ವಾರದೊಳಗೆ ಸಿಎಎ; ಬಾಯಿತಪ್ಪಿ ಆಡಿದ ಮಾತೆಂದು ಕ್ಷಮೆಯಾಚಿಸಿದ ಕೇಂದ್ರ ಸಚಿವ

Date:

ವಾರದೊಳಗೆ ರಾಷ್ಟ್ರವ್ಯಾಪಿ ಸಿಎಎ ಜಾರಿಯ ಬಗ್ಗೆ ಕೇಂದ್ರ ಸಚಿವ ನೀಡಿದ ಭರವಸೆಯ ನಂತರ ಇಕ್ಕಟ್ಟಿಗೆ ಸಿಲುಕಿದ ಕೇಂದ್ರದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಮತುವಾ ಸಮುದಾಯದ ಬಿಜೆಪಿ ಸಂಸದ ಮತ್ತು ಕೇಂದ್ರ ಬಂದರು ಖಾತೆಯ ರಾಜ್ಯ ಸಚಿವ ಶಂತನು ಠಾಕೂರ್ ಅವರು ಒಂದು ವಾರದೊಳಗೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ‘ಬಾಯಿತಪ್ಪಿ ಬಂದ ಮಾತು’ ಎಂದು  ಸ್ಪಷ್ಟನೆ ನೀಡಬೇಕಾಗಿ ಬಂದಿದೆ.

ವಾರದೊಳಗೆ ಬಂಗಾಳದಲ್ಲಿ ಮಾತ್ರವಲ್ಲ, ರಾಷ್ಟ್ರವಿಡೀ ಸಿಎಎ ಜಾರಿ ಮಾಡಲಾಗುವುದು ಎಂದು ಪಶ್ಚಿಮ ಬಂಗಾಳದ ದಕ್ಷಿಣದ ಪ್ರದೇಶವಾದ ಕುಲ್ಪಿಯಲ್ಲಿ ಜನವರಿ 28ರಂದು ಠಾಕೂರ್ ನೀಡಿದ ಹೇಳಿಕೆಗೆ ಸಂಬಂಧಿಸಿ ಬಿಜೆಪಿ ಹೈಕಮಾಂಡ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.

ವಾಸ್ತವದಲ್ಲಿ ಸಿಎಎ ವಿಚಾರವಾಗಿ ಬಿಜೆಪಿ ಎರಡು ಬೆಂಬಲ ಪಡೆಗಳ ನಡುವೆ ಇಕ್ಕಟ್ಟಿಗೆ ಬಿದ್ದಿದೆ. ರಾಜಬಂಶಿ ಸಮುದಾಯ ಸಿಎಎ ಜಾರಿಯನ್ನು ವಿರೋಧಿಸಿದೆ. ಆದರೆ ಮತುವಾ ಸಮುದಾಯ ಜಾರಿಗೆ ಒತ್ತಾಯಿಸುತ್ತಿದೆ. ಇದೇ ಕಾರಣದಿಂದ ಠಾಕೂರ್ ಹೇಳಿಕೆ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಕ್ಕಿಸಿದೆ. ಸಮಜಾಯಿಶಿ ನೀಡಿದ ಠಾಕೂರ್, “ಬಾಯಿತಪ್ಪಿ ಮಾತು ಹೋಗಿದೆ. ಕಾಯ್ದೆಯನ್ನು ವಾರದೊಳಗೆ ಜಾರಿಗೆ ತರಲಾಗುತ್ತದೆ ಎಂದು ನಾನು ಹೇಳಿದ್ದೆ. ಆದರೆ ನನ್ನ ಉದ್ದೇಶ ಅದಾಗಿರಲಿಲ್ಲ. ವಾರದೊಳಗೆ ಸಿಎಎ ನಿಯಮಗಳನ್ನು ರೂಪಿಸಲಾಗುತ್ತದೆ ಎಂದು ಹೇಳಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಏಕರೂಪದ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಬರುವ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಬಜೆಟ್ ಅಧಿವೇಶನದಲ್ಲಿಯೇ ಈ ಕಾಯ್ದೆಗಳು ಜಾರಿಗೆ ಬರುವ ನಿರೀಕ್ಷೆಗಳಿದ್ದವು. ಆದರೆ ಇದೀಗ ಬಿಜೆಪಿ ಸಂಸದ ಬಂಗಾಳದಲ್ಲಿ ತಮ್ಮ ಸಮುದಾಯದ ಮುಂದೆ ಸ್ಪಷ್ಟನೆ ನೀಡಿದ್ದಾರೆ.

ಬಂಗಾಳದಲ್ಲಿ ಮತುವಾ ಸಮುದಾಯ ಬಿಜೆಪಿಯ ಅತಿದೊಡ್ಡ ಬೆಂಬಲಪಡೆಯಾಗಿದ್ದು, ವರ್ಷಗಳಿಂದ ಸಿಎಎ ಜಾರಿಗೆ ತರುವಂತೆ ಒತ್ತಾಯಿಸುತ್ತಿದ್ದಾರೆ. ಮತುವಾ ಸಮುದಾಯದವರೇ ಆಗಿರುವ ಮತ್ತು ಅಖಿಲ ಭಾರತ ಮತುವಾ ಮಹಾಸಂಘದ ಅಧ್ಯಕ್ಷರಾದ ಬಂಗಾಳದ ಬಿಜೆಪಿ ಸಂಸದ ಠಾಕೂರ್ ಅವರು ಮೋದಿ ಸರ್ಕಾರ ಇದೇ ವಾರದೊಳಗೆ ಸಿಎಎ ಜಾರಿಗೆ ತರುವುದಾಗಿ ಸಮುದಾಯಕ್ಕೆ ಭರವಸೆ ನೀಡಿದ್ದರು. 

ಠಾಕೂರ್ ಮಾತ್ರವಲ್ಲ, ನಿತೀಶ್ ಪ್ರಮಾಣಿಕ್ ಅವರೂ ಶೀಘ್ರವೇ ಸಿಎಎ ಜಾರಿಗೆ ತರುವುದಾಗಿ ತಿಳಿಸಿದ್ದರು. ಇದೀಗ ಠಾಕೂರ್ ತಮ್ಮ ಮಾತನ್ನು ಬದಲಿಸಿ, ಏಳು ದಿನಗಳ ಒಳಗೆ ಕಾಯ್ದೆಯ ನಿಯಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯ ನಂತರ 2014 ಡಿಸೆಂಬರ್ 31ರ ಮೊದಲು ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಧರ್ಮಗಳು (ಹಿಂದೂಗಳು, ಸಿಖ್ಖರು, ಪಾರ್ಸಿಗಳು, ಜೈನರು, ಬೌದ್ಧಮತೀಯರು ಹಾಗೂ ಕ್ರಿಶ್ಚಿಯನ್ನರು) ವೇಗವಾಗಿ ಪೌರತ್ವ ಪಡೆಯಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...