‘ಎಂಟು ಸಂಸದರಿಗೆ ಟಿಕೆಟ್ ಇಲ್ಲ’ ಎಂಬ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಂಸದ ಸಂಗಣ್ಣ ಕರಡಿ ಆಕ್ರೋಶ

Date:

  • ಯತ್ನಾಳ್ ಅಥವಾ ಇನ್ಯಾರೂ ಕೂಡ ಪಕ್ಷದ ವಿರುದ್ಧ ಮಾತನಾಡಬಾರದು
  • ರೇಣುಕಾಚಾರ್ಯ ಪಕ್ಷದ ವಿರುದ್ಧ ಮಾತನಾಡುತ್ತಿರುವ ಕಾರಣ ಗೊತ್ತಿಲ್ಲ ಎಂದ ಸಂಸದ

‘ಎಂಟು ಸಂಸದರಿಗೆ ಟಿಕೆಟ್ ಇಲ್ಲ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆಗೆ ಆಕ್ರೋಶ ಹೊರಹಾಕಿರುವ ಸಂಸದ ಸಂಗಣ್ಣ ಕರಡಿ, “ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ; ಪಕ್ಷ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಕೊಪ್ಪಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸಾಕಷ್ಟು ಸಮಯವಿದ್ದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಂಟು ಜನ ಸಂಸದರಿಗೆ ಟಿಕೆಟ್ ಇಲ್ಲವೆಂದು ಹೇಳುತ್ತಿದ್ದಾರೆ. ಅವರು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಪಕ್ಷ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಸಂಗಣ್ಣ ಕರಡಿ ಆಗ್ರಹಿಸಿದರು.

ಬಸನಗೌಡ ಪಾಟೀಲ ಯತ್ನಾಳ

‘ಯತ್ನಾಳ್ ಅಥವಾ ಇನ್ಯಾರೂ ಕೂಡ ಪಕ್ಷದ ವಿರುದ್ಧ ಮಾತನಾಡಬಾರದು. ಲೋಕಸಭಾ ಚುನಾವಣೆಯ ಟಿಕೆಟ್ ವಿಷಯವಾಗಿ ಯಾವುದೇ ಚರ್ಚೆ ನಡೆದಿಲ್ಲ. ಆದರೂ ಊಹಾಪೋಹ ಹರಿದಾಡುತ್ತಿದೆ. ಪಕ್ಷ ವಿರೋಧಿಯಾಗಿ ಮಾತನಾಡುವವರ ಬಗ್ಗೆ ಹೈಕಮಾಂಡ್ ನಿಗಾ ವಹಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಪ್ರಧಾನಿ ಪಕ್ಷದ ಸಾಧನೆ ಎಂದಿರುವುದು ವಿಷಾದನೀಯ : ಸಿದ್ದರಾಮಯ್ಯ

ಬಿ.ಎಲ್.ಸಂತೋಷ್ ಕರೆದಿದ್ದ ಸಭೆಗೆ ಪಕ್ಷದ ಪ್ರಮುಖ ನಾಯಕರು ಗೈರಾಗಿದ್ದರು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಂಸದ ಸಂಗಣ್ಣ ಕರಡಿ, “ಅಂದು ಬೇರೆ ಕೆಲಸದ ನಿಮಿತ್ತ ನಮ್ಮ ಎಲ್ಲ ನಾಯಕರು ಸಭೆಯಲ್ಲಿ ಭಾಗಿಯಾಗಿಲ್ಲ. ಹಾಗಂದ ಮಾತ್ರಕ್ಕೆ ಅವರನ್ನು ದೂರವಿಟ್ಟಿದ್ದಾರೆ ಎಂದಲ್ಲ. ಎಲ್ಲರ ಅಭಿಪ್ರಾಯವನ್ನೇ ಪಡೆದುಕೊಂಡೇ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಆದಷ್ಟು ಬೇಗನೆ ಹೊಸ ರಾಜ್ಯಾಧ್ಯಕ್ಷರ ಮತ್ತು ವಿಪಕ್ಷದ ನಾಯಕನ ಆಯ್ಕೆ ನಡೆಯಲಿದೆ” ಎಂದು ತಿಳಿಸಿದರು.

‘ಮಾಜಿ ಶಾಸಕ ರೇಣುಕಾಚಾರ್ಯ ಪಕ್ಷದ ವಿರುದ್ಧವಾಗಿ ಯಾವ ಕಾರಣಕ್ಕಾಗಿ ಮಾತನಾಡುತ್ತಿದ್ದಾರೆ ಎನ್ನುವುದು ನನಗಂತೂ ತಿಳಿದಿಲ್ಲ. ಈ ವಿಷಯವನ್ನು ನೀವು ಅವರಿಗೆ ಕೇಳಬೇಕು. ಏನೇ ಸಮಸ್ಯೆಯಿದ್ದರೂ ಯಾರೇ ಆದರೂ ಪಕ್ಷದ ಚೌಕಟ್ಟಿನಲ್ಲಿಯೇ ಮಾತನಾಡಬೇಕು’ ಎಂದು ಸಂಸದ ಸಂಗಣ್ಣ ಕರಡಿ ಬಿಜೆಪಿ ಮುಖಂಡರಿಗೇ ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...