ಬಹುಮತವಿಲ್ಲದ ರಾಜ್ಯಗಳಲ್ಲಿ ಅಧಿಕಾರ ಪಡೆಯುವ ಬಿಜೆಪಿ ತಂತ್ರವನ್ನು ವಿವರಿಸಿದ ಕಪಿಲ್ ಸಿಬಲ್

Date:

ಬಿಜೆಪಿ ಬಹುಮತವಿಲ್ಲದ ರಾಜ್ಯಗಳಲ್ಲಿ ಅಧಿಕಾರ ಪಡೆಯುವ ಬಿಜೆಪಿ ತಂತ್ರವನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ವಿವರಿಸಿದ್ದಾರೆ. “ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬರುವುದೇ ಬಿಜೆಪಿಯ ತಂತ್ರ” ಎಂದು ಕಪಿಲ್ ಸಿಬಲ್ ಟೀಕಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಕಪಿಲ್ ಸಿಬಲ್ ಪೋಸ್ಟ್ ಮಾಡಿದ್ದಾರೆ. “ಬಿಜೆಪಿಯ ರಾಜಕೀಯ ತಂತ್ರವೇನೆಂದರೆ, ಅವರು ಅಧಿಕಾರದಲ್ಲಿಲ್ಲದ ಅಥವಾ ಬಹುಮತವಿಲ್ಲದ ರಾಜ್ಯಗಳಲ್ಲಿ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಅಧಿಕಾರಕ್ಕೆ ಬರುವುದು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನು ಓದಿದ್ದೀರಾ? ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಯಾವ ತಂತ್ರವನ್ನು ಪ್ರಯೋಗಿಸುತ್ತದೆ ಎಂಬುದನ್ನೂ ಕಪಿಲ್ ಸಿಬಲ್ ಹೇಳಿದ್ದಾರೆ. “ಅಧಿಕಾರಕ್ಕೆ ಬಂದ ನಂತರ ಮೈತ್ರಿ ಮಾಡಿಕೊಂಡ ಪಕ್ಷವನ್ನು ಮೂಲೆಗುಂಪು ಮಾಡಲಾಗುತ್ತದೆ. ಈಗಾಗಲೇ ಈ ತಂತ್ರ ಬಿಹಾರದಲ್ಲಿ ಯಶಸ್ವಿಯಾಗಿದೆ. ಈಗ ಈ ಆಟವನ್ನು ಮಹಾರಾಷ್ಟ್ರದಲ್ಲಿ ಆಡಲಾಗುತ್ತಿದೆ” ಎಂದು ಹೇಳಿದೆ.

ಬಿಹಾರದಲ್ಲಿ ಜೆಡಿಯು ಜತೆ ಮೊದಲ ಬಾರಿಗೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಅಧಿಕ ಸ್ಥಾನಗಳನ್ನು ಹೊಂದಿರಲಿಲ್ಲ. ಆದರೆ ಎರಡನೇ ಅವಧಿಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಿತು. ಹರಿಯಾಣದಲ್ಲಿ ಐಎನ್‌ಎಲ್‌ಡಿ ಜತೆ ಮೈತ್ರಿಯಲ್ಲಿಯೂ ಇದೇ ರೀತಿ ನಡೆದಿದೆ. ಇದೀಗ ಮಹಾರಾಷ್ಟ್ರದಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಶಿವಸೇನೆ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಸ್ಥಳೀಯ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಮಹಾರಾಷ್ಟ್ರದ 2,869 ಸ್ಥಾನಗಳಲ್ಲಿ 1,425 ಸ್ಥಾನಗಳನ್ನು ಗೆದ್ದು ಬಿಜೆಪಿ, ಮುಂಬೈ ಮತ್ತು ಪುಣೆ ಸೇರಿದಂತೆ 12ಕ್ಕೂ ಅಧಿಕ ಪುರಸಭೆಗಳಲ್ಲಿ ಏಕೈಕ ಅತಿದೊಡ್ಡ ಪಕ್ಷ ಎನಿಸಿಕೊಂಡಿದೆ. ಈ ಹಿಂದೆ ಠಾಕ್ರೆ, ಪವಾರ್ ಭದ್ರಕೋಟೆಯಾಗಿದ್ದ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಅಂದರೆ ಮೊದಲು ಬಹುಮತ ಇಲ್ಲದಾಗ ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದು, ಬಳಿಕ ಆ ಪಕ್ಷಗಳನ್ನೇ ಮೂಲೆಗುಂಪು ಮಾಡುವುದು ಎಂದು ಕಪಿಲ್ ಸಿಬಲ್ ಪೋಸ್ಟ್‌ನ ಅರ್ಥವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...