ಬಿಜೆಪಿ, ಜೆಡಿಎಸ್‌ ಪಾದಯಾತ್ರೆ, ಇದೇ ಅವರ ಕೊನೆ ಯಾತ್ರೆ: ಮಂಜುನಾಥ ಭಂಡಾರಿ ಲೇವಡಿ

Date:

ಬಿಜೆಪಿಯವರ ಯಾತ್ರೆ ಹಾದಿ ತಪ್ಪಿದೆ. ಅವರು, ರಾಜ್ಯದ ಜನರಿಗೆ ಸೌಲಭ್ಯ ಕಲ್ಪಿಸಲು ದೆಹಲಿಗೆ ಯಾತ್ರೆ ಮಾಡಬೇಕಿತ್ತು. ಅದು ಬಿಟ್ಟು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ವಿರುದ್ಧ ಪಾದಯಾತ್ರೆ ಮಾಡಲು ಹೊರಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ತಮ್ಮ 21 ಹಗರಣಗಳು ಬಯಲಾಗುವ ಭಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷದವರು ಪಾದಯಾತ್ರೆಯ ನಾಟಕ ಆರಂಭಿಸಿ, ಜನರ ದಾರಿ ತಪ್ಪಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಅನುದಾನ ಕೊಟ್ಟಿಲ್ಲ. ಬಜೆಟ್ ಮೇಲೆ ಭಾಷಣ ನಡೆಯುತ್ತಿದ್ದರೂ ರಾಜ್ಯದ ಮೈತ್ರಿ ನಾಯಕರು ಅಲ್ಲಿ ಈ ಬಗ್ಗೆ ಧ್ವನಿ ಎತ್ತಿಲ್ಲ. ಜಿಎಸ್‌ಟಿ ಪಾಲನ್ನು ಕೇಂದ್ರ ರಾಜ್ಯಕ್ಕೆ ಸಮರ್ಪಕವಾಗಿ ನೀಡಿಲ್ಲ. ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಭಟನೆ ಮಾಡಬೇಕಿದ್ದವರು, ಅದಕ್ಕಾಗಿ ಕೊಡಿಸಲು ದೆಹಲಿ ಚಲೋ ಮಾಡಬೇಕಿದ್ದವರು, ಪ್ರಚಾರಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ” ಎಂದು ಮಂಜುನಾಥ ಭಂಡಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಕರಣಕ್ಕೋಸ್ಕರ ಮೈಸೂರು ಚಲೋ ಬದಲು, ಅದನ್ನು ರದ್ದು ಮಾಡಿ ರಾಜ್ಯದ ಜನರಿಗೋಸ್ಕರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ದೆಹಲಿ ಚಲೋ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದಿದ್ದಾರೆ.

ಕೊನೆಯ ಯಾತ್ರೆಯಾಗುತ್ತೆ

“ಈ ಹಿಂದೆ ಬಿಜೆಪಿಯವರು ವಿಪರೀತ ಭ್ರಷ್ಟಾಚಾರ ಮಾಡಿದ್ದಕ್ಕೆ, ರಾಜ್ಯದ ಜನರಿಗೆ ಅನ್ಯಾಯ ಮಾಡಿದ್ದಕ್ಕೆ, ಮತದಾರರಿಗೆ ಮೋಸ ಮಾಡಿದ್ದಕ್ಕೆ, ಸುಳ್ಳು ಹೇಳಿ ರಾಜ್ಯದ ಮಾನ ಹರಾಜು ಹಾಕಿದ್ದಕ್ಕೆ‌, ರಾಜ್ಯದ ಹೆಸರಿಗೆ ಕಪ್ಪು ಮಸಿ ಬಳಿಯಲು ಯತ್ನಿಸಿದ್ದಕ್ಕೆ ರಾಜ್ಯದ ಜನರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದರು. 136 ಸೀಟುಗಳನ್ನು ಕಾಂಗ್ರೆಸ್ ಗೆ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಚಾರ್ ಸೌ ಪಾರ್ ಎನ್ನುತ್ತಿದ್ದವರಿಗೆ 240 ಕ್ಕೆ ಸೀಮಿತಗೊಳಿಸಿದರು. ಇದು ಇವರ ಕೊನೆಯ ಯಾತ್ರೆಯಾಗಲಿದೆ” ಎಂದು ಮಂಜುನಾಥ ಭಂಡಾರಿ ಭವಿಷ್ಯ ನುಡಿದಿದ್ದಾರೆ.

ಕಾವಲು ನಾಯಿಗಳಾಗಬೇಕಿದ್ದವರು ಕಚ್ಚಾಡುತ್ತಿದ್ದಾರೆ

“ಬಿಜೆಪಿಯವರಲ್ಲೇ ಸಾಮರಸ್ಯವಿಲ್ಲ. ವಿರೋಧ ಪಕ್ಷವಾಗಿ ಪ್ರಜಾಪ್ರಭುತ್ವದ ಕಾವಲು ನಾಯಿಯಾಗಬೇಕಿದ್ದವರು. ಕವಲು ದಾರಿಯಲ್ಲಿ ಹೋಗುತ್ತಿದ್ದಾರೆ. ಕಚ್ಚಾಡುತ್ತಿದ್ದಾರೆ. ಒಂದೆಡೆ ಮೈಸೂರಿಗೆ ಪಾದಯಾತ್ರೆ ಮಾಡುತ್ತೇವೆ ಎಂದಿದ್ದರೆ, ಬಸವಕಲ್ಯಾಣದಿಂದ ಬಳ್ಳಾರಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ಇನ್ನೊಂದಿಷ್ಟು ನಾಯಕರು ಹೇಳುತ್ತಿದ್ದಾರೆ. ಇವರ ಅಸ್ತಿತ್ವ ನಾಯಕತ್ವ ಪೈಪೋಟಿಗಾಗಿ ನಡೆಯುತ್ತಿರುವ ಯಾತ್ರೆ ಇದಾಗಿದೆ. ಮೊನ್ನೆ ನಡೆದ ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಶಾಸಕರು ಪಾಲ್ಗೊಂಡಿಲ್ಲ.‌ ಜಿ.ಟಿ.ದೇವೆಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...