ಕಾವೇರಿ ವಿವಾದ | ಜನರ ಹಿತದೃಷ್ಟಿಯಿಂದ ಬಿಜೆಪಿ, ಜೆಡಿಎಸ್ ಹೋರಾಡುತ್ತಿಲ್ಲ: ಸಿದ್ದರಾಮಯ್ಯ

Date:

  • ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ
  • ಇತರರ ಮೂಲಭೂತ ಹಕ್ಕುಗಳ ರಕ್ಷಣೆ ಕೂಡ ಮುಖ್ಯ: ಸಿಎಂ

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮಂಗಳವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು” ಎಂದರು.

144 ಸೆಕ್ಷನ್ ಜಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು, ಜನರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ. ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ವಿಷಯವನ್ನು ರಾಜಕಾರಣ ಮಾಡಬಾರದು. ಆದರೆ ಬಿಜೆಪಿಯವರು ಚಡ್ಡಿ ಮೆರವಣಿಗೆ ಮಾಡಿದ್ದಾರೆ. ಬಿಜೆಪಿಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು” ಎಂದು ಅವರು ಲೇವಡಿ ಮಾಡಿದರು.

ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಡಿಎಂಕೆ ತಮಿಳುನಾಡಿನವರು. ಬಿಜೆಪಿ ಎಐಎಡಿಎಂಕೆ ಜೊತೆಗಿತ್ತು. ಅವರನ್ನು ಏನೆಂದು ಹೇಳಬೇಕು? ರಾಜಕಾರಣಕ್ಕೆ ಏನೇನೋ ಹೇಳಬಾರದು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ ವಿಷಯ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ” ಎಂದರು.

“ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ, ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ. ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾರು ಹಸಿದಿದ್ದರು, ಯಾವುದು ಹಳಸಿತ್ತು?

ಸಂಕಷ್ಟ ಪರಿಹಾರ ಸೂತ್ರ ರೂಪಿಸಲು ಒತ್ತಡ

“ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂತಹ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು” ಎಂದರು

ಮೇಕೆದಾಟು ಜಲಾಶಯದಿಂದ ಪರಿಹಾರ

“ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು” ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ಬಿಜೆಪಿ ವಿರುದ್ಧವಾದ ಶಕ್ತಿಗಳು ಒಂದುಗೂಡುತ್ತಿವೆ

ಎನ್‌ಡಿಎಯಿಂದ ಎಐಎಡಿಎಂಕೆ ಹೊರಗೆ ಬಂದಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇಡೀ ದೇಶದಲ್ಲಿ ಬಿಜೆಪಿ ವಿರುದ್ಧವಾದ ಶಕ್ತಿಗಳು ಒಂದುಗೂಡುವ ಕೆಲಸವಾಗುತ್ತಿದೆ. ಏಕೆಂದರೆ ಬಿಜೆಪಿ ಕಳೆದ 9 ವರ್ಷಗಳಲ್ಲಿ ನುಡಿದಂತೆ ನಡೆದಿಲ್ಲ. ಭಾವನಾತ್ಮಕ ವಿಷಯಾಗಳನ್ನು ಮುಂದಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಈ ಸತ್ಯ ಗೊತ್ತಾದ ಮೇಲೆ ಅನೇಕ ಶಕ್ತಿಗಳು ಒಂದಾಗಿ ಬಿಜೆಪಿಯೇತರ ಗುಂಪಿನಲ್ಲಿ ಗುರುತಿಸಿಕೊಳ್ಳುತ್ತಿವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...