ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ

Date:

ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ. ಎರಡೂವರೆ ವರ್ಷಕ್ಕೆ ಅಧಿಕಾರ ಹಸ್ತಾಂತರವಾಗಬೇಕೆಂದು ಒಪ್ಪಂದವಾದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಲು ಮನಸ್ಸಿಲ್ಲ. ಅದಕ್ಕಾಗಿ ಸಚಿವರನ್ನು ಛೂ ಬಿಟ್ಟಿದ್ದು, ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿದ್ದಾರೆ. ಅದಕ್ಕಾಗಿ ಅವರೀಗ ಹೈಕಮಾಂಡ್‌ ಪಾದದ ಬಳಿ ಕೂತಿದ್ದಾರೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಸಿದ್ಧವಿಲ್ಲ. ಇವೆಲ್ಲದರಿಂದಾಗಿ ಯಾರೂ ಜನರ ಪರವಾಗಿ ಮಾತಾಡುತ್ತಿಲ್ಲ. ಗುತ್ತಿಗೆದಾರರು ದಯಾಮರಣಕ್ಕೆ ಕೋರಿದ್ದರೆ, ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಎಲ್ಲರೂ ಕುರ್ಚಿಗಾಗಿ ಕಾದಾಡುತ್ತಿದ್ದಾರೆ. ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

ಆರ್‌ಎಸ್‌ಎಸ್‌ ಸರಸಂಘಚಾಲಕರಾದ ಮೋಹನ್‌ ಭಾಗವತ್‌ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಟೀಕೆ ಮಾಡುತ್ತಿದ್ದಾರೆ. ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಮಂದಿರ ನಿರ್ಮಾಣ ಎಂದರೆ ಮತ್ತೊಂದು ಸ್ವಾತಂತ್ರ್ಯ ಹೋರಾಟ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ? ಇಂದಿರಾಗಾಂಧಿ ತಂದ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟವೇ ಒಂದು ಸ್ವಾತಂತ್ರ್ಯ ಸಂಗ್ರಾಮ. ಆ ಸಂಗ್ರಾಮದಲ್ಲಿ ಜನಸಂಘದ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್‌ನವರು ಯಾವ ಹೋರಾಟ ಮಾಡಿದ್ದಾರೆ ಎಂದು ತಿಳಿಸಲಿ. ಇಂದಿರಾಗಾಂಧಿಯನ್ನೇ ವಿರೋಧಿಸಿ ಹೋರಾಟ ಮಾಡಿದ ಆರ್‌ಎಸ್‌ಎಸ್‌, ರಾಹುಲ್‌ ಗಾಂಧಿಗೆ ಹೆದರುವುದಿಲ್ಲ ಎಂದರು.

ಕೇಂದ್ರ ಸರ್ಕಾರ ಜನಗಣತಿ ನಡೆಸುತ್ತಿರುವಾಗ ಕಾಂಗ್ರೆಸ್‌ ಸರ್ಕಾರ ಜಾತಿ ಗಣತಿ ವರದಿಯ ಬಗ್ಗೆ ಮಾತಾಡುತ್ತಿದೆ. ಜಾತಿ ಗಣತಿ ವರದಿಯನ್ನು ಬೀದಿಬೀದಿಯಲ್ಲಿ ಜನರು ನೋಡಿದ್ದಾರೆ. ಅದು ಈಗಾಗಲೇ ಬಹಿರಂಗವಾಗಿದೆ. ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿರುವ ವರದಿ ಇದಾಗಿದ್ದು, ಯಾವುದೇ ರಹಸ್ಯ ಉಳಿದಿಲ್ಲ. ಎಲ್ಲರೂ ಒಪ್ಪುವಂತೆ ಜಾತಿ ಗಣತಿ ವರದಿ ತಯಾರಿಸಬೇಕು. ಒಕ್ಕಲಿಗರು ಹಾಗೂ ಲಿಂಗಾಯತರ ಸಂಖ್ಯೆ ಜಾಸ್ತಿ ಬರಬಾರದೆಂಬ ಕಾರಣಕ್ಕೆ ಒಡೆದು ಚೂರು ಮಾಡಲಾಗಿದೆ ಎಂದು ದೂರಿದರು.

ಎಲ್ಲ ಯೋಜನೆಗಳಿಗೆ ಕೇಂದ್ರ ಸರ್ಕಾರದ ಜನಗಣತಿ ವರದಿಯನ್ನು ಮಾನದಂಡವಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ನಡೆಸುವ ಜನಗಣತಿ ವರದಿಯಲ್ಲೇ ಎಲ್ಲ ಜಾತಿಗಳ ಲೆಕ್ಕಾಚಾರ ಕೂಡ ಬರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ಗಣತಿಗೆ ಸಹಕಾರ ನೀಡಬೇಕು. ಅದು ಬಿಟ್ಟು ಪ್ರತ್ಯೇಕವಾಗಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿ ರಾಜಕೀಯ ಮಾಡಬಾರದು. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಡಬಲ್‌ ಗೇಮ್‌ ಆಡುತ್ತಿದ್ದಾರೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...