ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿ ವೈ ವಿಜಯೇಂದ್ರ

Date:

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, 2006ರಲ್ಲಿ ಸಹ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ಆಗಿತ್ತು. ಆದರೆ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಜೀ ಅವರ ಸಮ್ಮತಿ ಇರಲಿಲ್ಲ” ಎಂದು ನೆನಪಿಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಜೊತೆಗೇ ದೇವೇಗೌಡ ಅವರೂ ಈ ಬಾರಿ ಮೈತ್ರಿಗೆ ಆಶೀರ್ವಾದ ಮಾಡಿದ್ದಾರೆ. ಮೋದಿ ಅವರ ದೇಶದ ಅಭಿವೃದ್ಧಿ, ಭದ್ರತೆ ದೃಷ್ಟಿಯಿಂದ ನಮಗೆ ದೇವೇಗೌಡರು ಆಶೀರ್ವಾದ ಮಾಡಿದ್ದು, ಇದರಿಂದ ಆನೆ ಬಲ ಬಂದಂತಾಗಿದೆ. ರಾಜ್ಯಕ್ಕೂ ಮುಂದಿನ ದಿನಗಳಲ್ಲಿ ಒಳಿತಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಮತ್ತು ಜೆಡಿಎಸ್ ಜೊತೆಗೂಡಿ ಕೆಲಸ ಮಾಡಲು ಒಪ್ಪಿಕೊಂಡು ಹಲವು ತಿಂಗಳೇ ಕಳೆದಿದೆ. ನಾನು ಕೂಡ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆಗೆ ಮೈಸೂರು- ಕೊಡಗು, ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಜಂಟಿ ಪ್ರವಾಸ ಮಾಡಿದ್ದೇನೆ. ಇದರ ಪರಿಣಾಮವಾಗಿ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ತಲುಪಿದೆ. ಕರ್ನಾಟಕದಲ್ಲಿ ಸಾಕಷ್ಟು ಹೊಂದಾಣಿಕೆ ರಾಜಕಾರಣ ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್, ಜೆಡಿಎಸ್-ಕಾಂಗ್ರೆಸ್ ನಡುವೆ ಹಲವಾರು ಬಾರಿ ಹೊಂದಾಣಿಕೆ ಆಗಿದೆ. ಆದರೆ, ಈಗ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಗೆ ರಾಜ್ಯದ ಪ್ರಜ್ಞಾವಂತ ಮತದಾರರು ಸಂಪೂರ್ಣ ಆಶೀರ್ವಾದ ಕೊಡುತ್ತಿದ್ದಾರೆ” ಎಂದರು.

“ಮೈಸೂರು, ಮಂಡ್ಯದಲ್ಲಿ ಕಾರ್ಯಕರ್ತರ ಉತ್ಸಾಹ ಗಮನಿಸಿದ್ದೇನೆ. ತಳಮಟ್ಟದಲ್ಲೂ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನುಡಿದ ಅವರು, ಈ ಚುನಾವಣೆಯಲ್ಲಿ ಎರಡೂ ಪಕ್ಷಗಳ ಮುಖಂಡರ ಜವಾಬ್ದಾರಿ ಹೆಚ್ಚಾಗಿದೆ. ಈ ಸಮ್ಮಿಲನವನ್ನು ಜನರು ಗಂಭೀರವಾಗಿ ಪರಿಗಣಿಸಿದ್ದಾರೆ. ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ವಿಶ್ವಾಸದಿಂದ ದುಡಿದು ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ನಮ್ಮಲ್ಲಿನ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ: ಎಚ್‍ಡಿಕೆ

“ಬಿಜೆಪಿ ಸ್ನೇಹಿತರು ನಮ್ಮನ್ನು ಆತ್ಮೀಯವಾಗಿ ಕಂಡಿದ್ದಾರೆ. 2006ರಲ್ಲಿ ಅನಿವಾರ್ಯ ಕಾರಣಗಳಿಂದ ಮೈತ್ರಿ ಸರಕಾರ ದೀರ್ಘ ಕಾಲ ಮುಂದುವರೆಯಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಬಳಿಕ 2018ರಲ್ಲಿ ನಾವು- ನೀವು ಮೈತ್ರಿ ಸರಕಾರ ಮಾಡಿದ್ದರೆ ಇವತ್ತು ಸಹ ನಮ್ಮ ಸರಕಾರವೇ ಇರುತ್ತಿತ್ತೇನೋ? ಈ ಹಿಂದೆ ನಡೆದುದೆಲ್ಲ ವಿಧಿಯ ಆಟಗಳು ಎಂದು ತಿಳಿಯೋಣ. ಇವತ್ತು ಕಳೆದ ವಿಧಾನಸಭೆ ಚುನಾವಣೆ ಬಳಿಕ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಸ್ವಲ್ಪ ನಿರಾಶೆ ಉಂಟಾಗಿದೆ. ಯಾಕೆ ಹೀಗಾಗಿದೆ? ನಮ್ಮಲ್ಲಿನ ಒಳಜಗಳ, ವಿಶ್ವಾಸದ ಕೊರತೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂತು” ಎಂದರು.

“ಬಿಜೆಪಿ ಶಕ್ತಿ ವೃದ್ಧಿ, ಪ್ರಧಾನಿಯವರ ನಿಸ್ವಾರ್ಥ ಸೇವೆ, ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯನ್ನು ಹಾಕುವ ದೃಷ್ಟಿಯಿಂದ ಹಿರಿಯ ನಾಯಕ ಅಮಿತ್ ಶಾ ಅವರ ಆಹ್ವಾನದ ಮೇರೆಗೆ ಅವರನ್ನು ಭೇಟಿ ಮಾಡಿದೆ. ಬಳಿಕ ಪರಸ್ಪರ ಮೈತ್ರಿಯ ಹೊಂದಾಣಿಕೆ ಆಗಿದೆ” ಎಂದು ತಿಳಿಸಿದರು.

“ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಲೋಕಸಭಾ ಚುನಾವಣೆಯ ರಾಜ್ಯ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯದ ಮಾಜಿ ಸಚಿವ ಜಿ.ಟಿ. ದೇವೇಗೌಡ, ಎರಡೂ ಪಕ್ಷಗಳ ಆಹ್ವಾನಿತ ಮುಖಂಡರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...