ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ಬಿಜೆಪಿ ಹಿಂದೇಟು: ಕನಿಮೊಳಿ

Date:

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ದುರಂತ ಅಥವಾ ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಿದ್ಧವಿಲ್ಲ ಎಂದು ಡಿಎಂಕೆ ಸಂಸದೆ ಕನಿಮೊಳಿ ಹೇಳಿದ್ದಾರೆ.

“ತಮಿಳುನಾಡಿನ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸುವ ಏಳು ದಿನಗಳ ಮೊದಲು ಎಚ್ಚರಿಕೆ ನೀಡಿರುವುದಾಗಿ ಕೇಂದ್ರ ಸರ್ಕಾರ ಈ ಹಿಂದೆ ಹೇಳಿಕೊಂಡಿತ್ತು. ಕೇಂದ್ರದ ಹೇಳಿಕೆಯನ್ನು ತಮಿಳು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅದನ್ನು ನಿರಾಕರಿಸಿದ್ದಾರೆ ಎಂದು ಕನಿಮೋಳಿ ಹೇಳಿದ್ದಾರೆ. ಈಗ ವಯನಾಡ್ ದುರಂತದ ವಿಚಾರದಲ್ಲಿಯೂ ಅವರು ಅದೇ ರೀತಿ ಮಾಡುತ್ತಿದ್ದಾರೆ. ಕೇಂದ್ರದ ಸಮರ್ಥನೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಾರಾಸಗಟಾಗಿ ನಿರಾಕರಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಬಿಜೆಪಿ ಸಂಕಷ್ಟದಲ್ಲಿರುವ ರಾಜ್ಯಗಳನ್ನು ಬೆಂಬಲಿಸುವುದಿಲ್ಲ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ರಾಜ್ಯಗಳಿಗೆ ನಿಧಿ ಹಂಚಿಕೆ ಮಾಡುವ ಮೂಲಕ, ಉಳಿದ ರಾಜ್ಯಗಳನ್ನು ಕಡೆಗಣಿಸುತ್ತಿದೆ. ಅದಕ್ಕಾಗಿ, ರಾಜ್ಯ ಸರ್ಕಾರಗಳ ಮೇಲೆ ಸುಳ್ಳು ಆರೋಪಗಳನ್ನು ಮುಂದುವರೆಸಿದೆ” ಎಂದು ಕನಿಮೊಳಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...