ಬಿಹಾರದ ಬಿಜೆಪಿ ನಾಯಕರು ಲಾಲು ಪ್ರಸಾದ್‌ಗಿಂತ ಹೆಚ್ಚು ಭ್ರಷ್ಟರು: ಪ್ರಶಾಂತ್ ಕಿಶೋರ್

Date:

ಬಿಹಾರದ ಆರೋಗ್ಯ ಇಲಾಖೆಯಲ್ಲಿ ಗಂಭೀರ ಅಕ್ರಮಗಳು ನಡೆದಿದೆ. ಬಿಹಾರದ ಬಿಜೆಪಿ ನಾಯಕರು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ಗಿಂತ ಅಧಿಕ ಭಷ್ಟರು ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಿಶೋರ್ ಬಿಹಾರದ ಮಾಜಿ ಬಿಜೆಪಿ ಅಧ್ಯಕ್ಷರೂ ಆಗಿರುವ ರಾಜ್ಯ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರ ಮೇಲೆ ನೇರ ವಾಗ್ದಾಳಿ ನಡೆಸಿದರು. ಹಾಗೆಯೇ ಬಿಜೆಪಿ ನಾಯಕ ದಿಲೀಪ್ ಜೈಸ್ವಾಲ್ ಮೇಲೆಯೂ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಜೆಡಿಯು ನೂತನ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕ ಸಾಧ್ಯತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಆರೋಗ್ಯ ಇಲಾಖೆಯು ಸುಮಾರು 28 ಲಕ್ಷ ರೂ. ಬೆಲೆಯ ‘1,200 ಆಂಬ್ಯುಲೆನ್ಸ್‌ಗಳಿಗೆ ಆರ್ಡರ್ ಮಾಡಿದೆ. ಆದರೆ ಇದರ ಬೆಲೆಯು ಒಡಿಶಾ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳು ಪಾವತಿಸುವ ಮೊತ್ತಕ್ಕಿಂತ ಎರಡು ಪಟ್ಟು ಅಧಿಕವಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗದ ಮಧ್ಯೆ, ಪಾಂಡೆ ದೆಹಲಿಯಲ್ಲಿ ತನ್ನ ಪತ್ನಿಯ ಹೆಸರಿನಲ್ಲಿ ಫ್ಲಾಟ್ ಖರೀದಿಸಿದ್ದರು. ಜೈಸ್ವಾಲ್ ಈ ವ್ಯವಹಾರದಲ್ಲಿ ಅವರಿಗೆ ಸಹಾಯ ಮಾಡಿದ್ದರು” ಎಂದು ಪ್ರಶಾಂತ್ ಕಿಶೋರ್ ದೂರಿದ್ದಾರೆ.

“ಜೈಸ್ವಾಲ್ ದೊಡ್ಡ ಪಾಲನ್ನು ಹೊಂದಿರುವ ಕಿಶನ್‌ಗಂಜ್‌ನಲ್ಲಿರುವ ವೈದ್ಯಕೀಯ ಕಾಲೇಜಿಗೆ ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನವನ್ನು ನೀಡುವ ಮೂಲಕ ಪಾಂಡೆ ತಮ್ಮ ಕೃತಜ್ಞತೆಯನ್ನು ತೋರಿಸಿದ್ದಾರೆ. ಜೈಸ್ವಾಲ್ 2019ರ ಆಗಸ್ಟ್ 6ರಂದು ಪಾಂಡೆ ಅವರ ತಂದೆಯ ಖಾತೆಗೆ 25 ಲಕ್ಷ ರೂ.ಗಳನ್ನು ವರ್ಗಾಯಿಸಿದ್ದಾರೆ. ಆ ಹಣವನ್ನು ಆಗಿನ ಆರೋಗ್ಯ ಸಚಿವರ ಪತ್ನಿಯ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಬಳಸಲಾಗಿದೆ. ದೆಹಲಿಯ ದ್ವಾರಕಾದಲ್ಲಿ ಖರೀದಿಸಿದ ಫ್ಲಾಟ್‌ನ ದಾಖಲೆಯಲ್ಲಿ ಜೈಸ್ವಾಲ್ ಸಾಕ್ಷಿಯಾಗಿ ಸಹಿ ಮಾಡಿದ್ದಾರೆ” ಎಂದು ಕಿಶೋರ್ ಆರೋಪಿಸಿದ್ದಾರೆ.

ಪಾಂಡೆ ಜೈಸ್ವಾಲ್ ಅವರಿಂದ ಈ ಮೊತ್ತವನ್ನು ಸಾಲವಾಗಿ ಪಡೆದಿದ್ದರೂ ಸಹ, 2020ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಇದರ ಉಲ್ಲೇಖ ಏಕೆ ಮಾಡಿಲ್ಲ ಎಂದು ಕಿಶೋರ್ ಪ್ರಶ್ನಿಸಿದರು.

“ಬಿಜೆಪಿಗರು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರಿಗೆ ಮೇವು ಹಗರಣ, ಹೋಟೆಲ್‌ಗಳಿಗೆ ಭೂಮಿ ಮತ್ತು ಉದ್ಯೋಗಗಳಿಗೆ ಭೂಮಿ ಮುಂತಾದ ರೈಲ್ವೆ ಹಗರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ದಾಳಿ ನಡೆಸಲು ಹೆಚ್ಚು ಇಷ್ಟಪಡುವ ಬಿಹಾರದ ಬಿಜೆಪಿ ನಾಯಕರು ತಾವು ಕಳಂಕರಹಿತರು ಎಂದು ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವದಲ್ಲಿ ಅವರು ಲಾಲು ಪ್ರಸಾದ್‌ಗಿಂತ ಹೆಚ್ಚು ಭ್ರಷ್ಟರು” ಎಂದು ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...