ವಿರೋಧ ಪಕ್ಷವು ವಿಫಲವಾಗಿರುವ ಕಾರಣ ಬಿಜೆಪಿ ಗೆಲ್ಲುತ್ತಲೇ ಇದೆ: ಅಸಾದುದ್ದೀನ್ ಓವೈಸಿ

Date:

ವಿರೋಧ ಪಕ್ಷವು ವಿಫಲವಾಗಿದೆ. ಹೀಗಾಗಿ ಹಿಂದೂ ಮತಗಳನ್ನು ಕ್ರೋಢೀಕರಿಸಿಕೊಂಡು ಬಿಜೆಪಿ ನಿರಂತರವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಹಾಗೆಯೇ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷ ಮೋದಿ ವಿರೋಧಿ ಮತಗಳನ್ನು ವಿಭಜಿಸುತ್ತದೆ ಎಂಬ ವಾದವನ್ನು ತಿರಸ್ಕರಿಸಿದರು.

ಈ ಬಗ್ಗೆ ಪಿಟಿಐ ಸಂದರ್ಶನದಲ್ಲಿ ಮಾತನಾಡಿದ ಅವರು, “ನೀವು ನನ್ನ ಮೇಲೆ ಹೇಗೆ ಆರೋಪ ಹೊರಿಸಬಹುದು ಎಂದು ಹೇಳಿ? ನಾನು 2024ರ ಸಂಸತ್ ಚುನಾವಣೆಯಲ್ಲಿ ಹೈದರಾಬಾದ್, ಔರಂಗಾಬಾದ್, ಕಿಶನ್‌ಗಂಜ್ ಮತ್ತು ಇತರ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಬಿಜೆಪಿ 240 ಸ್ಥಾನಗಳನ್ನು ಪಡೆದಿದೆ. ಇದಕ್ಕೆ ನಾನು ಜವಾಬ್ದಾರನಾಗುತ್ತೇನೆಯೇ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ದೆಹಲಿ | ಅಸಾದುದ್ದೀನ್ ಒವೈಸಿ ಮನೆ ಮೇಲೆ ಕಪ್ಪು ಮಸಿ ಎಸೆದ ದುಷ್ಕರ್ಮಿಗಳು; ‘ಹೆದರಲ್ಲ’ ಎಂದ ಸಂಸದ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿರೋಧ ಪಕ್ಷವು ವಿಫಲವಾಗಿರುವ ಕಾರಣದಿಂದಾಗಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಬಿಜೆಪಿ ಸುಮಾರು ಶೇಕಡ 50ರಷ್ಟು ಹಿಂದೂ ಮತಗಳನ್ನು ಕ್ರೋಢೀಕರಿಸಿಕೊಂಡು ಚುನಾವಣೆಗಳಲ್ಲಿ ಗೆಲ್ಲುತ್ತಿದೆ. ಬಿಜೆಪಿ ಗೆಲುವಿಗೆ ನಮ್ಮನ್ನು ದೂಷಿಸುವುದು. ನಮ್ಮನ್ನು ಬಿಜೆಪಿಯ ಬಿ-ಟೀಮ್ ಎಂದು ಕರೆಯುವುದು ವಿಪಕ್ಷದ ದ್ವೇಷದ ಪ್ರತೀಕವೇ ಹೊರತು ಬೇರೇನಿಲ್ಲ. ನಮಗೆ ಹೆಚ್ಚಾಗಿ ಮುಸ್ಲಿಮರ ಮತ ಸಿಗುತ್ತದೆ ಎಂಬ ಸಿಟ್ಟು ಅವರಲ್ಲಿದೆ” ಎಂದು ಓವೈಸಿ ದೂರಿದರು.

AIMIM ಅನ್ನು ಭದ್ರಕೋಟೆಯಾದ ಹೈದರಾಬಾದ್‌ ಮಾತ್ರವಲ್ಲದೇ ಇತರೆ ಕಡೆಯೂ ಬೆಳೆಸಲು ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಅಪಹಾಸ್ಯ ಮಾಡಿವೆ. ಓವೈಸಿ ಬಿಜೆಪಿ ವಿರೋಧಿ ಮುಸ್ಲಿಮರ ಮತಗಳನ್ನು ಕಸಿದು ಕೊನೆಗೆ ಬಿಜೆಪಿಗೆ ಲಾಭ ಮಾಡಿಕೊಡುತ್ತದೆ ಎಂಬುದು ವಿಪಕ್ಷಗಳ ಅಭಿಪ್ರಾಯವಾಗಿದೆ. ಈ ವಾದವನ್ನು ಓವೈಸಿ ತಿರಸ್ಕರಿಸಿದ್ದಾರೆ.

