ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ವಿಚಾರ: ಮೋದಿಯವರ ಜೊತೆ ಕುಮಾರಸ್ವಾಮಿ ಮಾತುಕತೆ; ಎಚ್ ಡಿ ದೇವೇಗೌಡ

Date:

  • ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದ ಎಚ್ ಡಿ ದೇವೇಗೌಡ
  • ಬೆಂಗಳೂರಿನಲ್ಲಿ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಮಾತನಾಡಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಬಿಜೆಪಿಯವರು ಎಷ್ಟು ಕ್ಷೇತ್ರ ಕೊಡುತ್ತಾರೋ ಗೊತ್ತಿಲ್ಲ. ಮೋದಿ ಅವರ ಜೊತೆ ಕುಮಾರಸ್ವಾಮಿ ಮಾತನಾಡಿ ಸೀಟು ಹಂಚಿಕೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ನಡೆದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ನನಗೆ ಗೌರವ ಕೊಡುತ್ತಾರೆ. ಅವರಿಗೆ ನನ್ನ ನಡವಳಿಕೆ ಗೊತ್ತಿದೆ. ನಮಗೆ ಇಷ್ಟು ಸೀಟು ಕೊಡಿ ಅಂತ ನಾವು ಕೇಳಿಲ್ಲ. ಪ್ರತಿ ಕ್ಷೇತ್ರದ ಬಗ್ಗೆ ವಿವರಿಸಿದ್ದೇನೆ. ಸೀಟು ಹಂಚಿಕೆ ಬಗ್ಗೆ ಕುಮಾರಸ್ವಾಮಿ ಮಾತನಾಡುತ್ತಾರೆ. ಸೀಟು ಹಂಚಿಕೆ ಅಂತಿಮವಾದ ಬಳಿಕ ಎಲ್ಲ ಕ್ಷೇತ್ರಕ್ಕೂ ಹೋಗಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಅಧಿಕೃತವಾಗಿ ಘೋಷಣೆ ಮಾಡಿರುವ ಎಚ್ ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಮಾತುಕತೆಯನ್ನು ಕೂಡ ಸಭೆಯಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಉಳಿಯುತ್ತದೆ, ಬೆಳೆಯುತ್ತದೆ. ಕುಮಾರಸ್ವಾಮಿ ನಾಯಕತ್ವದಲ್ಲಿ ಮತ್ತೆ ಪಕ್ಷ ಬೆಳೆಯುತ್ತದೆ. ನೀವು ಕಾರ್ಯಕರ್ತರು ನಮ್ಮ ಪಕ್ಷದ ಶಕ್ತಿ. ನೀವು ಪಕ್ಷ ಉಳಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಭಾವುಕರಾಗಿ ನುಡಿದರು.

ಜೆಡಿಎಸ್ ಪಕ್ಷ ಉಳಿಸುವುದಕ್ಕೆ ನಾನು ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದೆ. ಆದರೆ ನಾನು ದೆಹಲಿಯಲ್ಲಿ ಅನೈತಿಕವಾಗಿ ಸಂಪರ್ಕ ಮಾಡಿದೆ ಎಂದು ಹೇಳುತ್ತಿದ್ದಾರೆ. ಈ ರಾಜ್ಯದಲ್ಲಿ ಯಾರಿಗೆ ನೈತಿಕತೆ ಇದೆ? ಯಾರಿಗೆ ಇಲ್ಲ ಅಂತ ವಿಶ್ಲೇಷಣೆ ಮಾಡಬಲ್ಲೆ. ಆದರೆ ನಾನು ವ್ಯಕ್ತಿಗತ ಟೀಕೆ ಮಾಡಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ದೇವೇಗೌಡ ಪರೋಕ್ಷವಾಗಿ ಆಕ್ರೋಶ ಹೊರಹಾಕಿದರು.

ಕೆಲವರು ಕಾಂಗ್ರೆಸ್‌ಗೆ ಹೋಗುತ್ತೇನೆ ಎನ್ನುತ್ತಾರೆ. ಆದರೆ ನಾನು ದುಡುಕಬೇಡಿ ಎಂದು ಹೇಳಿದ್ದೇನೆ. ಬಿಜೆಪಿ ಅವರು ಎಷ್ಟು ಕ್ಷೇತ್ರ ಕೊಡುತ್ತಾರೆ ಎಂದು ಗೊತ್ತಿಲ್ಲ. ಸೀಟು ಹಂಚಿಕೆ ಅಂತಿಮವಾದ ಬಳಿಕ ಎಲ್ಲ ಕ್ಷೇತ್ರಕ್ಕೂ ವ್ಹೀಲ್‌ಚೇರ್‌ನಲ್ಲೇ ಹೋಗಿ ಪ್ರಚಾರ ಮಾಡುತ್ತೇನೆ. ಎಲ್ಲರೂ ಬೆಂಬಲ ಕೊಡಿ ಎಂದು ಎಚ್ ಡಿ ದೇವೇಗೌಡ ಮನವಿ ಮಾಡಿಕೊಂಡರು.

ಸಮಾವೇಶದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹೀಂ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಕೋರ್ ಕಮಿಟಿಯ ಅಧ್ಯಕ್ಷ ಜಿ ಟಿ ದೇವೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...