ಸಂಸದ ಅಸಾದುದ್ದೀನ್ ಓವೈಸಿಯವರ ಸಹೋದರ ಹಾಗೂ ಎಐಎಂಐಎಂ ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿತ್ತು. ಈ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಪ್ರಮಾಣವಚನ ಕಾರ್ಯಕ್ರಮದಿಂದ ದೂರವುಳಿದ ಪ್ರಸಂಗ ನಡೆದಿದೆ.
ಅಕ್ಬರುದ್ದೀನ್ ಓವೈಸಿ ಅವರು ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಾಯಾನಗುಟ್ಟ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸದ್ಯ ಅವರನ್ನು ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸುವ ಕಾರ್ಯಕ್ರಮ ಇಂದು(ಡಿ.9) ಏರ್ಪಡಿಸಲಾಗಿತ್ತು. ಇದನ್ನು ವಿರೋಧಿಸಿರುವ ತೆಲಂಗಾಣ ಬಿಜೆಪಿಯ ನೂತನ ಶಾಸಕರು ಪ್ರಮಾಣ ವಚನ ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ.
LIVE || Presiding Over the Session As Pro-Tem Speaker In The #Telangana State Legislative #Assembly..@asadowaisi #AIMIM #Hyderabad pic.twitter.com/QTjAQb1mSm
— Akbaruddin Owaisi (@AkbarOwaisi_MIM) December 9, 2023
ಕಾಂಗ್ರೆಸ್ ಮತ್ತು ಬಿಆರ್ಎಸ್ ಪಕ್ಷದ ಶಾಸಕರು ಇಂದು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಹೈದರಾಬಾದ್ನ ಗೋಶಮಹಲ್ ಕ್ಷೇತ್ರದ ಶಾಸಕ ಟಿ. ರಾಜಾಸಿಂಗ್, “ನನ್ನ ಉಸಿರು ಇರುವವರೆಗೆ ಎಂಐಎಂ ನಾಯಕನ ಮುಂದೆ ಪ್ರಮಾಣ ವಚನ ಸ್ವೀಕರಿಸುವುದಿಲ್ಲ. ಪೂರ್ಣಾವಧಿ ಸ್ಪೀಕರ್ ನೇಮಕವಾದ ಬಳಿಕವಷ್ಟೇ ಪ್ರಮಾಣ ವಚನ ಸ್ವೀಕರಿಸುವುದಾಗಿ” ವಿಡಿಯೋ ಮೂಲಕ ಹೇಳಿದ್ದಾರೆ.
Three-time #Goshamahal MLA, #RajaSingh on Friday said that BJP leaders will not take oath if #AIMIM leader #AkbaruddinOwaisi is made pro-tem speaker.
Akbaruddin Owaisi was appointed pro-tem speaker by the #Telangana government in the newly formed state Assembly on Friday,… pic.twitter.com/NK1MFfPWP8
— Hate Detector 🔍 (@HateDetectors) December 8, 2023
“ಹಿಂದೂ ವಿರೋಧಿ ಹೇಳಿಕೆ ನೀಡಿರುವ ವ್ಯಕ್ತಿ ಅಕ್ಬರುದ್ದೀನ್ ಓವೈಸಿ. ಆತನ ಮುಂದೆ ನಾನು ಪ್ರಮಾಣ ವಚನ ಸ್ವೀಕರಿಸಬಹುದೇ?” ಎಂದು ಟಿ. ರಾಜಾಸಿಂಗ್ ಪ್ರಶ್ನಿಸಿದ್ದಾರೆ.
#WATCH | Newly elected leaders take oath as members of the Telangana Legislative Assembly before Pro-tem Speaker Akbaruddin Owaisi
BJP MLAs are boycotting oath-taking with Pro-tem Speaker Akbaruddin Owaisi presiding over the proceedings pic.twitter.com/16whzG37Uc
— ANI (@ANI) December 9, 2023
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಹಿರಿಯ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ಸಂಪ್ರದಾಯಕ್ಕೆ ವಿರುದ್ಧವಾದ ಓವೈಸಿ ನೇಮಕವನ್ನು ಬಿಜೆಪಿ ವಿರೋಧಿಸುತ್ತದೆ. ಹಂಗಾಮಿ ಸ್ಪೀಕರ್ ಮುಂದೆ ಬಿಜೆಪಿ ಶಾಸಕರು ಪ್ರಮಾಣ ಸ್ವೀಕರಿಸುವುದಿಲ್ಲ. ಪೂರ್ಣಾವಧಿ ಸ್ಪೀಕರ್ ನೇಮಕವಾದ ನಂತರವಷ್ಟೇ ನಮ್ಮ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಎಐಎಂಐಎಂ ಪಕ್ಷದೊಂದಿಗೆ ನಾವು ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ನಾವು ರಾಜ್ಯಪಾಲರ ಬಳಿ ಹೋಗುತ್ತೇವೆ” ಎಂದು ತಿಳಿಸಿದ್ದಾರೆ.
ఈరోజు (09.12.2023) హైదరాబాద్లోని రాజ్భవన్లో తెలంగాణ రాష్ట్ర శాసనసభ సభ్యునిగా (ప్రోటెం స్పీకర్) శ్రీ అక్బర్ ఉద్దీన్ ఒవైసీతో ప్రమాణ స్వీకారం చేయించారు.
గౌరవనీయులైన ముఖ్యమంత్రి, క్యాబినెట్ మంత్రులు, ప్రధాన కార్యదర్శి, మరియు ఇతర ప్రముఖులు హాజరయ్యారు.@TelanganaCMO @revanth_anumula… pic.twitter.com/xGx80BqAJ8— Dr Tamilisai Soundararajan (@DrTamilisaiGuv) December 9, 2023
2018ರಲ್ಲೂ ಬಿಆರ್ಎಸ್ ಪಕ್ಷ ಅಧಿಕಾರಕ್ಕೆ ಬಂದಿದ್ದ ಸಂದರ್ಭದಲ್ಲಿ ಎಂಐಎಂ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿತ್ತು. ಆ ವೇಳೆ ಕೂಡ ದ್ವೇಷ ಭಾಷಣಕಾರನಾಗಿ ಗುರುತಿಸಿಕೊಂಡಿರುವ ಶಾಸಕ ರಾಜಾಸಿಂಗ್, ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದ್ದರು.