“ಸಮಾಜದ ಪ್ರತಿಯೊಂದು ವಿಭಾಗವು ರಾಜಕೀಯ ನಾಯಕತ್ವವನ್ನು ಹೊಂದಿರುವಾಗ ಅದು ನಿಮಗೆ ಒಪ್ಪಿಗೆಯಾಗುತ್ತದೆ. ಆದರೆ ಮುಸ್ಲಿಮರು ತಮ್ಮ ರಾಜಕೀಯ ಧ್ವನಿಯನ್ನು ಎತ್ತುವ, ರಾಜಕೀಯ ನಾಯಕತ್ವವನ್ನು ಹೊಂದಿರಬೇಕು ಎಂಬುದನ್ನು ನೀವು ಬಯಸುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ. ಕಾಂಗ್ರೆಸ್ ಅನ್ನು ಉಲ್ಲೇಖಿಸಿ ನೀವು ಈ ಹೇಳಿಕೆ ನೀಡುತ್ತಿದ್ದೀರಾ ಎಂಬ ಸಂದರ್ಶಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಓವೈಸಿ, ಬಿಎಸ್‌ಪಿ, ಎಸ್‌ಪಿ ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳನ್ನು ಉಲ್ಲೇಖಿಸುತ್ತಿರುವುದಾಗಿ ಹೇಳಿದ್ದಾರೆ.

“ಯಾದವ ಒಬ್ಬ ನಾಯಕನಾಗುತ್ತಾನೆ, ಮುಸಲ್ಮಾನ ಭಿಕ್ಷುಕನಾಗುತ್ತಾನೆ. ಮೇಲ್ಜಾತಿಯ ಒಬ್ಬ ನಾಯಕನಾಗುತ್ತಾನೆ, ಮುಸಲ್ಮಾನ ಭಿಕ್ಷುಕನಾಗುತ್ತಾನೆ. ಅದು ಎಷ್ಟು ನ್ಯಾಯ, ಹೇಳಿ” ಎಂದು ಓವೈಸಿ ಪ್ರಶ್ನಿಸಿದರು.

“ಭಾರತದ ಸಮಗ್ರತೆ ಮತ್ತು ಭದ್ರತೆಯ ಪ್ರಶ್ನೆ ಬಂದಾಗ ನಾವು ಮುಂದೆ ಬಂದು ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುತ್ತೇವೆ. ಆದರೆ ನಾವು ನಮ್ಮ ಮನೆಯೊಳಗಿನ ಸಮಸ್ಯೆಗಳ ಬಗ್ಗೆ ಮಾತನಾಡಬೇಕಾಗಿದೆ, ಅಲ್ಲವೇ”ಎಂದು ಕೇಳಿದರು.

“ಸುಮಾರು ಶೇಕಡ 15ರಷ್ಟು ಜನಸಂಖ್ಯೆಯನ್ನು ಹೊಂದಿರುವ ದೇಶದ ಅತಿದೊಡ್ಡ ಅಲ್ಪಸಂಖ್ಯಾತ ಗುಂಪಾಗಿದ್ದರೂ, ಮುಸ್ಲಿಮರು ಶಾಸಕಾಂಗ ಮತ್ತು ಸಂಸತ್ತಿನಲ್ಲಿ ಕೇವಲ ಶೇಕಡ 4ರಷ್ಟು ಭಾಗಿತ್ವವನ್ನು ಹೊಂದಿದ್ದಾರೆ. ರಾಜಕೀಯ ಪಕ್ಷಗಳು ಮುಸ್ಲಿಮರಿಗೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದಿಲ್ಲ. ಮತ್ತೆ ಜನರು ಮುಸ್ಲಿಮರಿಗೆ ಮತ ಹಾಕುವುದಿಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...