ಕೇದಾರನಾಥ ದೇವಾಲಯದ ಆವರಣದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು: ಬಿಜೆಪಿ ಶಾಸಕಿ ಒತ್ತಾಯ

Date:

ಕೇದಾರನಾಥ ದೇವಾಲಯದ ಆವರಣದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಕೇದಾರನಾಥ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಆಗ್ರಹಿಸಿದ್ದಾರೆ. ಕೇದಾರನಾಥ ಯಾತ್ರೆ ನಿರ್ವಹಣೆ ಬಗ್ಗೆ ಸಭೆ ನಡೆಸಿದ ಬಳಿಕ ಈ ಹೇಳಿಕೆ ನೀಡಿರುವ ಬಿಜೆಪಿ ಶಾಸಕಿ ಇದು ಜನರು ಅಭಿಪ್ರಾಯ ಎಂದು ಹೇಳಿಕೊಂಡಿದ್ದಾರೆ.

“ಜನರು ಎತ್ತಿರುವ ಸಮಸ್ಯೆಗಳನ್ನು ನಾನು ಒಪ್ಪುತ್ತೇನೆ. ಕೇದಾರನಾಥ ಧಾಮದ ಪ್ರತಿಷ್ಠೆಗೆ ಕಳಂಕ ತರುವ ಕೆಲವು ಜನರು ಇದ್ದಾರೆ. ಅಂತಹ ಜನರು ದೇವಾಲಯದ ಆವರಣಕ್ಕೆ ಪ್ರವೇಶಿಸುವುದನ್ನು ನಿಷೇಧಿಸಬೇಕು” ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇದಾರನಾಥದಲ್ಲಿ ಯಾತ್ರೆ ನಿರ್ವಹಣೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಸಭೆ ನಡೆಸಲಾಯಿತು. ಕೆಲವು ಘಟನೆಗಳು ಗಮನಕ್ಕೆ ಬಾರದೇ ನಡೆಯುತ್ತವೆ ಎಂಬ ವಿಷಯವನ್ನು ಕೆಲವರು ಪ್ರಸ್ತಾಪಿಸಿದ್ದಾರೆ. ಕೇದಾರನಾಥ ಧಾಮದ ಪ್ರತಿಷ್ಠೆಗೆ ಧಕ್ಕೆ ತರುವ ಕಾರ್ಯವನ್ನು ಯಾರಾದರೂ ಮಾಡುತ್ತಿದ್ದರೆ, ಅಂತಹ ಜನರ ಪ್ರವೇಶವನ್ನು ನಿಷೇಧಿಸಬೇಕು” ಎಂದು ಆಶಾ ಭಾನುವಾರ ತಿಳಿಸಿದ್ದಾರೆ.

“ದೇವಾಲಯದ ಅಪಖ್ಯಾತಿ ಮಾಡಲು ಬರುವವರು ಖಂಡಿತವಾಗಿಯೂ ಹಿಂದೂಯೇತರರು ಆಗಿದ್ದಾರೆ. ದೇವಾಲಯದ ಘನತೆಗೆ ಧಕ್ಕೆ ತರುವ ಕಾರ್ಯದಲ್ಲಿ ಭಾಗಿಯಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ವಿವಿಧ ಧರ್ಮ, ಜಾತಿ, ಸಂಸ್ಕೃತಿಯನ್ನು ಹೊಂದಿರುವ ಭಾರತದಲ್ಲಿ ದೇವಾಲಯ, ಚರ್ಚು, ದರ್ಗಾಗಳಿಗೆ ಇತರೆ ಧರ್ಮೀಯರು ಭೇಟಿ ನೀಡುವುದು ಸಾಮಾನ್ಯವಾಗಿದೆ. ಇದು ಸೌಹಾರ್ದ ಭಾರತದ ಒಂದು ಭಾಗ. ಆದರೆ ಧರ್ಮದ ಆಧಾರದಲ್ಲಿ ದ್ವೇಷ ಬಿತ್ತುವ ಬಿಜೆಪಿ ಒಗ್ಗಟ್ಟನ್ನು ಮುರಿಯುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಾ ಬಂದಿದೆ. ಅದರ ಭಾಗವಾಗಿಯೇ ಈಗ ಕೇದಾರನಾಥಕ್ಕೆ ಪ್ರವೇಶಿಸುವ ವಿಚಾರದಲ್ಲಿ ಕೋಮುವಾದ ಸೃಷ್ಟಿಸಲು ಮುಂದಾಗಿದ್ದಾರೆ. ಇನ್ನು ದೇವಾಲಯದ ಸಮಿತಿಯಲ್ಲಿಯೂ ಬಹುತೇಕರು ಬಲಪಂಥೀಯರು, ಅಲ್ಪಸಂಖ್ಯಾತ ವಿರೋಧಿಗಳು ಎಂಬುದನ್ನು ನಾವು ಮರೆಯುವಂತಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...