ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ

Date:

  • ಜೈನ ಮುನಿ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಆರಗ ಜ್ಞಾನೇಂದ್ರ
  • ಕಾಂಗ್ರೆಸ್ ಈಗ ಕೊಲೆ ಭಾಗ್ಯ ನೀಡಿದೆ: ಮಾಜಿ ಸಚಿವ ಆರ್‌ ಅಶೋಕ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಬಿಜೆಪಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ಜೈನ ಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದರು. ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಕಾಲ್ನಡಿಗೆ ಜಾಥಾ ನಡೆಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, “ಜೈನ ಮುನಿಗಳ ಹತ್ಯೆಯ ಹಿಂದೆ ಸಮಾಜ‌ಘಾತಕ ಶಕ್ತಿಗಳು ಇವೆ. ಮರಳು ಮಾಫಿಯಾ ತಡೆಗಟ್ಟಲು ಹೋದ ಪೊಲೀಸರ ಕೊಲೆಯಾಗಿದೆ. ಅಹಿಂಸೆ ಪರಮಧರ್ಮ ಎನ್ನುವ ಜೈನಮುನಿಗಳ ಕೊಲೆ ಆಗಿದೆ. ಇಂತಹವರನ್ನು ಕೊಲೆ ಮಾಡುವ ಮೂಲಕ ಸಮಾಜಘಾತಕ ಶಕ್ತಿಗಳು ನಮಗೆ ಸಂದೇಶ ನೀಡಿವೆ. ಆದರೆ, ದಪ್ಪ ಚರ್ಮದ ಈ ಸರ್ಕಾರ, ಈ ಬಗ್ಗೆ ಯಾವುದೇ ನಿಗಾ ವಹಿಸಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದನದ ಒಳಗಡೆ ಗೃಹ ಸಚಿವರು ಕೊಲೆ ಮುಚ್ಚಿಹಾಕುವ ಅಧಿಕಾರಿಗಳನ್ನು ಹೊಗಳಿ ಪ್ರಕರಣ ಮುಚ್ಚಿ ಹಾಕಲು ಸಹಾಯ ಮಾಡುತ್ತಿದ್ದಾರೆ. ಬರ್ಬರ ಕೊಲೆಗೆ ನ್ಯಾಯ ಕೊಡಿಸುವ ಬದಲು ಅವರ ರಕ್ಷಣೆಗೆ ಸರ್ಕಾರ ಮುಂದಾಗಿದೆ. ತಮ್ಮ ಭಂಡತನ ಬಿಡದೆ ಸಮಾಜಘಾತಕ ಶಕ್ತಿಗಳ ರಕ್ಷಣೆಗೆ ಮುಂದಾಗಿದೆ” ಎಂದು ಕಿಡಿಕಾರಿದರು.

“ತಿ ನರಸಿಪುರ ಕೊಲೆ ಪ್ರಕರಣದ ಹಿಂದಿನ ದಿನ ನಡೆದ ಗಲಾಟೆ ಪೊಲೀಸರ ಗಮನಕ್ಕೆ ಬಂದರೂ ಅದರತ್ತ ಅವರು ಗಮನ ನೀಡದೆ ಹೋಗಿದ್ದಾರೆ. ಇಂತಹ ಹಲವು ಉದಾಹರಣೆಗಳು ನಮ್ಮ ಮುಂದಿವೆ. ಸರ್ಕಾರ ಈ ಬಗ್ಗೆ ಕಿಂಚಿತ್ತೂ ಗಮನ ಹರಿಸಿಲ್ಲ. ಪೊಲೀಸ್ ಅಧಿಕಾರಿಗಳ ನಿಷ್ಠೆ ಕಾನೂನು ಪಾಲನೆ ಮಾಡುವತ್ತ ಇರಬೇಕೇ ಹೊರತು ವ್ಯಕ್ತಿ ನಿಷ್ಠೆ ಪಾಲನೆ ಮಾಡುವ ಕಡೆಗೆ ಅಲ್ಲ. ನಿಮ್ಮ ತನಿಖೆಯನ್ನು ಜನ ಗಮನಿಸುತ್ತಾರೆ. ನೀವು ಎಚ್ಚರಿಕೆಯಿಂದಿರಿ” ಎಂದರು.

“ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ನಿರ್ದೇಶನವನ್ನು ರಾಜ್ಯ ಸರ್ಕಾರಕ್ಕೆ ನೀಡಲು ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ಸರ್ಕಾರದ ನಡೆ ನೋಡಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸುತ್ತೇವೆ” ಎಂದು ಹೇಳಿದರು.

BJP Protest 01

ಜೈನ ಮುನಿ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಆರಗ ಜ್ಞಾನೇಂದ್ರ

ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, “ನನ್ನ ಕ್ಷೇತ್ರದಲ್ಲಿ ಹಾಡಹಗಲ್ಲಿನಲ್ಲಿಯೇ ಮಚ್ಚು ತೆಗೆದುಕೊಂಡು ಓಡಾಡುತ್ತಿದ್ದಾರೆ. ಕೊಲೆಗೇಡಿಗಳೆಲ್ಲ ಕಾಂಗ್ರೆಸ್ ಸರ್ಕಾರದಲ್ಲಿ ಹೊರಗಡೆ ಬಂದಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜೈನ ಮುನಿಗಳ ಹತ್ಯೆ ಸಾಮಾನ್ಯ ಹತ್ಯೆಯಲ್ಲ. ಈ ಹತ್ಯೆ ಹಿಂದೆ ವಿದೇಶಿ ಕೈವಾಡ ಇರುವ ಹಾಗೆ ಕಾಣುತ್ತಿದೆ. ಈ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದರು.

“ನಮ್ಮ ಪೋಲಿಸರು ಸರಿಯಾಗಿ ಕೆಲಸ ಮಾಡುತ್ತಾರೆ. ಆದರೆ, ಅವರ ಮೇಲೆ ಒತ್ತಡ ಇದೆ, ಈ ಪ್ರಕರಣ ಸಿಬಿಐಗೆ ವಹಿಸಬೇಕು ಎಂಬುದು ನಮ್ಮ ಬೇಡಿಕೆ” ಎಂದರು.

“ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿದ್ರೋಹಿಗಳಿಗೆ ಶಕ್ತಿ ಬಂದಿದೆ. ಜೈನ ಮುನಿ ಸಾವು ನೋಡಿದರೆ, ಐಸೀಸ್ ಉಗ್ರರು ಮಾಡದಂತಹ ಕೊಲೆ ಮಾಡಿದ್ದಾರೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ‌, ಈ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಬೇಕು. ಕೊಲೆ ಸತ್ಯಾಸತ್ಯತೆ ತಿಳಿಯಲು ಸಿಬಿಐ ತನಿಖೆ ಆಗಬೇಕು. ಪೊಲೀಸ್ ಇಲಾಖೆಯಲ್ಲಿ ಕೇಸರೀಕರಣ ಹಸಿರೀಕರಣ ನಡೆಯುತ್ತಿದೆ. ಈ ಸರ್ಕಾರ ನಿಷ್ಪಕ್ಷಪಾತ ತನಿಖೆ ಆಗಬೇಕು‌ ರಾಜ್ಯದ ಎಲ್ಲ ಹಿಂದೂ ಕಾರ್ಯಕರ್ತರ ಕೊಲೆಗಳಿಗೆ ನ್ಯಾಯ ಸಿಗಬೇಕು” ಎಂದು ಆಗ್ರಹಿಸಿದರು.

