರ ಮಾತುಕತೆ ಆಗಬಹುದು. ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ, ಕಾದು ನೋಡುತ್ತೇವೆ. ಮೈತ್ರಿ ವಿಚಾರ ಇನ್ನೂ ಯಾವುದೇ ಅಂತಿಮ ರೂಪಕ್ಕೆ ಬಂದಿಲ್ಲ. ಎಲ್ಲವನ್ನೂ ಕಾದು ನೋಡಬೇಕು” ಎಂದು ಹೇಳಿದರು.

ನಿಮ್ಮ ಹೇಳಿಕೆಯನ್ನು ಕುಮಾರಸ್ವಾಮಿಯವರು ಸ್ವಾಗತಿಸಿದ್ದಾರೆ ಎಂದು ಪತ್ರಕರ್ತರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಬಿಎಸ್‌ವೈ, ಈ ಹಿಂದೆ ನಾನು ಹೇಳುವಾಗಲೂ ಒಂದು ರೂಪಕ್ಕೆ ಬಂದಿರಲಿಲ್ಲ. ಈಗಲೂ ಅಷ್ಟೇ ಮೈತ್ರಿ ವಿಚಾರ ಯಾವುದೇ ರೂಪಕ್ಕೆ ಬಂದಿಲ್ಲ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್‌ಗೆ ನಾಲ್ಕು ಕ್ಷೇತ್ರ : ಯಡಿಯೂರಪ್ಪ

ಯಡಿಯೂರಪ್ಪ ಈ ಹಿಂದೆ ಹೇಳಿದ್ದೇನು?
ಕಳೆದ ಸೆ.8ರಂದು ಬೆಂಗಳೂರಿನಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಮಾತನಾಡಿದ್ದ ಯಡಿಯೂರಪ್ಪ, ಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದಿದ್ದರು.

“ಅಲ್ಲದೇ, ಚರ್ಚೆಯ ನಂತರ ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಅಮಿತ್ ಶಾ ಒಪ್ಪಿದ್ದಾರೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಹೆಚ್ಚು ಶಕ್ತಿ ಬರಲಿದ್ದು, 25ರಿಂದ 26 ಸ್ಥಾನ ಗೆಲ್ಲಲು ಸಹಕಾರಿಯಾಗಲಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆದ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದರು.

ಇದರೊಂದಿಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗುವುದನ್ನು ಖಚಿತಪಡಿಸಿದ್ದರು. ಆ ಬಳಿಕ ಕಾಂಗ್ರೆಸ್‌ನವರು ಬಿಜೆಪಿಯ ಬಿ ಟೀಮ್ ಜೆಡಿಎಸ್‌ ಎಂದು ಟೀಕಿಸಿದ್ದರು. ಈ ಬೆಳವಣಿಗೆಯ ನಡುವೆಯೇ, ಈಗ ಬಿಎಸ್​ವೈ ಮಾತು ಬದಲಾಯಿಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...