ಒಂದು ತಿಂಗಳಲ್ಲಿಯೇ ಆಡಳಿತ ವಿರೋಧಿ ಅಲೆ, ರಾಜ್ಯ ಸರ್ಕಾರದ ಸಾಧನೆ: ಬಿಜೆಪಿ ವ್ಯಂಗ್ಯ

Date:

  • ಕಾಯ್ದೆಗಳ ಹಿಂಪಡೆದು ಹಿಂದೂ ವಿರೋಧಿ ಸರ್ಕಾರ ಎಂದು ಸಾಬೀತುಪಡಿಸಿದೆ
  • ಬಿಜೆಪಿ ತಂದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಪರಿಷ್ಕರಿಸಿದೆ

ರಾಜ್ಯದ ಇತಿಹಾಸದಲ್ಲಿಯೇ ಕೇವಲ ಒಂದು ತಿಂಗಳಲ್ಲಿಯೇ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವುದು ಸಿದ್ದರಾಮಯ್ಯ ಅವರ ಸರ್ಕಾರದ ಏಕೈಕ ಸಾಧನೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, “ದ್ವೇಷದ ಬಜಾರಿನಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತೇವೆಂದು ಸುಳ್ಳಿನಿಂದ ಶುರುವಾದ ಎಟಿಎಂ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಪ್ರತಿ ಕ್ಷಣದಿಂದಲೂ ದ್ವೇಷವೇ ನಮ್ಮ ತಂದೆ-ತಾಯಿ, ದ್ವೇಷವೇ ನಮ್ಮ ಬಂಧು-ಬಳಗ ಎನ್ನುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಾ ಒಂದು ತಿಂಗಳು ಪೂರೈಸಿದೆ” ಎಂದು ಟೀಕಿಸಿದೆ.

“ಬರದಿಂದ ಬಸವಳಿಯುತ್ತಿರುವ ರಾಜ್ಯದ ಜನತೆಗೆ, ಬೆಲೆಯೇರಿಕೆ ಬರೆಯನ್ನು ಎಳೆದಿರುವ ಈ ಸರ್ಕಾರ ತಾನು ಚುನಾವಣಾ ಪೂರ್ವ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸಿಲ್ಲ. ಅಧಿಕಾರ ಹಿಡಿದ ಮೇಲೆ ಎಲ್ಲದಕ್ಕೂ ಕಂಡಿಷನ್ ಅಪ್ಲೈ ಎಂದು ಹೇಳುತ್ತಾ, ವರ್ಗಾವಣೆ ದಂಧೆಯಲ್ಲಿ ನಿರಂತರವಾಗಿ ಸಿದ್ದರಾಮಯ್ಯರವರ ಸರ್ಕಾರ ತೊಡಗಿದೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇವಲ ಬಾಯಿಮಾತಿಗೆ ಸರ್ವಜನಾಂಗದ ಶಾಂತಿಯ ತೋಟ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಟಿಪ್ಪು ಛಾಯೆ ಎದ್ದು ಕಾಣುತ್ತದೆ. ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಮೂಲಕ ತಾವು ಹಿಂದೂ ವಿರೋಧಿ ಸರ್ಕಾರ ಎಂಬುದನ್ನು ಸಿದ್ದರಾಮಯ್ಯರ ಈ ತುಘಲಕ್ ಸರ್ಕಾರ ಸಾಬೀತುಪಡಿಸುತ್ತಿದೆ” ಎಂದು ಕಿಡಿಕಾರಿದೆ.

“ಎಲ್ಲ ದಿನ ಬಳಕೆ ವಸ್ತುಗಳ ಬೆಲೆಯೇರಿಕೆ, ವಿದ್ಯುತ್ ದರ ಏರಿಕೆಯಿಂದ ಜನಜೀವನ ದುರ್ಬರವಾಗಿದೆ. ಆದರೆ, ಇವುಗಳ ಬಗ್ಗೆ ಕಿಂಚಿತ್ತೂ ಗಮನಹರಿಸದೇ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸುವವರ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಮೂಲಕ ಸಂವಿಧಾನ ವಿರೋಧಿಯಾಗಿದೆ. ಆಡಳಿತವನ್ನು ದುರುಪಯೋಗಪಡಿಸಿಕೊಂಡು ದಬ್ಬಾಳಿಕೆಯ ಕ್ರೌರ್ಯವನ್ನು ಮೆರೆಯುತ್ತಿದೆ” ಎಂದು ಆರೋಪಿಸಿದೆ.

“ಭಾರತದ ಭವಿಷ್ಯದ ಪ್ರಜೆಗಳಿಗೆ ರಾಷ್ಟ್ರೀಯತೆಯ ಚಿಂತನೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ, ಬಿಜೆಪಿ ಸರ್ಕಾರ ತಂದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಪರಿಷ್ಕರಿಸಿದೆ. ಹಾಗೂ ತಮ್ಮ ಬಾಲಬಡುಕರ ಪಠ್ಯವನ್ನು ತುರುಕಿ, ಮಕ್ಕಳ ವಿಚಾರದಲ್ಲಿಯೂ ಸಹ ತನ್ನ ದ್ವೇಷದ ಅಂಗಡಿಯನ್ನು ಈ ನಾಚಿಕೆಗೇಡು ಸರ್ಕಾರ ಮುಂದುವರೆಸಿದೆ” ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

“ಈ ಮೊದಲು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ರ ಜಗಳದಲ್ಲಿ ಡಾ. ಜಿ ಪರಮೇಶ್ವರ್‌ ಮತ್ತು ಖರ್ಗೆ ಬಣಗಳು ಲಾಭ ಪಡೆಯಲು ಹವಣಿಸಿದ್ದವು. ಆದರೆ, ಇವರಿಬ್ಬರ ಕುರ್ಚಿ ಕಾಳಗದಲ್ಲಿ ಕಾಂಗ್ರೆಸ್‌ನ ಬಣಗಳು ಸೇರಿ ಸರ್ಕಾರ ಸಹ ಬಡವಾಗಿದ್ದು, ಇದರ ನೇರ ಪರಿಣಾಮ ರಾಜ್ಯದ ಜನತೆಯ ಮೇಲೆ ಬೀರುತ್ತಿದೆ” ಎಂದು ದೂರಿದೆ.

“ಕಾಂಗ್ರೆಸ್‌ನ ಈ ಎಲ್ಲ ಜನವಿರೋಧಿ ನೀತಿಗಳ ಮತ್ತು ಭ್ರಷ್ಟ ಸರ್ಕಾರದ ವಿರುದ್ಧ ಬಿಜೆಪಿ ಸದನದ ಹೊರಗೆ ಹಾಗೂ ಒಳಗೆ ರಾಜ್ಯದ ಜನತೆಯ ಪರ ಹೋರಾಟ ನಡೆಸಲಿದೆ” ಎಂದು ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿ, ಜನರನ್ನು ಕಾಂಗ್ರೆಸ್‌ ಸರ್ಕಾರ ಯಾಮಾರಿಸಿದೆ: ಬಸವರಾಜ ಬೊಮ್ಮಾಯಿ ಕಿಡಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...