ಚುನಾವಣಾ ಫಲಿತಾಂಶದ ಭಯದಿಂದ ಬಿಜೆಪಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಮುಂದಿಡುತ್ತಿದೆ: ಯೋಗೇಂದ್ರ ಯಾದವ್

Date:

ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಭಯದಿಂದ ಬಿಜೆಪಿಯು, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ಮುಂದಿಡುತ್ತಿದೆ ಎಂದು ‘ಸ್ವರಾಜ್ ಇಂಡಿಯಾ’ದ ನಾಯಕ, ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಥಾಣೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯೋಗೇಂದ್ರ ಯಾದವ್, ‘ಬಿಜೆಪಿಯವರ ಒಂದು ಎಂಬುದು ಕೇವಲ ಒಂದನ್ನು ಮಾತ್ರ ಉತ್ತೇಜಿಸುವ ಪರಿಕಲ್ಪನೆಯೇ ಹೊರತು ಬೇರೇನೂ ಅಲ್ಲ. ಮಿಝೋರಾಂ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ಸೇರಿ ಒಟ್ಟು ಐದು ರಾಜ್ಯಗಳಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಈ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಬಿಜೆಪಿ ಭಯಗೊಂಡಿದೆ. ಹಾಗಾಗಿಯೇ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ಮುಂದಿಡುತ್ತಿದೆ’ ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಒಂದು ರಾಷ್ಟ್ರ, ಒಂದು ಚುನಾವಣೆ’ಯು ಚುನಾವಣಾ ಸುಧಾರಣೆಯ ವಿಚಾರವಾಗಿ ಯಾವುದೇ ಸಂಬಂಧವನ್ನು ಹೊಂದಿಲ್ಲ. ಮೂಲ ಪರಿಕಲ್ಪನೆಗಿಂತಲೂ ಇದು ವಿಭಿನ್ನವಾಗಿದೆ. 2024ರ ಲೋಕಸಭೆ ಚುನಾವಣೆ ಮುಂದಿನ 50 ವರ್ಷಗಳ ಕಾಲ ದೇಶದ ದಿಕ್ಕನ್ನು ನಿರ್ಧರಿಸಲಿದೆ. ಹೀಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆ ದೇಶದ ಜನತೆಗೆ ಅತ್ಯಂತ ಮಹತ್ವದ್ದಾಗಿದೆ’ ಎಂದು ಯೋಗೇಂದ್ರ ಯಾದವ್ ಹೇಳಿದರು.

‘ಸದ್ಯ ದೇಶವು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಜನರು ಅವುಗಳನ್ನು ಒಟ್ಟಾರೆಯಾಗಿ ಪರಿಗಣಿಸದ ಹೊರತು, ಅವುಗಳನ್ನು ಎಂದಿಗೂ ಪರಿಣಾಮಕಾರಿಯಾಗಿ ಪರಿಹರಿಸಲಾಗುವುದಿಲ್ಲ. ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಹಾಗಾಗಿ, ಬಿಜೆಪಿಯು ಅದರ ಬಗ್ಗೆ ಚಿಂತಿಸುತ್ತಿದೆ’ ಎಂದು ಯಾದವ್ ಹೇಳಿದರು.

ಹಿಂಸಾಚಾರ

‘ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯ ವಿಷಯಗಳು ವಿಭಿನ್ನವಾದವು. ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತದಾರರ ಬಳಿಗೆ ಬಿಜೆಪಿಯವರು ಹೋದಾಗ ಅವರು ಸ್ಥಳೀಯ ಸಮಸ್ಯೆಗಳನ್ನು ಉಲ್ಲೇಖಿಸುತ್ತಿದ್ದಾರೆ. ಇದಕ್ಕೆ ಬಿಜೆಪಿಯವರಿಗೆ ಉತ್ತರಿಸಲು ಕಷ್ಟಕರವಾಗುತ್ತಿದೆ ಎಂದು ಯಾದವ್ ತಿಳಿಸಿದರು.

ಬಿಜೆಪಿಯು ಜಾತಿ ಗಣತಿ ನಡೆಯುವುದನ್ನು ಬಯಸುವುದಿಲ್ಲ. ಏಕೆಂದರೆ, ಜಾತಿಗಣತಿಯ ಫಲಿತಾಂಶವು ವಿವಿಧ ಜಾತಿಗಳ ನಿಜವಾದ ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ. ಅದು ಬಹಿರಂಗಗೊಂಡರೆ ಬಿಜೆಪಿಯವರಿಗೆ ಇದನ್ನು ನಿಭಾಯಿಸಲು ಕಷ್ಟವಾಗುತ್ತದೆ ಎಂಬುದರ ಬಗ್ಗೆ ತಿಳಿದಿದೆ. ಹಾಗಾಗಿಯೇ ವಿರೋಧ ವ್ಯಕ್ತಪಡಿಸುತ್ತಿದೆ. ಜಾತಿ ಗಣತಿಯು ದೇಶದ ಸಾಮಾಜಿಕ ವ್ಯವಸ್ಥೆಯ ಎಕ್ಸ್‌-ರೇ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಅಭಿಪ್ರಾಯಿಸಿದರು.

ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, 2024ರ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಬಹುದು. ಏಕೆಂದರೆ ಹಲವಾರು ರಾಜ್ಯಗಳಲ್ಲಿ ಬಿಜೆಪಿಯ ಜನಪ್ರಿಯತೆ ಕುಸಿಯುತ್ತಿದೆ. ನಿರುದ್ಯೋಗ, ಬೆಲೆ ಏರಿಕೆ, ಕೋಮು ಸೌಹಾರ್ದತೆ ಮತ್ತು ಮಹಿಳೆಯರು ಮತ್ತು ರೈತರ ಕಲ್ಯಾಣವನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಇಂಡಿಯಾ ಒಕ್ಕೂಟವು ಕ್ರಿಯಾ ಯೋಜನೆಗಳೊಂದಿಗೆ ಜನರ ಬಳಿಗೆ ಹೋಗಬೇಕು. ಆಗ ಮಾತ್ರ ಜನರು ಮತ ನೀಡಬಹುದು ಎಂದು ಯೋಗೇಂದ್ರ ಯಾದವ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...