ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ‌, ಜನ ಜಾಗೃತರಾಗಲಿ: ಡಿ ಕೆ ಶಿವಕುಮಾರ್

Date:

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಹೀಗಾಗಿ ಜನರು ಜಾಗೃತರಾಗಿರಬೇಕು ಎಂದು ದೇವೇಗೌಡರು ಸಂದೇಶ ನೀಡಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರು ‘ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ನಿಲ್ಲಲಿದೆ’ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ. ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವು ಗೃಹಲಕ್ಷ್ಮಿ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿದೆ. ಜನ ಹುಷಾರಾಗಿರಬೇಕು” ಎಂದು ತಿಳಿಸಿದರು.

ಮೂರಕ್ಕೆ ಮೂರು ಕ್ಷೇತ್ರ ಗೆಲ್ಲುತ್ತೇವೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪಚುನಾವಣೆ ತಯಾರಿ ಬಗ್ಗೆ ಕೇಳಿದಾಗ, “ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದು, ಈ ಬಾರಿ ಉಪಚುನಾವನೇಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಮೂರು ಕ್ಷೇತ್ರಗಲ್ಲಿ ಪ್ರಚಾರ ಮುಗಿಸಿದ್ದೇವೆ. ಬಿಜೆಪಿ ಏನೇ ತಂತ್ರ ಪ್ರಯೋಗಿಸಿದರೂ ಜನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದಂತೆ ಈ ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಮತ ಹಾಕಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿಗಳ ದಾರಿತಪ್ಪಿಸಿದ್ದಾರೆ

ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ವಸೂಲಿ ಬಗ್ಗೆ ಪ್ರಧಾನಿಗಳ ಆರೋಪದ ಬಗ್ಗೆ ಕೇಳಿದಾಗ, “ಇದು ಸುಳ್ಳು ಆರೋಪ, ಅವರನ್ನು ಯಾರೋ ದಾರಿತಪ್ಪಿಸಿದ್ದಾರೆ. ಈ ವಿಚಾರವಾಗಿ ಆರೋಪ ಸಾಬೀತುಪಡಿಸಿದರೆ ರಾಜಕೀಯ ತ್ಯಜಿಸುವುದಾಗಿ ಮುಖ್ಯಮಂತ್ರಿಗಳು ಬಹಿರಂಗ ಸವಾಲು ಹಾಕಿದ್ದಾರೆ. ಇದಕ್ಕಿಂತ ಬೇರೇನು ಬೇಕು?” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋವಿಡ್‌ ದುರಂತದಲ್ಲೂ ʼಹೆಣದ ಮೇಲೆ ಹಣʼ ಎತ್ತಿದವರ ಅಮಾನವೀಯತೆ

ದ್ವೇಷ ರಾಜಕಾರಣ ಮಾಡುತ್ತಿರುವುದು ಬಿಜೆಪಿ

ಕೋವಿಡ್ ಅಕ್ರಮ ವಿಚಾರದಲ್ಲಿ ನ್ಯಾ.ಕುನ್ಹಾ ಅವರ ಸಮಿತಿ ಸರ್ಕಾರದ ಏಜೆಂಟ್ ರಂತೆ ನಡೆದುಕೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ಪರವಾಗಿ ವರದಿ ಕೊಟ್ಟರೆ ಎಲ್ಲವೂ ನ್ಯಾಯಬದ್ಧವಾಗಿರುತ್ತವೆ. ಅವರ ವಿರುದ್ಧವಾಗಿ ನೀಡುವ ವರದಿ ಬಗ್ಗೆ ಹೀಗೆ ಆರೋಪ ಮಾಡುತ್ತಾರೆ. ದ್ವೇಷ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ಅವರು ಯಾವುದೇ ಆರೋಪ ಮಾಡಿಕೊಳ್ಳಲಿ” ಎಂದು ಕಿಡಿಕಾರಿದರು.

ವಯನಾಡಿನಲ್ಲಿ ಪ್ರಿಯಾಂಕಾ ಗೆಲವು

ವಯನಾಡಿನ ಉಪಚುನಾವಣೆ ಬಗ್ಗೆ ಕೇಳಿದಾಗ, “ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಗೆಲ್ಲುವುದು ನಿಶ್ಚಿತ. ಅಲ್ಲಿ ಬೇರೆ ಪಕ್ಷಗಳ ನಾಯಕರು ಕೂಡ ಪ್ರಿಯಾಂಕಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಪ್ರಿಯಾಂಕಾ ಅವರನ್ನು ಸಂಸತ್ ಸದಸ್ಯೆಯಾಗಿ ನೋಡಲು ಬಯಸಿದ್ದಾರೆ. ಅವರು ಹಾಗೂ ರಾಹುಲ್ ಗಾಂಧಿ ಅವರು ಕ್ಷೇತ್ರದ ಅಭಿವೃದ್ಧಿ ಮಾಡಲಿದ್ದಾರೆ. ಅಲ್ಲಿನ ಉಪಚುನಾವಣೆ ಏಕಪಕ್ಷೀಯ ಸ್ಪರ್ಧೆಯಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...