2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

Date:

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿರುವ ನಡುವೆ, “ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ” ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.

ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ವರ್ಷವಾದ 2025 ರ ವೇಳೆಗೆ ಮೀಸಲಾತಿಯನ್ನು ರದ್ದುಗೊಳಿಸಲಿದೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

“2025ರ ವೇಳೆಗೆ ಆರ್‌ಎಸ್‌ಎಸ್‌ 100 ವರ್ಷ ಪೂರೈಸಲಿದೆ. 2025ರ ವೇಳೆಗೆ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತು ಹಾಕಲು ಪ್ರಯತ್ನಿಸುತ್ತಿದ್ದಾರೆ. ಹಲವು ಬಾರಿ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರು ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ್ದಾರೆ” ಎಂದು ಗುರುವಾರ ಸಾರ್ವಜನಿಕ ಸಭೆಯಲ್ಲಿ ರೇವಂತ್ ರೆಡ್ಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮುಸ್ಲಿಮರು ಮತ್ತು ಮೋದಿ ಸುಳ್ಳು; ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಆಯೋಗಗಳು ಹೇಳಿದ್ದೇನು? ಡೀಟೇಲ್ಸ್‌

ಹಿಂದುಳಿದ ವರ್ಗಗಳಿಗೆ (ಬಿಸಿ) ಮೀಸಲಾತಿಯನ್ನು ಪ್ರಸ್ತಾಪಿಸಿದ ಮಂಡಲ್ ಆಯೋಗದ ವರದಿಯ ಅನುಷ್ಠಾನವನ್ನು ಬಿಜೆಪಿ ಈ ಹಿಂದೆ ಸ್ಥಗಿತಗೊಳಿಸಿತ್ತು. ಈಗ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಕೋಟಾಗಳನ್ನು ರದ್ದುಗೊಳಿಸಲು ಸಂಸತ್ತಿನಲ್ಲಿ ಅಧಿಕ ಸಂಖ್ಯೆಯಲ್ಲಿರುವುದು ಮುಖ್ಯ. ಅದಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ” ಎಂದು ಈ ಸಂದರ್ಭದಲ್ಲೇ ರೇವಂತ್ ರೆಡ್ಡಿ ಆರೋಪಿಸಿದರು.

“ಮೀಸಲಾತಿಯನ್ನು ರದ್ದುಪಡಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯನ್ನು ಕೆಲವೇ ಜನರು ಬೆಂಬಲಿಸುತ್ತಿದ್ದಾರೆ. ಈ ಲೋಕಸಭಾ ಚುನಾವಣೆಗಳು ಎಸ್‌ಸಿ, ಎಸ್‌ಟಿ, ಬಿಸಿ ಮೀಸಲಾತಿಯ ಜನಾಭಿಪ್ರಾಯ” ಎಂದರು.

ಇನ್ನು ಬುಧವಾರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಕಾಂಗ್ರೆಸ್ ಎಸ್‌ಸಿ/ಎಸ್‌ಟಿ/ಒಬಿಸಿಗಳಿಂದ ಮೀಸಲಾತಿಯನ್ನು ಕಿತ್ತು ತನ್ನ ವಿಶೇಷ ವೋಟ್ ಬ್ಯಾಂಕ್‌ಗೆ ನೀಡಲು ಬಯಸುತ್ತದೆ” ಎಂದು ಪ್ರಧಾನಿ ಆರೋಪಿಸಿದ್ದರು. ಧರ್ಮದ ಆಧಾರದ ಮೇಲೆ ಮೀಸಲಾತಿ ನೀತಿಗಳನ್ನು ರಾಜಕೀಯಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ದೂರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...