ಮಹಾರಾಷ್ಟ್ರ | ಮತದಾರರಿಗೆ ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ನಾಯಕ; ವಿಡಿಯೋ ವೈರಲ್

Date:

ನವೆಂಬರ್ 20ರಂದು ಬುಧವಾರ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ ನಡೆಯಲಿದೆ. ಅದಕ್ಕೂ ಒಂದು ದಿನ ಮುಂಚೆ (ಮಂಗಳವಾರ) ಮತದಾರರನ್ನು ಪಕ್ಷದತ್ತ ಸೆಳೆಯಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಮತದಾರರಿಗೆ ಹಣ ಹಂಚಿದ್ದಾರೆ ಎಂದು ಬಹುಜನ ವಿಕಾಸ್ ಅಘಾಡಿ (ಬಿವಿಎ) ಆರೋಪಿಸಿದೆ. ಮತದಾರರಿಗೆ ಹಣ ಹಂಚುವಾಗ ವಿನೋದ್ ಅವರು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಬಿವಿಎ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ವಿನೋದ್‌ ಆರೋಪವನ್ನು ನಿರಾಕರಿಸಿದ್ದಾರೆ. ಹಣ ಹಂಚಿಕೆಯ ವಿಡಿಯೋ ವೈರಲ್ ಆಗಿದೆ.

“ವಸಾಯಿ-ವಿರಾರ್ ಕ್ಷೇತ್ರದಲ್ಲಿ ತಾವ್ಡೆ ಹಣ ಹಂಚಿದ್ದಾರೆ. ತಾವ್ಡೆ ಅವರ ಬಳಿಯಿದ್ದ ಬ್ಯಾಗ್‌ನಲ್ಲಿ 15 ಕೋಟಿ ರೂಪಾಯಿ ಹಣವನ್ನು ಮತದಾರರಿಗೆ ವಿತರಿಸಿರುವ ಡೈರಿ ಇತ್ತು. ಅವರು ಕ್ಷೇತ್ರಕ್ಕೆ 5 ಕೋಟಿ ರೂಪಾಯಿ ನಗದು ಜೊತೆ ಬಂದಿದ್ದಾರೆ” ಎಂದು ಬಿವಿಎ ಶಾಸಕ ಹಿತೇಂದ್ರ ಠಾಕೂರ್ ಆರೋಪಿಸಿದ್ದಾರೆ.

ಸೋಮವಾರ ಸಂಜೆ, ಅವರನ್ನು ಬಿವಿಎ ಕಾರ್ಯಕರ್ತರು ತಡೆದು, ಘೇರಾವ್ ಹಾಕಿದ್ದಾರೆ. ಡೈರಿಯನ್ನು ವಶಕ್ಕೆ ಪಡೆದುಕೊಳ್ಳಲು ಯತ್ನಿಸಿದ್ದಾರೆ. ಆದರೆ, ನಲಸೋಪಾರದ ಹಾಲಿ ಶಾಸಕ ಕ್ಷಿತಿಜ್ ಠಾಕೂರ್ ಅವರು ಡೈರಿಯನ್ನು ಕಿತ್ತುಕೊಂಡಿದ್ದಾರೆ. ಇದೆಲ್ಲವೂ ಹೋಟೆಲ್‌ನಲ್ಲಿ ನಡೆದಿದೆ. ಆದರೆ, ಹೋಟೆಲ್‌ ತನ್ನ ಸಿಸಿಟಿವಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲವೆಂದು ಹೇಳಿಕೊಂಡಿದೆ. ಹಣ ವಿತರಣೆಯ ಫೂಟೆಜ್‌ಗಳನ್ನು ಮುಚ್ಚಿಹಾಕಲು ಇಂತಹ ಹೇಳಿಕೆ ನೀಡಿದೆ. ಹೋಟೆಲ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಬಿವಿಎ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ ಬಣ) ಅಧ್ಯಕ್ಷ ಉದ್ಧವ್ ಠಾಕ್ರೆ, ”ನಾನು ತುಳಜಾ ಭವಾನಿ ದೇವಿಯ ದರ್ಶನಕ್ಕಾಗಿ ವಸಾಯಿ-ವಿರಾರ್‌ಗೆ ಬಂದಿದ್ದೆ. ಆಗ ನನ್ನ ಬ್ಯಾಗ್‌ಗಳನ್ನು ಪರಿಶೀಲಿಸಲಾಯಿತು. ಆದರೆ, ಅವುಗಳಲ್ಲಿ ಏನೂ ಸಿಗಲಿಲ್ಲ. ವಿನೋದ್ ತಾವ್ಡೆ ಅವರ ಬ್ಯಾಗ್‌ಗಳಲ್ಲಿ ನಗದು ಪತ್ತೆಯಾಗಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ. ಇದನ್ನೆಲ್ಲ ಯಾರು ಪರಿಶೀಲಿಸಬೇಕಿತ್ತು? ಹಾಗಾಗಿ ಈ ಭ್ರಷ್ಟ ಸರ್ಕಾರ ಬೇಗ ತೊಲಗಬೇಕೆಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ” ಎಂದು ಹೇಳಿದ್ದಾರೆ.

ಆರೋಪಗಳನ್ನು ತಳ್ಳಿಹಾಕಿದ ಬಿಜೆಪಿ, “ಇದು ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಆರೋಪ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ವಿನೋದ್ ತಾವ್ಡೆ ವಾರ್ಡ್ ಮಟ್ಟದಲ್ಲಿ ಹಣ ಹಂಚುತ್ತಾರೆಯೇ? ಇಂತಹ ಆರೋಪಗಳು ಅಸಂಬದ್ಧವಾಗಿವೆ” ಎಂದು ಹೇಳಿದೆ.

ಬಿಜೆಪಿ ನಾಯಕ ಅತುಲ್ ಭಟ್ಕಳ್ಕರ್, “ಸನ್ನಿಹಿತ ಸೋಲನ್ನು ಎದುರಿಸುತ್ತಿರುವ ವಿರೋಧ ಪಕ್ಷಗಳು ಸೃಷ್ಟಿಸಿದ ಸುಳ್ಳು ಆರೋಪಗಳು ಇವು. ಇಂತಹ ಆರೋಪಗಳು ಬಿಜೆಪಿಯ ಪ್ರತಿಷ್ಠೆಯನ್ನು ಕೆಡಿಸುವ ಉದ್ದೇಶಪೂರ್ವಕ ಪ್ರಯತ್ನದ ಭಾಗವಾಗಿವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...