ಸ್ಪೀಕರ್ ಸ್ಥಾನಕ್ಕೆ ಹಗ್ಗಜಗ್ಗಾಟ; ಬಿಜೆಪಿ ಸಭಾಧ್ಯಕ್ಷ – ಟಿಡಿಪಿಗೆ ಉಪಸಭಾಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ

Date:

3ನೇ ಅವಧಿಯ ಎನ್‌ಡಿಎ ಸರ್ಕಾರದಲ್ಲಿ ಬಿಜೆಪಿ ಲೋಕಸಭಾ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಹಿಂದಿನ ಸರ್ಕಾರದಲ್ಲಿ ಸ್ಪೀಕರ್‌ ಆಗಿದ್ದ ಓಂ ಬಿರ್ಲಾ ಅವರೇ ಮತ್ತೊಂದು ಅವಧಿಗೆ ಸಭಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಸ್ಪೀಕರ್ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಲಿದ್ದು, ಅವರ ನಿರ್ಧಾರವನ್ನು ಬಿಜೆಪಿಯ ಮಿತ್ರಪಕ್ಷಗಳು ಒಪ್ಪಿಕೊಳ್ಳುತ್ತವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಜೂನ್ 24ರಿಂದ ಪ್ರಾರಂಭವಾಗುವ 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುಂಚಿತವಾಗಿ, ಸ್ಪೀಕರ್ ಆಯ್ಕೆ ಕುರಿತು ಎನ್‌ಡಿಎ ಮಿತ್ರಪಕ್ಷಗಳ ನಿರ್ಣಾಯಕ ಸಭೆ ಈ ವಾರ ನಡೆಯಲಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಡಿಎಯಲ್ಲಿ ಮುಂದುವರೆಯಲು ಮತ್ತು ಸರ್ಕಾರಕ್ಕೆ ಬೆಂಬಲ ನೀಡಲು ಬಿಜೆಪಿ ಮುಂದೆ ಟಿಡಿಪಿ ಇಟ್ಟಿದ್ದ ಬೇಡಿಕೆಗಳಲ್ಲಿ ಸ್ಪೀಕರ್ ಸ್ಥಾನವೂ ಒಂದಾಗಿತ್ತು. ಸ್ಪೀಕರ್ ಹುದ್ದೆಯನ್ನು ತಮ್ಮ ಪಕ್ಷಕ್ಕೆ ನೀಡಬೇಕೆಂದು ಟಿಡಿಪಿ ನಾಯಕರು ಒತ್ತಾಯಿಸಿದ್ದರು. ಆದರೂ, ಸಭಾಧ್ಯಕ್ಷ ಸ್ಥಾನವನ್ನು ತಮ್ಮಲ್ಲಿಯೇ ಉಳಿಸಿಕೊಳ್ಳಲು ಬಿಜೆಪಿ ಮುಂದಾಗಿದೆ.

“ಮಿತ್ರಪಕ್ಷಗಳಿಗೆ ಒಪ್ಪಿಗೆಯಾಗುವ ಸಭಾಧ್ಯಕ್ಷರನ್ನು ಆಯ್ಕೆ ಮಾಡುವುದು ಬಿಜೆಪಿ ಉದ್ದೇಶ. ಜೂನ್ 26 ರೊಳಗೆ ಸ್ಪೀಕರ್ ಆಯ್ಕೆಗೆ ಸುವ್ಯವಸ್ಥಿತ ವಿಧಾನವನ್ನು ರೂಪಿಸಲು ಜೂನ್ 20 ರಂದು ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಬಹುದು. ಸಭೆಯ ನಂತರ ಎಲ್ಲವೂ ಸ್ಪಷ್ಟವಾಗುತ್ತದೆ” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಸಂಸದೆ ಡಿ ಪುರಂದೇಶ್ವರಿ ಮತ್ತು ಆರು ಬಾರಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಹೆಸರುಗಳು ಕೂಡ ಮುನ್ನಲೆಯಲ್ಲಿವೆ. ಸಭೆಯಲ್ಲಿ ಟಿಡಿಪಿ ಕೂಡ ಸ್ಪೀಕರ್ ಸ್ಥಾನಕ್ಕೆ ಪಟ್ಟು ಹಿಡುವ ಸಾಧ್ಯತೆಗಳಿವೆ.

ಟಿಡಿಪಿಗೆ ಉಪ ಸ್ಪೀಕರ್ ಹುದ್ದೆ ಸಾಧ್ಯತೆ

ಸ್ಪೀಕರ್ ಸ್ಥಾನಕ್ಕೆ ಬೇಡಿಕೆ ಇಟ್ಟಿರುವ ಟಿಡಿಪಿಗೆ ಉಪ ಸ್ಪೀಕರ್ ಸ್ಥಾನವನ್ನು ನೀಡಿ, ಸಮಾಧಾನಿಸುವ ತಂತ್ರವನ್ನು ಬಿಜೆಪಿ ಎಣೆಯುತ್ತಿದೆ ಎಂದು ಹೇಳಲಾಗಿದೆ.

“ಸ್ಪೀಕರ್ ನೇಮಕದ ಜೊತೆಗೆ, ಲೋಕಸಭೆಯ ಉಪ ಸ್ಪೀಕರ್ ಹುದ್ದೆಯನ್ನು ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ನೀಡುವ ಮೂಲಕ ಮೈತ್ರಿ ಪಾಲುದಾರಿಕೆಯಲ್ಲಿ ಪ್ರಾತಿನಿಧ್ಯವನ್ನು ಸಮತೋಲನಗೊಳಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಇದು ಒಳಗೊಳ್ಳುವಿಕೆ ಮತ್ತು ಪರಿಣಾಮಕಾರಿ ಆಡಳಿತಕ್ಕೆ ಎನ್‌ಡಿಎ ಬದ್ಧತೆಯನ್ನು ಸೂಚಿಸುತ್ತದೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಈ ನಡುವೆ, ಪ್ರತಿಪಕ್ಷಗಳು ಮುಂದಿನ ವಾರ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಸಲು ಒತ್ತಾಯಿಸುವ ಸಾಧ್ಯತೆಗಳೂ ಇವೆ. ಒಂದು ವೇಳೆ ಚುನಾವಣೆ ಸಂಭವಿಸಿದರೆ, ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದು ಮೊದಲ ನಿದರ್ಶನವಾಗಲಾಗಿದೆ. ಈವರೆಗೆ ಎಂದಿಗೂ ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ. ಯಾವಾಗಲೂ ಸಭಾಧ್ಯಕ್ಷರನ್ನು ಒಮ್ಮತದಿಂದ ಆಯ್ಕೆ ಮಾಡಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...