ಬಿಜೆಪಿ-ಜೆಡಿಎಸ್ ಹಾಲು-ಜೇನಿನಂತೆ ಒಂದಾಗಿದ್ದು, ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ: ಯಡಿಯೂರಪ್ಪ

Date:

“ಜಾತಿ ವಿಷ ಬೀಜ ಬಿತ್ತಿ ಮತ ಪಡೆಯುವ ಕಾಂಗ್ರೆಸ್ ತಂತ್ರ ಇನ್ಮುಂದೆ ನಡೆಯಲ್ಲ. ಈಗಾಗಲೇ ಬಿಜೆಪಿ-ಜೆಡಿಎಸ್ ರಾಜ್ಯದಲ್ಲಿ ಹಾಲು ಜೇನಿನಂತೆ ಒಂದಾಗಿದ್ದು, ಕೂಡಿ ಕೆಲಸ ಮಾಡುತ್ತಿದ್ದೇವೆ, ನಮ್ಮನ್ನು ಬೇರ್ಪಡಿಸಲು ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ” ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.

ಚಿತ್ರದುರ್ಗದಲ್ಲಿ ಮಂಗಳವಾರ ಆಯೋಜಿಸಿದ್ದ ವೀರಶೈವ ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, “ವಾತಾವರಣ ನಮಗೆ ತುಂಬಾ ಅನುಕೂಲಕರವಾಗಿದ್ದು, ಎಲ್ಲೆಡೆ ಮೋದಿ ಮೋದಿ ಘೋಷಣೆ ಕೇಳುತ್ತಿದೆ. ದೇವೇಗೌಡರು ಸಹ ರಾಜ್ಯದಲ್ಲಿ ಸಂಚರಿಸಿ ಮತಯಾಚನೆ‌ ಮಾಡುತ್ತಿದ್ದಾರೆ. ಕಾರಜೋಳ 2 ಲಕ್ಷ‌ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ. ನನಗೀಗ 82ವರ್ಷ. ದೇವರು ಶಕ್ತಿ‌ಕೊಟ್ಟರೆ ಇನ್ನೊಂದು ವಿಧಾನಸಭೆ, ಲೋಕಸಭೆ ಚುನಾವಣೆ ಮಾಡುತ್ತೇನೆ” ಎಂದರು.

“ಭದ್ರಾ ಯೋಜನೆಗೆ ರೂ. 5,300ಕೋಟಿ  ಈವತ್ತಲ್ಲ‌, ನಾಳೆ ಬರಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ತಡವಾಗಿರಬಹುದು. ಮೋದಿ, ಅಮಿತ್ ಶಾ ಜೊತೆ ಮಾತಾಡಿ ಶೀಘ್ರ ಅನುದಾನ ತರುತ್ತೇವೆ” ಎಂದು ತಿಳಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಿಸಾನ್ ಸಮ್ಮಾನ್ ಯೋಜನೆ ಅಡಿ 4ಸಾವಿರ ರೂ.‌ಕೊಡುವುದನ್ನು ಸಿದ್ಧರಾಮಯ್ಯ ಸರ್ಕಾರ ನಿಲ್ಲಿಸಿದೆ. ಇದಷ್ಟೇ ಅಲ್ಲ, ದುಡ್ಡಿಲ್ಲದೆ ಕಾಂಗ್ರೆಸ್ ಸರ್ಕಾರ ಭಾಗ್ಯ ಲಕ್ಷ್ಮಿ ಯೋಜನೆ, ಹಾಲು ಉತ್ಪಾದನೆ ಪ್ರೋತ್ಸಾಹ ಧನ ಸೇರಿದಂತೆ ಹಲವು ಯೋಜನೆ ನಿಲ್ಲಿಸಿದೆ” ಎಂದು ವಾಗ್ದಾಳಿ ನಡೆಸಿದರು.

“ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಅವರನ್ನು ಗೆಲ್ಲಿಸಿದರೆ ನನ್ನನ್ನು ಗೆಲ್ಲಿಸಿದಂತೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ತಮ್ಮ ಪ್ರಧಾನಿ ಅಭ್ಯರ್ಥಿ ಯಾರೆಂದು ಕಾಂಗ್ರೆಸ್ ಹೇಳಲಿ. ಮೋದಿ ಎದುರು ಮತ್ತೊಂದು ಹೆಸರು ಹೇಳುವ ಧೈರ್ಯ ‌ಅವರಿಗಿಲ್ಲ” ಎಂದು ಹೇಳಿದರು.

ಬೇಡ ಎಂದರೂ ಸ್ಪರ್ಧೆ

ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, “20ವರ್ಷದಿಂದ ನನ್ನನ್ನು ಒಡಹುಟ್ಟಿದ ಸಹೋದರನಂತೆ ಬಿಎಸ್‌ವೈ ಕಂಡಿದ್ದಾರೆ. ನಾನು ಈ ಮಟ್ಟಕ್ಕೆ ಬೆಳೆಯಲು ಯಡಿಯೂರಪ್ಪ ಕಾರಣ. ನಾನು ಬೇಡ ಅಂದರೂ ಬಿಎಸ್‌ವೈ ಮತ್ತು ವರಿಷ್ಠರು ಸ್ಪರ್ಧೆಗಿಳಿಸಿದ್ದಾರೆ. ಯಾವ ಜನ್ಮದ ಋಣಾನುಬಂಧವೋ ಗೊತ್ತಿಲ್ಲ. ಬಸವಣ್ಣನ ನಾಡಿನಲ್ಲಿ ಹುಟ್ಟಿ‌ ಚಿತ್ರದುರ್ಗಕ್ಕೆ ಬಂದಿದ್ದೇನೆ. ಈ ಕ್ಷೇತ್ರದ ಜನರ ಋಣ ನನ್ನ ಮೇಲಿದೆ, ಆ ಋಣ ತೀರಿಸಲು ಭಗವಂತ ಅವಕಾಶ ನೀಡಿದ್ದಾನೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...