ಜನರ ವಿಶ್ವಾಸ ಗಳಿಸದ ಬಿಜೆಪಿ ಆಪರೇಷನ್ ಕಮಲದಲ್ಲಿ ಶಾಸಕರನ್ನು ಲಪಟಾಯಿಸುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

Date:

ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಸಿನಿಂದ ಹಲವಾರು ನಾಯಕರು ದುಂಬಾಲು ಬಿದ್ದಿದ್ದಾರೆ. ಅವರು ಹಿಂದೆಯೂ ಎರಡು ಬಾರಿ ಹಾಗೇ ಮಾಡಿದ್ದಾರೆ. 2008 ರಿಂದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಇದ್ದಾಗಲೂ ಇದನ್ನೇ ಮಾಡಿದ್ದು. ಎಲ್ಲಾ ಕಡೆ ಕೊಂಡುಕೊಳ್ಳಲು ಪ್ರಯತ್ನ ಮಾಡುತ್ತಾರೆ. ಕೊಂಡುಕೊಳ್ಳಲು ಜನ ಸಿಕ್ಕರೆ ಸರ್ಕಾರ ರಚನೆ ಮಾಡುತ್ತಾರೆ” ಎಂದರು.

ಬಿಜೆಪಿಗೆ ಜನ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಜನರು ಬಿಜೆಪಿಗೆ ಜನ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ. 2008, 2013, 2018 ರಲ್ಲಿ ಅವರು ಬಹುಮತದಿಂದ ಗೆದ್ದೇ ಇಲ್ಲ. ಕಾಂಗ್ರೆಸ್ ಪಕ್ಷ 2013ರಲ್ಲಿ ಗದ್ದಿದೆ. 2018 ರಲ್ಲಿ ಸೋತು ಪುನಃ 2023 ರಲ್ಲಿ 136 ಸ್ಥಾನಗಳನ್ನು ಪಡೆದು ಗೆದ್ದಿದ್ದೇವೆ. ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಹಾಗೂ ತೀರ್ಪಿನಂತೆ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬರುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ

ಮಂಡ್ಯದಲ್ಲಿ ಹನುಮಧ್ವಜ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷರು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಯಿಸಿ, “ಮಂಡ್ಯದ ಪ್ರಕರಣದ ವಾಸ್ತವಾಂಶವೇ ಅವರಿಗೆ ತಿಳಿದಿಲ್ಲ. ಅಲ್ಲಿ ಕೇವಲ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಹಾರಿಸುವುದಾಗಿ ಕೆರಗೋಡು ಗ್ರಾಮ ಪಂಚಾಯ್ತಿಯಲ್ಲಿ ಅನುಮತಿ ಪಡೆದುಕೊಂಡು ಕೇಸರಿ ಧ್ವಜ ಹಾರಿಸಲು ಮುಂದಾಗಿದ್ದರು. ಅವರಿಗೆ ರಾಷ್ಟ್ರಧ್ವಜದ ಬಗ್ಗೆ ಯಾವುದೇ ಗೌರವವಿಲ್ಲ. ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ. ಇಂತಹ ರಾಷ್ಟ್ರಧ್ವಜವನ್ನು ಹಾಕಲು ಒಪ್ಪದಿರುವವರು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ” ಎಂದು ಹರಿಹಾಯ್ದರು.

ಮಂಡ್ಯದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಕಾಂಗ್ರೆಸ್ ಕಾಶ್ಮೀರದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವುದಿಲ್ಲ ಎಂಬ ಬಿಜೆಪಿಯವರ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಕಾಂಗ್ರೆಸ್ ಪಕ್ಷ ರಾಷ್ಟ್ರಧ್ವಜಕ್ಕೆ ಸದಾ ಗೌರವ ನೀಡುತ್ತದೆ. 1935 ರಲ್ಲಿ ದೇಶಕ್ಕೆ ರಾಷ್ಟ್ರಧ್ವಜವನ್ನು ನೀಡಿದವರು ಕಾಂಗ್ರೆಸ್ ಪಕ್ಷ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...