ರಾಷ್ಟ್ರೀಯತೆ, ದೇಶಭಕ್ತಿ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡಬೇಕಿಲ್ಲ: ಸಚಿವ ಎಂ ಬಿ ಪಾಟೀಲ್‌

Date:

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಮತ್ತು ದೇಶ ವಿಭಜನೆಯನ್ನು ತಡೆಯಲು ಶಕ್ತಿ ಮೀರಿ ಶ್ರಮಿಸಿದ್ದು ಕಾಂಗ್ರೆಸ್‌. ನಮಗೆ ಯಾರೂ ರಾಷ್ಟ್ರೀಯತೆಯನ್ನಾಗಲಿ, ದೇಶಭಕ್ತಿನ್ನಾಗಲಿ ಹೇಳಿಕೊಡಬೇಕಾಗಿಲ್ಲ. ಯಾರಾದರೂ ಪಾಕ್‌ ಪರ ಘೋಷಣೆ ಕೂಗಿರುವುದು ದೃಢಪಟ್ಟಲ್ಲಿ ಅಂಥವರಿಗೆ ಉಗ್ರ ಶಿಕ್ಷೆ ಕಾದಿದೆ. ಯಾರನ್ನೂ ರಕ್ಷಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ಸೈಯದ್‌ ನಾಸಿರ್‌ ಹುಸೇನ್‌ ಅವರ ವಿಜಯೋತ್ಸವದ ಸಂದರ್ಭದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಈ ಬೆಳವಣಿಗೆ ಕುರಿತು ಮಾಧ್ಯಮ ಪ್ರತಿನಿಧಿಗಳಳಿಗೆ ಪ್ರತಿಕ್ರಿಯಿಸಿದ ಅವರು, “ವಿಧಾನಸೌಧದ ಆವರಣದಲ್ಲಿ ಯಾರಾದರೂ ಪಾಕಿಸ್ತಾನದ ಪರ ಜೈಕಾರ ಹಾಕಿರುವುದು ಸಾಬೀತಾದರೆ ಅಂಥವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅಂತಹ ಶಕ್ತಿಗಳ ವಿರುದ್ಧ ಸರಕಾರ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಿದೆ. ಸದ್ಯಕ್ಕೆ ತನಿಖೆ ಆರಂಭಿಸಲಾಗಿದೆ” ಎಂದರು.

“ಈಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದ್ದರಿಂದ ಈಗಲೇ ತೀರ್ಮಾನಕ್ಕೆ ಬಂದು, ಯಾರ ಮೇಲೋ ಗೂಬೆ ಕೂರಿಸುವುದು ಸರಿಯಲ್ಲ. ಆದರೆ, ಬಿಜೆಪಿ ಇದಕ್ಕೂ ರಾಜಕೀಯ ಬಣ್ಣ ಬಳಿಯುತ್ತಿದ್ದು, ಲಾಭ ಮಾಡಿಕೊಳ್ಳಲು ಹೊರಟಿದೆ. ಹಿಂದೆ ಇಂತಹ ಘಟನೆಗಳು ವರದಿಯಾದಾಗ ಅವುಗಳ ಹಿಂದೆ ನಿಜವಾಗಿಯೂ ಇದ್ದವರು ಬಿಜೆಪಿಯ ಭಾಗವಾಗಿರುವ ಶ್ರೀರಾಮ ಸೇನೆಯ ಕಾರ್ಯಕರ್ತರು ಎನ್ನುವುದು ಗೊತ್ತಾಯಿತು. ಅಂದಮಾತ್ರಕ್ಕೆ ಈ ಘಟನೆಯಲ್ಲಿ ಯಾರಿಗೂ ರಿಯಾಯಿತಿ ನೀಡಲು ನಾನು ನೋಡುತ್ತಿಲ್ಲ ಅಥವಾ ಇದರ ಹಿಂದೆಯೂ ಬಿಜೆಪಿಯವರೇ ಇದ್ದಾರೆ ಎಂದು ನಾನು ಹೇಳಲು ಹೋಗುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಈ ಘಟನೆಯನ್ನು ಎನ್‌ ಐಎ ತನಿಖೆಗೆ ವಹಿಸುವಂತೆ ಆಗ್ರಹಿಸುತ್ತಿದೆ. ಎನ್‌ ಐಎ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಯಾವ ಘಟನೆಯ ವಿಚಾರಣೆಗೂ ಅದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಅದಕ್ಕೆ ಬೇಕೆನಿಸಿದರೆ ಈ ಘಟನೆಯ ಕುರಿತೂ ಬಂದು ತನಿಖೆ ಮಾಡಲಿ. ಬೇಡ ಎಂದಿರುವವರಾರು? ಪ್ರತಿಪಕ್ಷದ ಸಾಲಿನಲ್ಲಿದ್ದಾಗ ಸಿಬಿಐ, ಇ.ಡಿ ಮುಂತಾದ ತನಿಖಾ ಸಂಸ್ಥೆಗಳನ್ನು ಬೈಯುತ್ತಿದ್ದ ಬಿಜೆಪಿ, ತಾನೇ ಅಧಿಕಾರದಲ್ಲಿರುವಾಗ ಇವುಗಳ ಮೂಲಕವೇ ತನ್ನ ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದೆ” ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...