ಬಿಜೆಪಿಯಿಂದ ಎಎಪಿ ಅಭ್ಯರ್ಥಿಗಳ ಬೇಟೆ ಆರೋಪ; ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಆದೇಶ

Date:

ದೆಹಲಿ ವಿಧಾನಸಭಾ ಚುನವಣೆ ನಡೆದಿದ್ದು, ಫೆಬ್ರವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿಗಳನ್ನು ಬಿಜೆಪಿ ಬೇಟೆಯಾಡಲು (ಖರೀದಿಸಿ, ಪಕ್ಷಕ್ಕೆ ಸೇರಿಸಿಕೊಳ್ಳಲು) ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಅವರ ಆರೋಪದ ವಿರುದ್ಧ ಬಿಜೆಪಿ ದೂರು ನೀಡಿದ್ದು, ಈ ಬೆನ್ನಲ್ಲೇ, ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಆದೇಶಿಸಿದ್ದಾರೆ.

ಎಎಪಿಯ ಆರೋಪಗಳು ಮಾನನಷ್ಟಕರ ಮತ್ತು ಚುನಾವಣಾ ಫಲಿತಾಂಶಕ್ಕೂ ಮುನ್ನ ತನ್ನ ವರ್ಚಸ್ಸಿಗೆ ಕಳಂಕ ತರುವ ಉದ್ದೇಶ ಹೊಂದಿವೆ ಎಂದು ಬಿಜೆಪಿ ವಾದಿಸಿದೆ. ಬಿಜೆಪಿ ದೂರು ಬಂದ ಬಳಿಕ, ಎಎಪಿ ಆರೋಪವು ತನಿಖೆಗೆ ಅರ್ಹವಾಗಿದೆ ಎಂದಿರುವ ಲೆಫ್ಟಿನೆಂಟ್ ಗವರ್ನರ್, ತನಿಖೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇತ್ತೀಚೆಗೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಕೇಜ್ರಿವಾಲ್, “ಎಎಪಿಯ 16 ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಆಫರ್‌ಗಳು ಬಂದಿವೆ. ಎಎಪಿ ಜೊರೆದು ಬಿಜೆಪಿಗೆ ಪಕ್ಷಾಂತರ ಮಾಡಿದರೆ ಅವರಿಗೆ ಸಚಿವ ಸ್ಥಾನಗಳು ಮತ್ತು ತಲಾ 15 ಕೋಟಿ ರೂ. ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ಏಜೆನ್ಸಿಗಳು ಆ ಪಕ್ಷವು (ಬಿಜೆಪಿ) 55ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳುತ್ತಿವೆ. ಕಳೆದ ಎರಡು ಗಂಟೆಗಳಲ್ಲಿ, ನಮ್ಮ 16 ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಕರೆಗಳು ಬಂದಿವೆ. ಅವರಿಗೆ ಎಎಪಿ ತೊರೆದು ತಮ್ಮ ಪಕ್ಷಕ್ಕೆ ಸೇರಿದರೆ, ಅವರನ್ನು ಮಂತ್ರಿಗಳನ್ನಾಗಿ ಮಾಡಿ ತಲಾ 15 ಕೋಟಿ ರೂ. ನೀಡಲಾಗುವುದು ಎಂಬ ಆಮಿಷವೊಡ್ಡಲಾಗಿದೆ” ಎಂದು ಕೇಜ್ರಿವಾಲ್ ವಿವರಿಸಿದ್ದಾರೆ.

“ಬಿಜೆಪಿ ನಿಜವಾಗಿಯೂ 55ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾದರೆ, ಅವರು ನಮ್ಮ ಅಭ್ಯರ್ಥಿಗಳನ್ನು ಏಕೆ ತಮ್ಮ ಪಕ್ಷಕ್ಕೆ ಕರೆಯುತ್ತಿದ್ದಾರೆ? ಈ ನಕಲಿ ಸಮೀಕ್ಷೆಗಳು ಎಎಪಿ ಅಭ್ಯರ್ಥಿಗಳನ್ನು ವಿಚಲಿತಗೊಳಿಸುವ ವಾತಾವರಣ ಸೃಷ್ಟಿಸುವ ಪಿತೂರಿ ಭಾಗವಾಗಿವೆ. ಆದರೆ, ನಮ್ಮ ಅಭ್ಯರ್ಥಿಗಳಲ್ಲಿ ಯಾರೂ ಪಕ್ಷಾಂತರ ಮಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ಆರೋಪದ ವಿರುದ್ಧ ಲೆಫ್ಟಿನೆಂಟ್‌ ಗವರ್ನರ್‌ಗೆ ಬಿಜೆಪಿ ದೂರು ನೀಡಿದೆ. ದೂರು ಬಂದ ಬೆನ್ನಲ್ಲೇ ತನಿಖೆಗೆ ಆದೇಶಿಸಲಾಗಿದೆ.

“ಈ ವಿಷಯದ ಬಗ್ಗೆ ಸತ್ಯವನ್ನು ತಿಳಿಯಲು ಭ್ರಷ್ಟಾಚಾರ ನಿಗ್ರಹ ದಳ (ACB) ಮೂಲಕ ಸಂಪೂರ್ಣ ತನಿಖೆ ನಡೆಸಬೇಕು” ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹೇಳಿರುವುದಾಗಿ ಅವರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.

ದೆಹಲಿಯ ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಬುಧವಾರ ಮತದಾನ ನಡೆದಿದೆ. ಶನಿವಾರ ಮತಗಳ ಎಣಿಕೆ ನಡೆಯಲಿದೆ. ಬುಧವಾರ ಸಂಜೆ ಹಲವಾರು ಚುನಾವಣೊತ್ತರ ಸಮೀಕ್ಷೆಗಳು ಬಂದಿದ್ದು, ಈ ಬಾರಿ ಬಿಜೆಪಿ ಅಧಿಕಾರ ಪಡೆಯುತ್ತದೆ ಎಂದು ಹೇಳುತ್ತಿವೆ. ಆದಾಗ್ಯೂ, 3ನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿ ಎಎಪಿ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...