ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

Date:

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಇದನ್ನೇ ನ್ಯಾಯಾಲಯದಲ್ಲಿ ತಿಳಿಸಲಾಗಿದೆ. ಈ ವಿಷಯವನ್ನು ತಮಗೆ ಸಿಕ್ಕಿದ ಜಯ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಬಿಂಬಿಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದರು.

“ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆಗೆ ಅನುಮತಿಗಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಈ ಕುರಿತು ತಿಳಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ವೇಳೆಯೂ ಇದನ್ನು ತಿಳಿಸಲಾಗಿದೆ. ಆದರೆ ಕಾಂಗ್ರೆಸ್‌ ನಾಯಕರು ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಹಣ ಬಿಡುಗಡೆಗಾಗಿಯೇ ಅನುಮತಿ ಕೇಳಿರುವಾಗ ಕಾಂಗ್ರೆಸ್‌ ಪಾತ್ರ ಇದರಲ್ಲಿ ಏನೂ ಇಲ್ಲ. ಜಯ ಸಿಗಲು ಕಾಂಗ್ರೆಸ್‌ನ ವಕೀಲರು ಏನೂ ವಾದ ಮಾಡಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲಾ ಅವರು ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಾರೆ? ಇಲ್ಲಿ ಬಾಂಬ್‌ ಸ್ಫೋಟ ಆಗಿರುವಾಗ ನಿಮಗೆ ಮತ ಕೇಳಲು ಯಾವ ಅಧಿಕಾರ ಇದೆ? ಕೇಂದ್ರ ಸರ್ಕಾರ ಕ್ರಮ ವಹಿಸಿದ್ದರಿಂದಲೇ ಬರ ಪರಿಹಾರ ಹಲವಾರು ರಾಜ್ಯಗಳಿಗೆ ದೊರೆಯುತ್ತಿದೆ. ಈಗಾಗಲೇ ಬರ ಪರಿಹಾರವನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಬೇಕಿತ್ತು. ಎಸ್‌ಡಿಆರ್‌ಎಫ್‌ನಿಂದ 700 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ರಾಜ್ಯ ಸರ್ಕಾರವೇ ನೀಡಿದಂತೆ ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ” ಎಂದು ಅಶೋಕ್ ತಿಳಿಸಿದರು.

“2013-14 ರಲ್ಲಿ ಬರ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ 9 ತಿಂಗಳು ತೆಗೆದುಕೊಂಡಿದ್ದರು. ಕೇಂದ್ರದಲ್ಲೀಗ ಬಿಜೆಪಿ ಇದೆ ಎಂಬ ಕಾರಣಕ್ಕೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಮೋದಿ ಸರ್ಕಾರ 7,940 ಕೋಟಿ ರೂ. ಪರಿಹಾರ ನೀಡಿದ್ದರೆ, ಮನಮೋಹನ್‌ ಸಿಂಗ್‌ ಸರ್ಕಾರ 3,000 ಕೋಟಿ ರೂ. ನೀಡಿದೆ. ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ” ಎಂದು ದೂರಿದರು.

“ಕಾಂಗ್ರೆಸ್‌ ವಿರುದ್ಧ ಹಿಂದೂಗಳು ಕೆರಳುತ್ತಿದ್ದಾರೆ. ಹಿಂದೂಗಳ ರಕ್ತವನ್ನು ಮತಾಂಧರು ಹರಿಸುತ್ತಿದ್ದು, ಇದನ್ನು ಮರೆಮಾಚಲು ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ನೇಹಾ ಹತ್ಯೆಯ ತನಿಖೆಯನ್ನು ಸಿಬಿಐಗೆ ಕೊಡದೆ ಸಿಐಡಿಗೆ ನೀಡಿ ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಅವರ ತಂದೆಯೇ ಲವ್‌ ಜಿಹಾದ್‌ ಹೇಳಿದ್ದಾರೆ. ಈ ಪ್ರಕರಣವನ್ನು ಸೂಕ್ತವಾಗಿ ತನಿಖೆ ಮಾಡಲು ಸಿಬಿಆಐಗೆ ವಹಿಸಬೇಕು” ಎಂದು ಇದೇ ವೇಳೆ ಅಶೋಕ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಜೀವ್ ಗೌಡ, ಅಖಂಡ ಶ್ರೀನಿವಾಸಗೌಡ, ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ರಮೇಶ್‌ ಗೌಡ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...