‘ನನ್ನನ್ನೂ ಬಂಧಿಸಿ’ ಎನ್ನುತ್ತಿರುವ ಬಿಜೆಪಿಗರು; ಬಂಧನಕ್ಕೆ ಸೂಕ್ತ ಕಾರಣಗಳನ್ನಿಟ್ಟ ಕಾಂಗ್ರೆಸ್‌!

Date:

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಿಡುಗಡೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಗುರುವಾರ, ಬಿಜೆಪಿ ನಾಯಕರು ‘ನಾನೂ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಪೋಸ್ಟರ್‌ ಹಿಡಿದು ಪ್ರತಿಭಟನಾ ಅಭಿಯಾನ ನಡೆಸಿದ್ದಾರೆ. ಬಿಜೆಪಿಗರ ಪ್ರತಿಭಟನೆಗೆ ಕುಹಕವಾಡಿರುವ ಕಾಂಗ್ರೆಸ್‌, ಬಿಜೆಪಿ ನಾಯಕರ ಮೇಲಿರುವ ಆರೋಪಿಗಳನ್ನು ಪೋಸ್ಟರ್‌ನಲ್ಲಿ ಎಡಿಟ್‌ ಮಾಡಿ ಹಂಚಿಕೊಂಡಿದೆ.

ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಬಿಜೆಪಿಗರೆಲ್ಲರೂ ‘ನನ್ನನ್ನೂ ಬಂಧಿಸಿ’ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ” ಎಂದು ಹೇಳಿದೆ. ವಿಜಯೇಂದ್ರ ಅವರು ಹಿಡಿದಿದ್ದ ಪೋಸ್ಟರ್‌ ಅನ್ನು ಎಡಿಟ್ ಮಾಡಿ, “ನಾನು ಆರ್‌ಟಿಜಿಎಸ್‌ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿ ರೂ. ಅಕ್ರಮದಲ್ಲಿ ಪಾಲುದಾರ, ನನ್ನನ್ನು ಬಂಧಿಸಿ” ಎಂದು ಬರೆದಿದೆ.

 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಶ್ವರಪ್ಪ ಅವರ ಪೋಸ್ಟರ್‌ಅನ್ನು ‘ನಾನು 40 ಪರ್ಸೆಂಟ್ ಕಮಿಷನ್ ನುಂಗಿ ಸಂತೋಷ್ ಪಾಟೀಲ್ ಸಾವಿಗೆ ಕಾರಣನಾಗಿದ್ದೇನೆ. ನನ್ನನ್ನು ಬಂಧಿಸಿ’ ಎಂದು ಎಡಿಟ್ ಮಾಡಲಾಗಿದ್ದು, “ಈಶ್ವರಪ್ಪ ಅವರು ಹಿಡಿಯಬೇಕಾದ ಪೋಸ್ಟರ್ ಇದು! ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ!” ಎಂದು ಕಾಂಗ್ರೆಸ್‌ ಪೋಸ್ಟ್‌ ಮಾಡಿದೆ.

ಈ ಸುದ್ದಿ ಓದಿದ್ದೀರಾ?: ಬಾಬಾಬುಡನ್‌ಗಿರಿ ಗೋರಿ ಧ್ವಂಸ ಕೇಸ್ ರೀ ಓಪನ್ ಆಗಿಲ್ಲ | ದೃಶ್ಯ ಮಾಧ್ಯಮಗಳ ವರದಿ ಸುಳ್ಳು: ಸಿಎಂ ಕಚೇರಿ ಸ್ಪಷ್ಟನೆ

ಮಾಜಿ ಸಚಿವ ಸುನೀಲ್ ಕುಮಾರ್ ಅವರ ಪೋಸ್ಟರ್‌ಅನ್ನು, ‘ಪರಶುರಾಮ ಮೂರ್ತಿಯ ಕಂಚನ್ನು ಕದ್ದಿದ್ದೇನೆ. ಸರ್ಕಾರಿ ಸಿಮೆಂಟ್ ಕದ್ದಿದ್ದೇನೆ. ನನ್ನನ್ನೂ ಬಂಧಿಸಿ’ ಎಂದು ಎಡಿಟ್‌ ಮಾಡಿದ್ದು, “ನನ್ನನ್ನೂ ಬಂಧಿಸಿ ಎನ್ನುತ್ತಿರುವ ಸುನಿಲ್ ಕುಮಾರ್ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ? ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ?” ಎಂದು ಟೀಕಿಸಿದೆ.

ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಪೋಸ್ಟ್‌ಅನ್ನು ‘ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ, ನನ್ನನ್ನೂ ಬಂಧಿಸಿ’ ಎಂದು ಎಡಿಟ್ ಮಾಡಿರುವ ಕಾಂಗ್ರೆಸ್‌, “ರಾಜ್ಯ ಬಿಜೆಪಿ ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು. ಸಿಟಿ ರವಿ ಅವರೇ ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ?” ಎಂದು ವ್ಯಂಗ್ಯವಾಡಿದೆ.

ಸಂಸದ ಪ್ರತಾಪ್ ಸಿಂಹ ಅವರ ಪೋಸ್ಟರ್‌ಅನ್ನು, ‘ನಾನು ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟು ಸಹಕರಿಸಿದ್ದೇನೆ, ನನ್ನನ್ನೂ ಬಂಧಿಸಿ’ ಎಂದು ಎಡಿಟ್ ಮಾಡಿರುವ ಕಾಂಗ್ರೆಸ್, “ಪ್ರತಾಪ್ ಸಿಂಹ ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ, ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ!” ಎಂದು ಕುಟುಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...