ಗೋಡ್ಸೆ ಭಾರತದ ಸುಪುತ್ರ ಎನ್ನಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಭೂಪೇಶ್ ಬಘೇಲ್ ಟೀಕೆ

Date:

ಮಹಾತ್ಮಾ ಗಾಂಧಿಯವರ ಹಂತಕ ನಾಥುರಾಂ ಗೋಡ್ಸೆಯನ್ನು ಭಾರತದ ಸುಪುತ್ರ ಎಂದು ಕರೆಯುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದು ಛತ್ತೀಸ್‌ಘಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಕಟುವಾಗಿ ಟೀಕಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಭಾಗವಾಗಿ ರಾಯ್‌ಪುರದಲ್ಲಿ ನಡೆದ ಆಡಳಿತಾರೂಢ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಬಘೇಲ್, “ಬಿಜೆಪಿ ನಾಯಕರು ಗೋಡ್ಸೆಯನ್ನು ಹೊಗಳಿ ಮಹಾತ್ಮಾ ಗಾಂಧಿಯನ್ನು ಅದೇಗೆ ಅಪ್ಪಿಕೊಳ್ಳುತ್ತಾರೆ” ಎಂದು ಪ್ರಶ್ನಿಸಿದರು.

“ನಾಥುರಾಂ ಗೋಡ್ಸೆ ಭಾರತದ ಸುಪುತ್ರ ಎಂದು ಕರೆಯುವುದಕ್ಕೆ ಬಿಜೆಪಿಯವರಿಗೆ ಎಷ್ಟು ನಾಚಿಕೆಯಾಗಬೇಕು. ಗೋಡ್ಸೆ ಅವರ ಆರಾಧ್ಯ ದೈವ. ಅವರ ಮುಖ್ಯ ಅಜೆಂಡಾ ಮತಾಂತರ ಮತ್ತು ಕೋಮುವಾದ. ನಾವು ಅದನ್ನು ಚುನಾವಣೆಯಲ್ಲಿ ಎದುರಿಸಬೇಕಿದೆ” ಎಂದು ಭೂಪೇಶ್ ಬಘೇಲ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೋದಿ ಗೋಡ್ಸೆ ಭಕ್ತರನ್ನು ಹೊರಹಾಕಲಿ, ಇಲ್ಲವೇ ಗಾಂಧಿ ನಮನದ ಸೋಗನ್ನು ಕೊನೆಗೊಳಿಸಲಿ: ಕಾಂಗ್ರೆಸ್

ಛತ್ತೀಸ್‌ಘಢ ವಿಧಾನಸಭೆಯಲ್ಲಿ ನಡೆದ ಘಟನೆಯನ್ನು ವಿವರಿಸಿದ ಬಘೇಲ್, “ಮಹಾತ್ಮ ಗಾಂಧಿ, ಅವರ ಕನ್ನಡಕ ಮತ್ತು ಅವರ ಲಾಠಿಗಳನ್ನು ನೀವು ಸ್ವೀಕರಿಸಿದ್ದೀರಿ ಎಂದು ನಾನು ಬಿಜೆಪಿ ಶಾಸಕರಿಗೆ ಹೇಳಿದೆ. ಅದು ನಿಮ್ಮ ಒಳ್ಳೆಯ ಸ್ವಭಾವ. ನೀವು ‘ಮಹಾತ್ಮ ಗಾಂಧಿ ಅಮರ್ ರಹೇ’ ಎಂಬ ಘೋಷಣೆ ಕೂಗುತ್ತೀರಿ. ಆದರೆ ಒಮ್ಮೆ ನೀವು ‘ನಾಥುರಾಂ ಗೋಡ್ಸೆ ಮುರ್ದಾಬಾದ್’ ಎಂದು ಹೇಳಬಹುದೇ ಎಂದು ಕೇಳಿದಾಗ ಅವರು ‘ಗೋಡ್ಸೆ ಮುರ್ದಾಬಾದ್’ ಎಂದು ಹೇಳಲು ಸಾಧ್ಯವಿಲ್ಲ ಎಂದರು. ಏಕೆಂದರೆ ಅವರು ಗೋಡ್ಸೆ ಅವರನ್ನು ತಮ್ಮ ಆದರ್ಶವೆಂದು ಪರಿಗಣಿಸುತ್ತಾರೆ” ಎಂದು ಹೇಳಿದರು.

“ಮಹಾತ್ಮ ಗಾಂಧಿಯವರ ಹಂತಕ ಮೊಘಲ್‌ ದೊರೆಗಳಾದ ಬಾಬರ್‌ ಮತ್ತು ಔರಂಗಜೇಬ್ ಅವರಂತೆ ಆಕ್ರಮಣಕಾರರಲ್ಲ. ಏಕೆಂದರೆ ಅವರು ಭಾರತದಲ್ಲಿ ಜನಿಸಿದರು” ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಗಿರಿರಾಜ್ ಸಿಂಗ್ ಛತ್ತೀಸ್‌ಘಡದ ದಾಂತೇವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದರು.

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಬಗ್ಗೆ ಮಾತನಾಡುವಾಗ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದರು. ನಾನು ಗೋಡ್ಸೆಯನ್ನು ಅರ್ಥಮಾಡಿಕೊಂಡಂತೆ ಮತ್ತು ಓದಿದ ಮಟ್ಟಿಗೆ, ಆತ ಕೂಡ ದೇಶಭಕ್ತನಾಗಿದ್ದ. ಆದರೆ ಗಾಂಧೀಜಿಯ ಹತ್ಯೆಯನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...