ಬಿಜೆಪಿ ಪ್ರತಿಭಟನೆ | ಮನುಷ್ಯತ್ವ ಇಲ್ಲದ ರಾಜ್ಯ ಸರಕಾರ; ಪಿ.ರಾಜೀವ್ ಟೀಕೆ

Date:

“ಈ ಸರಕಾರಕ್ಕೆ ಹಾಲಿನ ಪ್ರೋತ್ಸಾಹಧನ ನೀಡಲು ಮನುಷ್ಯತ್ವ ಇಲ್ಲ. ಹಾಗಾಗಿ ದನಗಳನ್ನು ತೆಗೆದುಕೊಂಡು ಹೋಗಿ ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಎಚ್ಚರಿಕೆ ನೀಡಿದರು.

ಬಿಜೆಪಿ ಬೆಂಗಳೂರು ಮಹಾನಗರ ವತಿಯಿಂದ ಮಂಗಳವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಸರಕಾರದ ವಿರುದ್ಧ ಜಾನುವಾರುಗಳು ತಿರುಗಿ ಬಿದ್ದಿವೆ. ಜಾನುವಾರುಗಳಿಗೆ ಪಶು ಆಸ್ಪತ್ರೆಗಳಿಲ್ಲ” ಎಂದರು.

“ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಪಶು ಆಸ್ಪತ್ರೆಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡುವ ಮುಖಾಂತರ ಬೆಂಗಳೂರಿನಲ್ಲಿ ಹಾಲು ಉತ್ಪಾದಕರೂ ಇರಬಾರದು; ಹಾಲು ಕೊಡುವ ಗೋವುಗಳೂ ಇರಬಾರದು ಎಂಬ ಗೋವಿರೋಧಿ ಸರಕಾರ ರಾಜ್ಯದ್ದು” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾಲಿನ ಮನಸ್ಸುಗಳನ್ನು ವಿರೋಧಿಸುವ ಸರಕಾರ ರಾಜ್ಯದಲ್ಲಿದೆ. ಜಾನುವಾರುಗಳ ಜೊತೆ ನಾವು ವಿಧಾನಸೌಧ ಮುತ್ತಿಗೆ ಹಾಕುತ್ತೇವೆ ಎಂದು ಪ್ರಕಟಿಸಿದರು. ರೈತರಿಗೆ ಯಡಿಯೂರಪ್ಪನವರು ನೀಡುತ್ತಿದ್ದ ರೂ. 4 ಸಾವಿರ ಮೊತ್ತವನ್ನು ನಿಲ್ಲಿಸಿದ್ದಾರೆ. ಯಂತ್ರಧಾರೆಯ ಡೀಸೆಲ್ ಹಣವನ್ನು ನಿಲ್ಲಿಸಿದ್ದಾರೆ. ರೈತ ವಿದ್ಯಾಸಿರಿ ಸ್ಕಾಲರ್‌ಶಿಪ್‌ ಅನ್ನು ಸ್ಥಗಿತಗೊಳಿಸಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ರೈತರಿಗೆ ಕೃಷಿ ಇಲಾಖೆಯ ಸಬ್ಸಿಡಿ ಯಂತ್ರಗಳನ್ನೂ ಕೊಡುತ್ತಿಲ್ಲ. 850ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯನವರು ಇದರ ಕುರಿತು ತುಟಿ ಬಿಚ್ಚಿಲ್ಲ. ರೈತರು ದುಡ್ಡಿನ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೃಷಿ ಸಚಿವರು ಅತ್ಯಂತ ಅನಾಗರಿಕವಾಗಿ ಮಾತನಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ ಎಸ್ ನಡಹಳ್ಳಿ ಮಾತನಾಡಿ, “ಬಿಜೆಪಿ, ಯಡಿಯೂರಪ್ಪ ಅವರು ಜಾರಿಗೊಳಿಸಿದ ಎಲ್ಲ ರೈತಪರ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ಸ್ಥಗಿತಗೊಳಿಸಿದೆ. ಹಾಲಿನ ಪ್ರೋತ್ಸಾಹಧನ, ವಿದ್ಯಾಸಿರಿ ಶಿಷ್ಯವೇತನ ಸೇರಿ ಎಲ್ಲ ರೈತಪರ ಯೋಜನೆಗಳನ್ನು ನಿಲ್ಲಿಸಲಾಗಿದೆ” ಎಂದು ಟೀಕಿಸಿದರು.

“ಹಾಲಿನ ಪ್ರೋತ್ಸಾಹಧನ ನಿಲ್ಲಿಸಿ, ಅಧಿಕಾರ, ಮತಕ್ಕಾಗಿ ಖಜಾನೆಯಲ್ಲಿ ಇರುವ ದುಡ್ಡನ್ನು ಬೇಡದೆ ಇರುವವರಿಗೆಲ್ಲ ಖಾತೆಗೆ ಹಾಕುವ ಸರಕಾರ ಇದು. ಹಾಲು ಉತ್ಪಾದಕ ರೈತರು, ರೈತ ಮಹಿಳೆಯರಿಗೆ ವಿಷ ಕೊಡುವ ಕೆಲಸವನ್ನು ಸಿದ್ದರಾಮಯ್ಯರ ಸರಕಾರ ಮಾಡುತ್ತಿದೆ. ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಾನುವಾರುಗಳ ಜೊತೆ ಸಾಂಕೇತಿಕ ಹೋರಾಟ ಮಾಡಲಾಗುತ್ತಿದೆ” ಎಂದರು.

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...