ವಯನಾಡು | ಪ್ರಿಯಾಂಕಾ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಸಿಪಿಐಎಂ ಕಾರ್ಯಕರ್ತರು

Date:

ಮಂಗಳವಾರ ವಯನಾಡಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸಿಪಿಐಎಂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. “ಸಂಸದರು ಕ್ಷೇತ್ರಕ್ಕೆ ಬರೀ ಸಾಂದರ್ಭಿಕವಾಗಿ ಭೇಟಿ ನೀಡುತ್ತಿದ್ದಾರೆ ಎಂದು ಸಿಪಿಐಎಂ ಕಾರ್ಯಕರ್ತರು ಆರೋಪಿಸಿದರು.

ಕಣ್ಣೂರು ವಿಮಾನ ನಿಲ್ದಾಣದಿಂದ ವಯನಾಡಿಗೆ ತೆರಳುತ್ತಿದ್ದಾಗ ಪ್ರಿಯಾಂಕಾ ಗಾಂಧಿ ಅವರಿಗೆ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಯಾವುದೇ ಸಮಸ್ಯೆಯಿದ್ದರೆ ಮಾತ್ರ ಸಂಸದೆ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ ಎಂದು ಆರೋಪಿಸಿ ಸಿಪಿಐಎಂ ಕಾರ್ಯಕರ್ತರು ಘೋಷಣೆ ಕೂಗಿದರು.

ಇದನ್ನು ಓದಿದ್ದೀರಾ? ದುಷ್ಟ ಸರ್ಕಾರದ ವಿರುದ್ಧ ನಮ್ಮ ಹೋರಾಟ, ಸಂವಿಧಾನ ಉಳಿವಿಗಾಗಿ ಜೀವ ಕೊಡಲು ಸಿದ್ಧ: ಪ್ರಿಯಾಂಕಾ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಿಯಾಂಕಾ ಗಾಂಧಿ ಹುಲಿ ದಾಳಿಯಲ್ಲಿ ಮೃತಪಟ್ಟ ತೋಟಗಾರಿಕಾ ಕೆಲಸಗಾರ್ತಿ ರಾಧಾ ಮತ್ತು ತನ್ನ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಎಂ.ಎನ್. ವಿಜಯನ್ ಅವರ ಮನೆಗಳಿಗೆ ಭೇಟಿ ನೀಡಿದರು.

ರಾಧಾ ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುವ ಭರವಸೆಯನ್ನು ಪ್ರಿಯಾಂಕಾ ಗಾಂಧಿ ನೀಡಿದರು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾನವ-ಪ್ರಾಣಿ ಸಂಘರ್ಷದ ವಿಷಯಗಳನ್ನು ಚರ್ಚಿಸುವುದಾಗಿಯೂ ಭರವಸೆ ನೀಡಿದರು.

ವಿಜಯನ್ ಅವರ ಮನೆಗೆ ಪ್ರಿಯಾಂಕಾ ಗಾಂಧಿ ಅವರ ಭೇಟಿಯು ರಾಜಕೀಯವಾಗಿ ಮಹತ್ವವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಶಾಸಕ ಐ ಸಿ ಬಾಲಕೃಷ್ಣನ್ ಮತ್ತು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಎನ್.ಡಿ. ಅಪ್ಪಚ್ಚನ್ ಅವರು ವಿಜಯನ್ ಮತ್ತು ಅವರ ಮಗನ ಆತ್ಮಹತ್ಯಾ ಪ್ರಚೋದನೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಹಾಗಾಗಿ ರಾಜಕೀಯವಾಗಿ ಈ ಭೇಟಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನು ಓದಿದ್ದೀರಾ? ತನ್ನ ಕೆನ್ನೆಯ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಬಿಧುರಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಶಾಸಕ ಬಾಲಕೃಷ್ಣನ್ ಮತ್ತು ಇತರರು ಪಕ್ಷದ ನಿಯಂತ್ರಣದಲ್ಲಿರುವ ಸಹಕಾರಿ ಬ್ಯಾಂಕ್‌ಗಳಿಗೆ ನೇಮಕಾತಿಗಳಲ್ಲಿ ಅಕ್ರಮ ಎಸಗಿದ್ದರಿಂದ ವಿಜಯನ್ ಆರ್ಥಿಕ ಬಿಕ್ಕಟ್ಟಿಗೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಈ ಬಿಕ್ಕಟ್ಟಿನ ಬಗ್ಗೆ ಪ್ರಿಯಾಂಕಾ ಗಾಂಧಿ ವಿಚಾರಿಸಿದ್ದಾರೆ ಎಂದು ಹೇಳಲಾಗಿದೆ.

ತನ್ನ ಸಹೋದರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಯ್‌ಬರೇಲಿಯನ್ನು ಆಯ್ಕೆ ಮಾಡಿಕೊಂಡ ಬಳಿಕ ವಯನಾಡಿನಲ್ಲಿ ಉಪಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿದ ಪ್ರಿಯಾಂಕಾ ಗಾಂಧಿ ಗೆಲವುದು ಸಾಧಿಸಿದ್ದಾರೆ. ಅದಾದ ಬಳಿಕ ಕೊನೆಯದಾಗಿ ಡಿಸೆಂಬರ್ 1 ಮತ್ತು 2ರಂದು ವಯನಾಡಿಗೆ ಭೇಟಿ ನೀಡಿದ್ದರು. ಈಗ ಜನವರಿ ಅಂತ್ಯದಲ್ಲಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದಾರೆ. ಈ ಕಾರಣದಿಂದಾಗಿ ಸಿಪಿಐಎಂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...