ಬಿಜೆಪಿ ನಾಯಕನ ಶೂರ್ಪನಖಿ ಹೇಳಿಕೆ; ಮಧ್ಯಪ್ರದೇಶ ಸಚಿವೆ ಸಮರ್ಥನೆ

Date:

  • ಸಂಪ್ರದಾಯ ಪಾಲಿಸದವರು ರಾಕ್ಷಸರೇ
  • ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ಟೀಕೆ

ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯಾ ಅವರ ಯುವತಿಯರ ಉಡುಪಿನ ಕುರಿತ ವಿವಾದಾತ್ಮಕ ಹೇಳಿಕೆಯನ್ನು ಮಧ್ಯಪ್ರದೇಶದ ಸಚಿವೆ ಉಷಾ ಠಾಕೂರ್ ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ, “ಅಸಭ್ಯವಾಗಿ ಬಟ್ಟೆ ಧರಿಸುವ ಹುಡುಗರು ಶೂರ್ಪನಖಿ ತರಹ ಕಾಣುತ್ತಾರೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಕೈಲಾಶ್ ವಿಜಯವರ್ಗಿಯಾ ಅವರು ಹೇಳಿಕೆ ಸಮರ್ಥಿಸಿಕೊಂಡ ಉಷಾ ಠಾಕೂರ್, “ನಮ್ಮ ವೈದಿಕ ಸನಾತಕ ಸಂಪ್ರದಾಯವನ್ನು ಅನುಸರಿಸದಿದ್ದರೆ, ಅವರನ್ನು ರಾಕ್ಷಸರು ಎಂದು ಕರೆಯುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಲಾಶ್ ವಿಜಯವರ್ಗಿಯಾ ಹೇಳಿಕೆ

ಯುವತಿಯರ ಇತ್ತೀಚಿನ ಉಡುಪುಗಳನ್ನು ಪರೋಕ್ಷವಾಗಿ ಉಲ್ಲೇಖಿಸಿದ ಕೈಲಾಶ್ ವಿಜಯವರ್ಗಿಯ, “ಈಗಿನ ಕಾಲದ ಹುಡುಗಿಯರು ಅಸಭ್ಯ ಬಟ್ಟೆಗಳನ್ನು ಹಾಕಿಕೊಂಡರೆ, ರಾಮಾಯಣದಲ್ಲಿ ಬರುವ ಶೂರ್ಪನಖಿಯಂತೆ ಕಾಣುತ್ತಾರೆ” ಎಂದು ಹೇಳಿಕೆ ನೀಡಿದ್ದಾರೆ.

ಹನುಮಾನ್ ಮತ್ತು ಮಹಾವೀರ ಜಯಂತಿಯಂದು ಇಂದೋರ್‌ನಲ್ಲಿ ಮಾತನಾಡಿದ ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ನಾನು ರಾತ್ರಿ ಹೊತ್ತು ಹೊರಗೆ ಬಂದಾಗ ಯುವ ಜನತೆ ಕುಡಿಯುವುದನ್ನು ನೋಡುತ್ತೇನೆ. ತಕ್ಷಣಕ್ಕೆ ಅವರ ಕಪಾಳಕ್ಕೆ ಎರಡು ಬಿಡಬೇಕು ಎನಿಸುತ್ತದೆ” ಎಂದಿದ್ದಾರೆ.

“ಮಹಿಳೆಯನ್ನು ನಾವು ದೇವತೆ ಎಂದು ಭಾವಿಸುತ್ತೇವೆ. ಆದರೆ, ಈಗಿನ ಕಾಲದ ಹುಡುಗಿಯರಲ್ಲಿ ಮಹಿಳೆಯರು ಎನ್ನುವ ಯಾವ ಲಕ್ಷಣವೂ ಇಲ್ಲ. ಕೆಟ್ಟ ಬಟ್ಟೆ ಧರಿಸಿ ಥೇಟ್‌ ಶೂರ್ಪನಖಿಯಂತೆ ಕಾಣುತ್ತಾರೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೆಟ್ಟ ಬಟ್ಟೆ ಧರಿಸುವ ಹುಡುಗಿಯರು ಶೂರ್ಪನಖಿಯಂತೆ ಕಾಣುತ್ತಾರೆ : ಬಿಜೆಪಿ ನಾಯಕ ಕೈಲಾಶ್

ಕಾಂಗ್ರೆಸ್ ವಕ್ತಾರೆ ಟೀಕೆ

ಈ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಭಾ ಪಟೇಲ್, “ಅಧಿಕಾರದ ಅಹಂಕಾರದಲ್ಲಿರುವ ಬಿಜೆಪಿ ತನ್ನ ಘನತೆ ಮರೆಯುತ್ತಿದೆ. ಅಸಭ್ಯ ಪದಗಳನ್ನು ಬಳಸಿರುವ ವಿಜಯವರ್ಗಿಯ ತಮ್ಮನ್ನು ತಾವು ಶ್ರೇಷ್ಠ ನಾಯಕ ಎಂದು ಭಾವಿಸಿಕೊಂಡಿದ್ದಾರೆ” ಎಂದು ಟೀಕಿಸಿದ್ದಾರೆ.

“ವಿಜಯವರ್ಗಿಯ ಅವರು ಯಾವ ಕಾಲದಲ್ಲಿ ಬದುಕುತ್ತಿದ್ದಾರೆ, ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಮಹಿಳೆಯರಿಗೆ ತಮ್ಮ ಆಯ್ಕೆಯ ಪ್ರಕಾರ ಬಟ್ಟೆ ಧರಿಸಲು, ತಿನ್ನಲು ಮತ್ತು ಕುಡಿಯಲು ಹಕ್ಕಿದೆ. ಮಹಿಳೆಯರು ತಮ್ಮ ಸ್ವಾತಂತ್ರ್ಯವನ್ನು ಬಳಸುತ್ತಿದ್ದರೆ, ಖಂಡಿತವಾಗಿಯೂ ಅದರಲ್ಲಿ ಅಲಂಕಾರ ಇರಬೇಕು. ಆದರೆ, ನಾಯಕರು ಯಾವುದೇ ಕಾಮೆಂಟ್ ಮಾಡುವ ಮೊದಲು ತಮ್ಮ ಘನತೆಯ ಬಗ್ಗೆ ಕಾಳಜಿ ವಹಿಸಬೇಕು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...