ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ: ಸಿಎಂ ಸಿದ್ದರಾಮಯ್ಯ ಆರೋಪ

Date:

ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, “ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ” ಎಂದರು.

“ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ.‌ ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಸೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ. ಕಾಂಗ್ರೆಸ್ ಪಕ್ಷ ಚುನಾವಣೆ ನಡೆಸದಂತೆ ಬಿಜೆಪಿ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನುಸ್ಮೃತಿಯ ಮಾರಕ‌ ಮನಸ್ಥಿತಿ

“ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ. ಹೀಗಾಗಿ ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ ಮನಸ್ಥಿತಿ ಬಿಜೆಪಿಯದ್ದಾಗಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಣ ಇಲ್ಲದಂತೆ ಮಾಡಲು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಲಾಗಿದೆ” ಎಂದರು.

“ಸಿಎಎ, ಪುಲ್ವಾಮಾ, ಅಯೋಧ್ಯೆ ಹೆಸರಲ್ಲಿ ಇನ್ನೂ ಎಷ್ಟು ವರ್ಷ ಭಾರತೀಯರನ್ನು ಭಾವನಾತ್ಕವಾಗಿ ಮರಳು ಮಾಡ್ತೀರಿ? ಜನರ ಬದುಕಿನ ಸಮಸ್ಯೆಗಳಿಗೆ ನೆಪಕ್ಕೂ ಸ್ಪಂದಿಸದ ನೀವು ಕೇವಲ ಭಾವನಾತ್ಮಕವಾಗಿ ಕೆರಳಿಸುತ್ತಾ ಇದ್ದೀರಿ. ಆದರೆ ಭಾರತದ ಜನತೆ ನಿಮ್ಮನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ” ಎಂದು ಕಿಡಿಕಾರಿದರು.

ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...