ಬಿಜೆಪಿಯ ಅತೃಪ್ತ ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ, ಜ.26ರ ನಂತರ ಪ್ರಕ್ರಿಯೆ ಶುರು: ಲಕ್ಷ್ಮಣ ಸವದಿ

Date:

  • ‘ಬಿಜೆಪಿಯ ಹಲವು ‘ಅತೃಪ್ತ’ ಶಾಸಕರು ಸಂಪರ್ಕದಲ್ಲಿದ್ದಾರೆ’
  • ಜನವರಿ 26ರ ನಂತರ ಮುಂದಿನ ಪ್ರಕ್ರಿಯೆ ಪ್ರಾರಂಭ: ಸವದಿ

ಬಿಜೆಪಿಯ ಹಲವು ‘ಅತೃಪ್ತ’ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಾವು ಜನವರಿ 26ರ ನಂತರ ಮುಂದಿನ ಪ್ರಕ್ರಿಯೆ ಪ್ರಾರಂಭಿಸುತ್ತೇವೆ. ಎಷ್ಟು ಮಂದಿ ಕಾಂಗ್ರೆಸ್‌ಗೆ ಸೇರುತ್ತಾರೆ ಎಂಬುದನ್ನು ನೋಡುತ್ತೀರಿ ಎಂದು ಕಾಂಗ್ರೆಸ್ ಶಾಸಕ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬಾಗಲಕೋಟೆಯ ಬಿಜೆಪಿ ಮುಖಂಡ ಕುಮಾರ್ ಯಳ್ಳಿಗುತ್ತಿ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, “‘ಬಿಜೆಪಿಯಿಂದ ಬಂದವರಿಗೆ ಅನ್ಯಾಯ ಆಗಬಾರದು. ಹಾಗಾಗಿ ಅವರ ಇಚ್ಛೆಯಂತೆ ಕಾಂಗ್ರೆಸ್‌ಗೆ ಸೇರುವವರನ್ನು ಗೌರವಯುತವಾಗಿ ಸ್ವಾಗತಿಸಲಾಗುವುದು. ಸಂಸತ್ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲಲು ನೀಲನಕ್ಷೆ ಸಿದ್ಧವಾಗಿದೆ” ಎಂದರು.

ಲಿಂಗಾಯತ ಸಮುದಾಯದ ಶಾಸಕರನ್ನು ಸೆಳೆಯುವ ಕಾರ್ಯವನ್ನು ತಮಗೆ ನೀಡಲಾಗಿದೆಯೇ ಎಂದು ಪ್ರಶ್ನಿಸಿದಾಗ, “ಲಿಂಗಾಯತರು ಮಾತ್ರವಲ್ಲ, ಕಾಂಗ್ರೆಸ್ ಎಲ್ಲರನ್ನು ಸ್ವಾಗತಿಸುತ್ತದೆ” ಎಂದು ಸವದಿ ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

“ಇವತ್ತಿನ ಪರಿಸ್ಥಿತಿಯಲ್ಲಿ ಯಾರೇ ಅಧ್ಯಕ್ಷರಾದರೂ ಚೇತರಿಸಿಕೊಳ್ಳೋದು ಬಹಳ ಕಷ್ಟ ಇದೆ. ಈಗಾಗಲೇ ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಸ್ಪೋಟ ಆಗೋದು ಮಾತ್ರ ಬಾಕಿ ಇದೆ. ಕೆಲವರು ಒಳಗೊಳಗೆ ಕುದಿಯುತ್ತಿದ್ದು, ಯಾವಾಗ ಜ್ವಾಲಾಮುಖಿ ಹೊರಗೆ ಬೀಳುತ್ತೆ ಗೊತ್ತಿಲ್ಲ, ಆದ್ರೆ ಅಸಮಾಧಾನ ಸ್ಪೋಟಗೊಳ್ಳೋದು ಖಂಡಿತ” ಎಂದು ಸವದಿ ಭವಿಷ್ಯ ನುಡಿದರು.

“ಉತ್ತರ ಕರ್ನಾಟಕದಲ್ಲಿ ಲಿಂಗಾಯತರು ಹೆಚ್ಚು ಕೇಂದ್ರೀಕೃತವಾಗಿದ್ದರೆ, ವಿಜಯೇಂದ್ರ ಅವರು ದಕ್ಷಿಣ ಕರ್ನಾಟಕದ ಮೈಸೂರು, ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೀಮಿತರಾಗಿದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಪಕ್ಷದ ನಿರ್ಧಾರಕ್ಕೆ ಬಿಜೆಪಿಯ ಹಲವು ನಾಯಕರಿಗೆ ಒಪ್ಪಿಗೆಯಿಲ್ಲ. ವಿಜಯೇಂದ್ರ ಅವರಂತಹ ಕಿರಿಯ ನಾಯಕರ ಅಡಿಯಲ್ಲಿ ಕೆಲಸ ಮಾಡುವುದು ಹೇಗೆ ಎಂದು ಹಿರಿಯ ನಾಯಕರು ಗೊಂದಲಕ್ಕೊಳಗಾಗಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...