ಓರ್ವ ಸಂಸದೆಯ ಧ್ವನಿ ಹತ್ತಿಕ್ಕಿ ಬಿಜೆಪಿ ಭಾರೀ ಬೆಲೆ ತೆತ್ತಿದೆ, 63 ಸ್ಥಾನ ಕಳೆದುಕೊಂಡಿದೆ: ಮಹುವಾ ಮೊಯಿತ್ರಾ

Date:

ಕಳೆದ ಲೋಕಸಭೆ ಅಧಿವೇಶನದಲ್ಲಿ ತನ್ನನ್ನು ಉಚ್ಚಾಟಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ “ಓರ್ವ ಸಂಸದೆಯ ಧ್ವನಿ ಹತ್ತಿಕ್ಕಿ ಬಿಜೆಪಿ ಭಾರೀ ಬೆಲೆ ತೆತ್ತಿದೆ, 63 ಸ್ಥಾನ ಕಳೆದುಕೊಂಡಿದೆ” ಎಂದು ಕುಟುಕಿದರು.

ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಅವರು, “ಸರ್ಕಾರದ ಭಾಷಣ ಬರಹಗಾರರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಜುಗರಕ್ಕೀಡುಮಾಡಿದ್ದಾರೆ. ಆಡಳಿತ ಪಕ್ಷಕ್ಕೆ ಲೋಕಸಭೆಯಲ್ಲಿ ಬಹುಮತ ಇಲ್ಲದಿದ್ದರೂ ಕೂಡಾ ಭಾಷಣದಲ್ಲಿ ಸ್ಪಷ್ಟವಾದ ಸ್ಥಿರ ಸರ್ಕಾರಕ್ಕಾಗಿ ಬಹುಮತದ ಜನಾದೇಶವಾಗಿದೆ ಎಂದು ಬರೆಯಲಾಗಿದೆ” ಎಂದು ರಾಷ್ಟ್ರಪತಿ ಭಾಷಣವನ್ನು ಟೀಕಿಸಿದರು.

ಇದನ್ನು ಓದಿದ್ದೀರಾ?  ಸಂಸತ್‌ನಿಂದ ಉಚ್ಛಾಟನೆ | ನನ್ನ ಗೆಲುವು ಉತ್ತರ ನೀಡುತ್ತದೆ: ಮಹುವಾ ಮೊಯಿತ್ರಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಸ್ಥಿರ ಸರಕಾರವಲ್ಲ. ಇದು ಯು-ಟರ್ನ್‌ಗಳ ಇತಿಹಾಸ ಹೊಂದಿರುವ ಬಹು ಮಿತ್ರರಾಷ್ಟ್ರಗಳ ಮೇಲೆ ಅವಲಂಬಿತವಾಗಿದೆ. 272 ಸ್ಥಾನ ಪಡೆಯುವುದಕ್ಕೆ ಬಿಜೆಪಿಗೆ 32 ಸ್ಥಾನ ಕಡಿಮೆಯಾಗಿದೆ. ಈ ಬಾರಿ 234 ಯೋಧರು ದೃಢವಾಗಿ ಒಗ್ಗೂಡಿದ್ದಾರೆ. ಈ ಬಾಗಿಲುಗಳ ಮೂಲಕ ನಡೆಯಲು ನಾವು ಬೆಂಕಿಯನ್ನು ದಾಟಿ ಬಂದಿದ್ದೇವೆ. ಹಾಗಾಗಿ ಈ ಬಾರಿ ನಮ್ಮನ್ನು ಮೌನವಾಗಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ನಗದು-ಪ್ರಶ್ನೆ ಆರೋಪದ ಮೇಲೆ 17ನೇ ಲೋಕಸಭೆಯಿಂದ ತನ್ನ ಉಚ್ಚಾಟನೆಯನ್ನು ಉಲ್ಲೇಖಿಸಿ ಮಾತನಾಡಿದ ಮಹುವಾ, “ಕಳೆದ ಬಾರಿ ನಾನು ಇಲ್ಲಿ ಮಾತನಾಡಲು ಎದ್ದಾಗ, ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ಓರ್ವ ಸಂಸದೆಯ ಧ್ವನಿಯನ್ನು ಹತ್ತಿಕ್ಕಿ ಆಡಳಿತ ಪಕ್ಷ (ಬಿಜೆಪಿ) ಭಾರೀ ಬೆಲೆ ತೆತ್ತಿದೆ. ನೀವು ನನ್ನನ್ನು ಕೆಳಗಿಳಿಸಲು ಪ್ರಯತ್ನದಲ್ಲಿರುವಾಗ ಜನರು ನಿಮ್ಮ 63 ಸಂಸದರನ್ನು ಶಾಶ್ವತವಾಗಿ ಕೆಳಗಿಳಿಸಿದರು” ಟ್ಯಾಂಗ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...