ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗಲಭೆ ಸೃಷ್ಟಿಸಲಿದೆ: ಮಮತಾ ಬ್ಯಾನರ್ಜಿ ಎಚ್ಚರಿಕೆ

Date:

“ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯು ರಾಜ್ಯದಲ್ಲಿ ಗಲಭೆಗೆ ಪ್ರಚೋದನೆ ನೀಡಲಿದೆ” ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಪಶ್ಚಿಮ ಬಂಗಾಳದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಪುರುಲಿಯಾದಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ರ್‍ಯಾಲಿಗಳು ಮತ್ತು ಸಭೆಗಳನ್ನು ನಡೆಸಿ, ಆದರೆ ನೀವು ಗಲಭೆ ಮಾಡಬೇಡಿ. ಅವರೇ (ಬಿಜೆಪಿ) ಗಲಭೆ ಮಾಡುತ್ತಾರೆ. ಏಪ್ರಿಲ್ 19 ರಂದು ಮತದಾನ ನಡೆಯಲಿದ್ದು, ಏಪ್ರಿಲ್ 17 ರಂದು ಗಲಭೆ ನಡೆಯಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಗವಂತ ರಾಮ ನಿಮಗೆ ಗಲಭೆ ಮಾಡಲು ಹೇಳುವುದಿಲ್ಲ. ಆದರೆ ಈ ಜನರು (ಬಿಜೆಪಿ) ಗಲಭೆ ಮಾಡುತ್ತಾರೆ. ಹಾಗೆಯೇ ಗಲಭೆ ಸೃಷ್ಟಿಸಿ ಅವರು ರಾಜ್ಯಕ್ಕೆ ಎನ್‌ಐಎ ಕರೆಸಿಕೊಳ್ಳುತ್ತಾರೆ” ಎಂದು ಆರೋಪಿಸಿದರು.

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೇಲೆ ದಾಳಿ ನಡೆಸಲಾಗಿದ್ದು ಇದಾದ ಕೆಲವು ದಿನಗಳ ನಂತರ ಸಿಎಂ ಮಮತಾ ಬ್ಯಾನರ್ಜಿ ಈ ಹೇಳಿಕೆಯನ್ನು ನೀಡಿದ್ದಾರೆ. 2022 ರಲ್ಲಿ ತೃಣಮೂಲ ಕಾಂಗ್ರೆಸ್ ನಾಯಕನ ನಿವಾಸದಲ್ಲಿ ಸ್ಫೋಟ ನಡೆದಿರುವ ಬಗ್ಗೆ ತನಿಖೆ ನಡೆಸುತ್ತಿರುವಾಗ ಎನ್ಐಎ ಮೇಲೆ ದಾಳಿ ನಡೆದಿದೆ.

ಇದನ್ನು ಓದಿದ್ದೀರಾ?   ಬಿಜೆಪಿಗೆ ಸೇರದಿದ್ದರೆ ಕ್ರಮ ಎನ್ನುತ್ತಿರುವ ತನಿಖಾ ಸಂಸ್ಥೆಗಳು: ಮಮತಾ ಬ್ಯಾನರ್ಜಿ ಆರೋಪ

ಘಟನೆಯ ಬಗ್ಗೆ ಪ್ರಶ್ನಿಸಿದಾಗ “ಎನ್‌ಐಎ ಬಿಜೆಪಿಗೆ ಸಹಕಾರ ಮಾಡುತ್ತಿದೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. “ಅವರು (ಎನ್‌ಐಎ) ಮಧ್ಯರಾತ್ರಿಯಲ್ಲಿ ಏಕೆ ದಾಳಿ ಮಾಡಿದರು? ಅವರಿಗೆ ಪೊಲೀಸ್ ಅನುಮತಿ ಇದೆಯೇ? ಮಧ್ಯರಾತ್ರಿಯಲ್ಲಿ ಬೇರೆ ಯಾರಾದರೂ ಅಪರಿಚಿತರು ಸ್ಥಳಕ್ಕೆ ಭೇಟಿ ನೀಡಿದರೆ ಸ್ಥಳೀಯರು ಪ್ರತಿಕ್ರಿಯಿಸುವ ರೀತಿ ಹೇಗಿರುತ್ತದೆಯೋ ಅದೇ ರೀತಿ ಸ್ಥಳೀಯರು ಪ್ರತಿಕ್ರಿಯಿಸಿದ್ದಾರೆ” ಎಂದು ಹೇಳಿದ್ದಾರೆ.

“ಚುನಾವಣೆಗೂ ಮುನ್ನವೇ ಯಾಕೆ ಜನರನ್ನು ಬಂಧಿಸುತ್ತಿದ್ದಾರೆ? ಪ್ರತಿ ಬೂತ್ ಏಜೆಂಟರನ್ನು ಬಂಧಿಸುವ ಆಲೋಚನೆಯನ್ನು ಬಿಜೆಪಿ ಹೊಂದಿದೆಯೇ? ಎನ್ಐಎಗೆ ಯಾವ ಹಕ್ಕಿದೆ? ಬಿಜೆಪಿಯನ್ನು ಬೆಂಬಲಿಸಲು ಇದೆಲ್ಲವನ್ನೂ ಮಾಡುತ್ತಿದ್ದಾರೆ. ಬಿಜೆಪಿಯ ಈ ಕೊಳಕು ರಾಜಕಾರಣದ ವಿರುದ್ಧ ಇಡೀ ವಿಶ್ವವೇ ಹೋರಾಡುವಂತೆ ನಾವು ಕರೆ ನೀಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎನ್ಐಎ ತಂಡದ ಕಾರಿನ ಮೇಲೆ ಇಟ್ಟಿಗೆ ಎಸೆಯಲಾಗಿದೆ ಎಂದು ವರದಿಯಾಗಿದೆ. ಬೆಳಗಿನ ಜಾವ 5:30ರ ಸುಮಾರಿಗೆ ಅಕ್ಕಪಕ್ಕದ ನಿವಾಸಿಗಳು ಕಾರಿಗೆ ಕಲ್ಲೆಸೆದು ಘೇರಾವ್ ಹಾಕಿದ್ದಾರೆ ಎನ್ನಲಾಗಿದೆ. ಒಬ್ಬರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಎನ್‌ಐಎ ಅಧಿಕಾರಿಗಳ ಗುಂಪು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಈ ಬಗ್ಗೆ ಎನ್‌ಐಎ ಪೊಲೀಸ್ ದೂರು ದಾಖಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...