ಉತ್ತರ ಕನ್ನಡ | ಮನೆ ಬಳಿ ಹೋದರೂ ಬಿಜೆಪಿ ಅಭ್ಯರ್ಥಿ ಕಾಗೇರಿಗೆ ಗೇಟ್ ತೆರೆಯದ ಅನಂತ್‌ ಕುಮಾರ್ ಹೆಗಡೆ!

Date:

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ವಿವಾದಾತ್ಮಕ ಬಿಜೆಪಿ ಮುಖಂಡ ಅನಂತ್‌ ಕುಮಾರ್ ಹೆಗಡೆಯವರ ಬದಲಿಗೆ ಬಿಜೆಪಿಯ ಟಿಕೆಟ್ ಗಿಟ್ಟಿಸಿಕೊಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಹೊಸ ತಲೆನೋವು ಆರಂಭವಾಗಿದೆ.

ಚುನಾವಣೆಯ ದೃಷ್ಟಿಯಿಂದ ತಮ್ಮ ಪರ ಪ್ರಚಾರ ನಡೆಸಲು ಬಿಜೆಪಿಯ ಶಾಸಕರು ಹಾಗೂ ಸಂಸದರ ಬೆಂಬಲ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ, ಯಾರೂ ಕೂಡ ಕಾಗೇರಿಯವರ ಸಂಪರ್ಕಕ್ಕೇ ಸಿಗುತ್ತಿಲ್ಲ ಎಂದು ಅವರ ಆಪ್ತ ಮೂಲಗಳು ಬೇಸರಿಸಿಕೊಂಡಿರುವ ಬಗ್ಗೆ ತಿಳಿದುಬಂದಿದೆ.

ಶಾಸಕ, ಸಂಸದರ ಮನವೊಲಿಸಿ, ಪಕ್ಷದ ಪರ ಪ್ರಚಾರ ನಡೆಸುವುದು ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವೇಶ್ವರ  ದೊಡ್ಡ ಸವಾಲಾಗಿದೆ. ಯಾರೂ ಕೂಡ ಕಾಗೇರಿಯವರ ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ. ಅಲ್ಲದೇ, ಮನೆಗೆ ಹೋದರೆ ಗೇಟನ್ನೇ ತೆರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ಉತ್ತರ ಕನ್ನಡದಲ್ಲಿ ಬಿಜೆಪಿಯ ಈ ಸದ್ಯದ ಪರಿಸ್ಥಿತಿ ನೋಡಿ ಲೋಕಸಭೆ ಚುನಾವಣೆಯಲ್ಲಿ ಗೆಲುವನ್ನು ತಮ್ಮದಾಗಿಸುವಲ್ಲಿ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

kageri and anant kumar hegde

ಹಾಲಿ ಸಂಸದ ಸಂಸದ ಅನಂತಕುಮಾರ್ ಹೆಗಡೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರಿಗೂ ಸಿಗದಂತಾಗಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ನಿರಂತರವಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದ ಅನಂತ್ ಕುಮಾರ್ ಹೆಗಡೆ, ಟಿಕೆಟ್ ತಪ್ಪುವ ಸುಳಿವು ಸಿಕ್ಕಿದ ಬೆನ್ನಲ್ಲೇ ಮೌನಕ್ಕೆ ಶರಣಾಗಿದ್ದರು. ಟಿಕೆಟ್ ಘೋಷಣೆಯಾಗುವುದಕ್ಕೂ ಮೂರ್ನಾಲ್ಕು ದಿನಗಳ ಮೊದಲಿನಿಂದಲೇ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಇಷ್ಟೇ ಅಲ್ಲದೆ, ಕಾರ್ಯಕರ್ತರ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಮನೆಗೆ ಯಾರೆ ಬಂದರೂ ಒಳಗೆ ಬಿಡದಂತೆ ತಮ್ಮ ಮನೆಯ ‘ಸೆಕ್ಯೂರಿಟಿ ಗಾರ್ಡ್‌’ಗೆ ಸಂಸದ ಹೆಗಡೆ ಸೂಚಿಸಿದ್ದಾರೆ ಎಂಬ ಮಾತು ಕೂಡ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ.

ಇದೀಗ ಸಂಸದರ ಮೌನ ಹಾಗೂ ತಮ್ಮದೇ ಪಕ್ಷದ ಕೆಲವು ಶಾಸಕರು ಸಂಪರ್ಕಕ್ಕೆ ಸಿಗದಿರುವುದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ತಲೆನೋವಾಗಿ ಪರಿಣಮಿಸಿದೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕಾಗೇರಿ, “ನಾನು ಮತ್ತು ಅನಂತಕುಮಾರ್ ಹೆಗಡೆ ಜೋಡೆತ್ತುಗಳಂತೆ ಕೆಲಸ ಮಾಡಲಿದ್ದೇವೆ. ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದಿದ್ದರು. ಆದರೆ, ಕಾಗೇರಿ ಭೇಟಿಗೂ ಅವಕಾಶ ನೀಡದೇ, ಕರೆಯೂ ಸ್ವೀಕರಿಸದೇ ಹೆಗಡೆ ಸಂಪೂರ್ಣ ಮೌನವಾಗಿರುವುದು ಈಗ ಅವರನ್ನು ಸಂಕಷ್ಟಕ್ಕೆ ದೂಡಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 28 ವರ್ಷಗಳ ಬಳಿಕ ಬಿಜೆಪಿ ಅಭ್ಯರ್ಥಿಯನ್ನು ಬದಲಿಸಿತ್ತು.

ಈ ಮಧ್ಯೆ, ಸಂಸದ ಅನಂತಕುಮಾರ್ ಹೆಗಡೆ ಮನೆ ಬಳಿ ಹೋಗಿ ಕಾಗೇರಿ ಅರ್ಧ ಗಂಟೆ ಕಾದರೂ ಸೌಜನ್ಯಕ್ಕೂ ಗೇಟ್ ತೆರೆಸಿ ಅವರ ಬಳಿ ಮಾತನಾಡಿಲ್ಲ ಎಂದು ತಿಳಿದುಬಂದಿದೆ. ಅನಂತಕುಮಾರ್ ಹೆಗಡೆ ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕೂಡ ಹೆಗಡೆ ಇದೇ ರೀತಿ ಮೌನವಾಗಿದ್ದರಿಂದ ಕಾಗೇರಿ ಸೋಲನುಭವಿಸಬೇಕಾಗಿ ಬಂದಿತ್ತು. ಇದೀಗ ಮತ್ತೆ ಹೆಗಡೆ ಮೌನವಾಗಿರುವುದು ಮತ್ತೊಮ್ಮೆ ಕಾಗೇರಿ ಆತಂಕಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಸಿಎಂ ಹುದ್ದೆಯಿಂದ ಕೇಜ್ರಿವಾಲ್ ಪದಚ್ಯುತಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಈ ನಡುವೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಕೂಡ ಕಾಗೇರಿ ಕೈಗೆ ಸಿಗದೆ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಬುಧವಾರ ಯಲ್ಲಾಪುರದಲ್ಲೇ ಬಿಜೆಪಿ ಅಭ್ಯರ್ಥಿ ಪರ ಸಭೆ ನಡೆದರೂ ಶಿವರಾಂ ಹೆಬ್ಬಾರ್ ಗೈರಾಗಿದ್ದರು. ಈ ಎಲ್ಲ ಬೆಳವಣಿಗೆಯ ನಡುವೆ ಕಾಂಗ್ರೆಸ್ ಗೆಲುವನ್ನು ತಮ್ಮದಾಗಿಸುವಲ್ಲಿ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ತಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರವಾಗಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...