BJP Protest 02

ಕಾಂಗ್ರೆಸ್ ಈಗ ಕೊಲೆ ಭಾಗ್ಯ ನೀಡಿದೆ: ಆರ್‌ ಅಶೋಕ

ಮಾಜಿ ಸಚಿವ ಆರ್‌ ಅಶೋಕ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಶಾಂತಿ ಮೂಡಿದೆ. ಹಲವು ಭಾಗ್ಯವಳನ್ನು ನೀಡಿದ ಕಾಂಗ್ರೆಸ್ ಈಗ ಕೊಲೆ ಭಾಗ್ಯ ನೀಡಿದೆ. ಹಿಂದೂ ಕಾರ್ಯಕರ್ತರು ಹಾಗೂ ಜೈನ್ ಮುನಿಗಳ ಹತ್ಯೆ ಹಿಂದೆ ಷಡ್ಯಂತ್ರ ಇದೆ‌” ಎಂದು ಆರೋಪಿಸಿದರು.

“ಸರ್ಕಾರಕ್ಕೆ ನೈತಿಕತೆ ಇಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳು, ಹಪ್ತಾವಸೂಲಿ ಮಾಡುವವರು ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುವವರು ಮುನ್ನೆಲೆಗೆ ಬಂದಿದ್ದಾರೆ. ಕಾಂಗ್ರೆಸ್ ಇವರ ಪರ ಇದೆ. ಲಜ್ಜೆ ಗೆಟ್ಟ ಸರ್ಕಾರ,ಟ್ರಾನ್ಪರ್ ದಂಧೆ ಮಾಡುತ್ತಿದೆ. ಈ ಸರ್ಕಾರದ ಕಿವಿಹಿಂಡಿ ಬುದ್ದಿ ಹೇಳಲು ಗವರ್ನರ್ ಗೆ ಮನವಿ ಮಾಡುತ್ತೇವೆ. ಇದಕ್ಕಾಗಿ ಈಗ ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ರಾಜ್ಯದಲ್ಲಿ ಭಯದ ವಾತಾವರಣ ನೆಲೆಸಿದೆ: ಸುನೀಲ್‌ ಕುಮಾರ್‌

ಶಾಸಕ ಸುನೀಲ್ ಕುಮಾರ್ ಮಾತನಾಡಿ, “ರಾಜ್ಯ ಸರ್ಕಾರ ಬಂದು ಎರಡೇ ತಿಂಗಳಲ್ಲಿ ಹತ್ತು ಹದಿನೈದು ಘಟನೆಗಳು ನಡೆದಿವೆ. ಕಾನೂನು ಸುವ್ಯವಸ್ಥೆ ಹದಗೆಡುವ ಮಟ್ಟಿಗೆ ಘಟನೆಗಳು ನಡೀತಿವೆ. ಗುಂಡಾಗಿರಿ ವರ್ತನೆ ಹೆಚ್ಚಾಗಿದೆ. ರಾಷ್ಟ್ರೀಯ ವಿಚಾರ ಹೇಳುವ ವ್ಯಕ್ತಿಗಳ ವಿರುದ್ಧ ಹಲ್ಲೆ, ಕೊಲೆ, ದೌರ್ಜನ್ಯ ಮಾಡಲಾಗುತ್ತಿದೆ. ರಾಜ್ಯದಲ್ಲಿ ಭಯದ ವಾತಾವರಣ ನೆಲೆಸಿದೆ. ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರ ಮೇಲೆ ಭಯ ಇಲ್ಲದಂತಾಗಿದೆ. ಜನ ದೊಡ್ಡ ಪ್ರಮಾಣದಲ್ಲಿ ಭಯಭೀತರಾಗಿದ್ದಾರೆ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರಕ್ಕೆ ಎಚ್ಚರಿಕೆ ಕೊಡುವಂತೆ ಮನವಿ ಮಾಡುತ್ತೇವೆ. ಜೈನ ಮುನಿ ಹತ್ಯೆ ಪ್ರಕರಣ ಸಿಬಿಐಗೆ ವಹಿಸದಿದ್ದರೆ ಮುಂದೆ ನಮ್ಮ ನಾಯಕರೆಲ್ಲ ಚರ್ಚೆ ಮಾಡಿ ಮುಂದಿನ‌ ಹೋರಾಟ ರೂಪಿಸುತ್ತೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...