ಶಾಸಕರಿಗೆ ಬಜೆಟ್‍ನಲ್ಲೇ ಹೆಚ್ಚುವರಿ ಅನುದಾನಕ್ಕೆ ಸಿಎಂಗೆ ಬಿಜೆಪಿ- ಜೆಡಿಎಸ್ ಶಾಸಕರ ಮನವಿ

Date:

ರಾಜ್ಯದ 2025-26ರ ಬಜೆಟ್‍ನಲ್ಲಿ ಪ್ರತಿ ಶಾಸಕರ ವಿಧಾನಸಭಾ ಮತ ಕ್ಷೇತ್ರಗಳಿಗೆ ಶಾಸಕರ ಕ್ಷೇತ್ರಾಭಿವೃದ್ಧಿಗೆ ಈಗಿರುವ ಅನುದಾನಕ್ಕೆ 5 ಕೋಟಿ ಹೆಚ್ಚುವರಿಯಾಗಿ ಸೇರಿಸಿ ಪ್ರಕಟಿಸುವಂತೆ ಬಿಜೆಪಿ- ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಬಿಜೆಪಿ- ಜೆಡಿಎಸ್ ಶಾಸಕರ ನಿಯೋಗವು ಭೇಟಿ ಮಾಡಿ ಈ ಕುರಿತ ಮನವಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್ ಅವರು ಸಹಿ ಮಾಡಿದ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

ಹೆಚ್ಚುವರಿ ಅನುದಾನವನ್ನು ನಾಳೆ ಮಂಡಿಸುವ ರಾಜ್ಯದ 2025-26ರ ಆಯವ್ಯಯ ಪತ್ರದಲ್ಲಿ ಘೋಷಿಸುವಂತೆ ಮನವಿ ಮಾಡಿದ್ದಾರೆ. ನಮ್ಮೆಲ್ಲರ ಈ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಸೌಕರ್ಯದ ನಿರ್ಮಾಣ ಕಾರ್ಯಗಳಿಗೆ, ರಸ್ತೆ ನಿರ್ಮಾಣ, ಮೂಲಭೂತ ಅಭಿವೃದ್ಧಿ ಸೌಕರ್ಯಗಳಿಗೆ ಎಂದು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಇದೇ ಬಜೆಟ್‍ನಲ್ಲಿ ಘೋಷಿಸಿ ಒದಗಿಸಬೇಕೆಂದು ವಿನಂತಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...