‘ಬಾಂಬೆ ಬಾಯ್ಸ್’ ಸುದ್ದಿ | ‘ಸುವರ್ಣ ಚಾನೆಲ್’ ವಿರುದ್ಧ ಕೆ ಎಸ್ ಈಶ್ವರಪ್ಪ ಕಿಡಿ

Date:

‘ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಲು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸೆ ಬಂದವರು’ ಕಾರಣ ಎಂಬ ಹೇಳಿಕೆಯ ಬಗ್ಗೆ ‘ಬಾಂಬೆ ಬಾಯ್ಸ್’ ಎಂದು ತಪ್ಪಾಗಿ ಉಲ್ಲೇಖ ಮಾಡಿ ಪ್ರಸಾರ ಮಾಡಲಾಗಿದೆ ಎಂದು ‘ಸುವರ್ಣ ಚಾನೆಲ್’ ವಿರುದ್ಧ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಬುಧವಾರ ಮಾತನಾಡಿರುವ ಅವರು, “ನಾನು ಮತ್ತು ಸಂಸದರಾದ ಪ್ರಲ್ಹಾದ್ ಜೋಶಿ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದೆವು. ಆದರೆ ಪತ್ರಿಕಾಗೋಷ್ಠಿ ಮುಗಿಸಿ ಪ್ರವಾಸಿ ಮಂದಿರಕ್ಕೆ ಹೋದಾಗ ‘ಸುವರ್ಣ ಚಾನೆಲ್’ನಲ್ಲಿ ‘ಬಾಂಬೆ ಬಾಯ್ಸ್ ವಿರುದ್ಧ ಈಶ್ವರಪ್ಪ ಗರಂ’ ಎಂಬ ಸುದ್ದಿ ಪ್ರಸಾರವಾಗುವುದು ಗಮನಿಸಿದೆ. ಟಿವಿಗಳಲ್ಲಿ ಏನು ಬೇಕಾದರೂ ಬರೆಯಬಹುದು ಎಂಬುದು ನೋಡಿ ನನಗೆ ಆಶ್ವರ್ಯವಾಯಿತು. ನಾನು ಅಲ್ಲಿ ಬಾಂಬೆ ಬಾಯ್ಸ್ ಅಂತ ಪ್ರಸ್ತಾಪ ಮಾಡಿದ್ದನ್ನು ತೋರಿಸಲಿ. ನಾನು ಸಂತೋಷಪಡುತ್ತೇನೆ. ಆದರೆ, ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದರು.

ಆ ಬಳಿಕ ಸಂಬಂಧಪಟ್ಟ ಹುಬ್ಬಳ್ಳಿಯ ವರದಿಗಾರನಿಗೆ ಕರೆ ಮಾಡಿ ಕೇಳಿದಾಗ, ನಾನು ಆ ಥರ ಕಳಿಸಿಲ್ಲ. ಮುಖ್ಯ ಕಚೇರಿಯಿಂದ ಹಾಗೆ ವರದಿ ಮಾಡುತ್ತಿದ್ದಾರೆ ಎಂದುತ್ತರಿಸಿದರು. ಆ ಬಳಿಕ ಸುವರ್ಣ ಚಾನೆಲ್‌ನ ಉನ್ನತ ಹುದ್ದೆಯಲ್ಲಿರುವವರಿಗೆ ತಿಳಿಸಿದಾಗ, ಬದಲಾವಣೆ ಮಾಡಿದ್ದೇವೆ ಎಂದು ಹೇಳಿದರು. ಅವರು ಬದಲಾವಣೆ ಮಾಡುವ ವೇಳೆಗೆ ಇಡೀ ರಾಜ್ಯದ ಜನ ನೋಡಿಯಾಗಿತ್ತು. ಅಲ್ಲದೇ, ‘ಬಾಂಬೆ ಬಾಯ್ಸ್’ ಸುದ್ದಿಯಿಂದ ಬಿಜೆಪಿಗೆ ಬಂದಂತಹ 17 ಜನ ಶಾಸಕರಿಗೂ ಕೂಡ ನೋವಾಗಿದೆ. ನನಗೂ ನೋವಾಯಿತು. ಅವರು ನಮಗೆ ಸಹಕಾರ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ಕೂಡ ಬಂತು. ನಾನೂ ಕೂಡ ಮಂತ್ರಿಯಾದೆ. ಆದರೆ, ಅವರ ಬಗ್ಗೆ ಆಪಾದನೆ ಮಾಡಿ ಸುದ್ದಿ ಹರಡಿರುವುದು ನೋವಾಗಿದೆ ಎಂದು ಈಶ್ವರಪ್ಪ ಸಮಜಾಯಿಷಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಫೋನ್ ಮಾಡಿ ತಿಳಿಸಿದೆ. ಬಳಿಕ ಪಕ್ಷದ ಕಾರ್ಯಕರ್ತರ ಸಭೆಗೆ ಹೋದಾಗ, ಅಲ್ಲಿ ಸುವರ್ಣ ಚಾನೆಲ್‌ನ ವರದಿಗಾರರಿದ್ದರು. ಅವರಲ್ಲಿ ನನ್ನ ಸ್ಪಷ್ಟೀಕರಣ ಹಾಕುವಂತೆ ವಿನಂತಿಸಿದೆ. ಆದರೆ ಅವರು ವಿಡಿಯೋ ಮಾಡಲಿಲ್ಲ. ನಾನು ಅಲ್ಲಿ ‘ಬಾಂಬೆ ಬಾಯ್ಸ್‌’ ಎಂದು ಪ್ರಸ್ತಾಪವೇ ಮಾಡಿಲ್ಲ. ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ ಎಂದಷ್ಟೇ ಹೇಳಿದ್ದೆ. ಆದ್ದರಿಂದ ಇಂತಹ ಸುದ್ದಿಗಳು ಪ್ರಸಾರ ಮಾಡುವುದರಿಂದ ನಮ್ಮೊಳಗಡೆ ಗೊಂದಲ ಉಂಟಾಗುತ್ತದೆ. ಆದ್ದರಿಂದ ಹೇಳದೇ ಇರುವ ಹೇಳಿಕೆಗಳನ್ನು ಪ್ರಸಾರ ಮಾಡಬೇಡಿ’ ಎಂದು ‘ಸುವರ್ಣ ಚಾನೆಲ್‌’ನ ಹೆಸರೆತ್ತಿ ಹೇಳಿಕೆ ನೀಡಿದ್ದಾರೆ.

“ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದೆ” ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...