ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬ ಸ್ಥಿತಿಯಲ್ಲಿ ವಿಪಕ್ಷಗಳು: ಕಾಂಗ್ರೆಸ್‌ ಲೇವಡಿ

Date:

”ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ ಸ್ಥಿತಿಯಲ್ಲಿರುವ ವಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ” ಎಂದು ಪ್ರತಿಪಕ್ಷಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಬಿಜೆಪಿ ಮತ್ತು ಜೆಡಿಎಸ್​ ವಿರುದ್ಧ ಕಾಂಗ್ರೆಸ್​ ಟ್ವೀಟ್ ಮಾಡಿದ್ದು, “ಕನ್ನಡಿಗರು ಭರವಸೆಯಿಟ್ಟು ಗೆಲ್ಲಿಸಿದ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಜನರೇ ದಂಗೆ ಏಳಲಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

“ಕನ್ನಡಿಗರು ಅತೀವ ಭರವಸೆಯನ್ನಿಟ್ಟು ಗೆಲ್ಲಿಸಿದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರೆ ಜನರೇ ದಂಗೆ ಏಳುತ್ತಾರೆ. ಈಗ ಸಿಂಗಾಪುರಕ್ಕೆ ಹೋದವರು ನಂತರ ಮಂಗಾಪುರಕ್ಕೆ ಓಡುವ ಸ್ಥಿತಿ ಉಂಟಾಗಲಿದೆ. ಪದೇಪದೆ ಪ್ರಜಾಪ್ರಭುತ್ವದ ಆಶಯಗಳ ವಿರುದ್ಧ ಕೆಲಸ ಮಾಡುವ ಬಿಜೆಪಿ ಈಗಲಾದರೂ ಜನರ ತೀರ್ಪನ್ನು ಗೌರವಿಸುವುದನ್ನು ಕಲಿಯಲಿ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಡಿಎಸ್ ನಾಯಕರು ಬಿಜೆಪಿಯ ಲೆಟರ್ ಹೆಡ್ ಮೇಲೆ ಸಹಿ ಮಾಡಿ ತಮ್ಮದು ಅಡ್ರೆಸ್ ಇಲ್ಲದ ಪಕ್ಷ ಎಂದು ಸಾಬೀತು ಮಾಡಿದ್ದರು. ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿಯವರು ಜೆಡಿಎಸ್ ಕಚೇರಿಗೆ ತೆರಳಿ, ಪತ್ರಿಕಾಗೋಷ್ಠಿಗೆ ಜೆಡಿಎಸ್ ನೆರವು ಪಡೆದು ತಮಗೆ ದಮ್ಮು, ತಾಕತ್ತು ಇಲ್ಲ ಎಂದು ಸಾಬೀತು ಮಾಡಿದ್ದರು. ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ ಸ್ಥಿತಿಯಲ್ಲಿರುವ ವಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ” ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

“ಜೆಡಿಎಸ್​ ನಾಯಕ ಎಚ್​​ಡಿ ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ತೆರಳಿದ್ದು, ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡುತ್ತಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇತ್ತೀಚೆಗೆ ದೂರಿದ್ದರು. ಈ ಮಧ್ಯೆ, ಕಾಂಗ್ರೆಸ್​ ಎಂಎಲ್​ಸಿ ಬಿ ಕೆ ಹರಿಪ್ರಸಾದ್ ಅವರು ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನದ ಧಾಟಿಯಲ್ಲಿ ಮಾತನಾಡಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಈ ಸುದ್ದಿ ಓದಿದ್ದೀರಾ? ಸಿ ಟಿ ರವಿ ರಾಜ್ಯಾಧ್ಯಕ್ಷ, ಯತ್ನಾಳ್‌ ವಿಪಕ್ಷ ನಾಯಕ ಎಂದು ಸುಳಿವು ನೀಡಿದ ಎಚ್‌ ಡಿ ದೇವೇಗೌಡ

ಕಾಂಗ್ರೆಸ್​​ ಟೀಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ಬಿ ಕೆ ಹರಿಪ್ರಸಾದ್ ಅವರ ಹೇಳಿಕೆಯಿಂದ ಜನರ ಗಮನ ಬೇರೆಡೆ ಸೆಳೆಯುವ ಸಲುವಾಗಿ ಡಿ ಕೆ ಶಿವಕುಮಾರ್ ಅವರು ಸಿಂಗಾಪುರದ ಕಥೆಕಟ್ಟಿದ್ದಾರೆ ಎಂದು ಹೇಳಿದ್ದರು. ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ ಅವರು, ಕಾಂಗ್ರೆಸ್‌ನಲ್ಲಿ ಮೂಲ ಮತ್ತು ವಲಸಿಗರ ನಡುವೆ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯ ಸರ್ಕಾರವನ್ನು ನಾವ್ಯಾರು ಕಡವುವ ಅಗತ್ಯವಿಲ್ಲ. ತಾನಾಗಿಯೇ ಬೀಳಲಿದೆ ಎಂಬ ದಾಟಿಯಲ್ಲಿ ಹೇಳಿಕೆ ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...