ಥರ್ಮಾಕೋಲ್ ಬಳಸಿ ಜಲಾಶಯ ದಾಟುವ ಶಾಲಾ ಮಕ್ಕಳು: ಬಾಂಬೆ ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು

Date:

  • ಥರ್ಮಾಕೋಲ್ ತೆಪ್ಪ ಬಳಸಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು
  • ಆಗಸ್ಟ್ 27ರಂದು ವರದಿ ಪ್ರಕಟಿಸಿದ್ದ ಆಂಗ್ಲಪತ್ರಿಕೆ ‘ಟೈಮ್ಸ್‌ ಆಫ್‌ ಇಂಡಿಯಾ’

ಶಾಲೆಗೆ ತೆರಳುವುದಕ್ಕಾಗಿ ವಿದ್ಯಾರ್ಥಿಗಳು ಹಾವುಗಳೇ ತುಂಬಿರುವ ಅಣೆಕಟ್ಟಿನ ಜಲಾಶಯವನ್ನು ಥರ್ಮಾಕೋಲ್ ತೆಪ್ಪ ಬಳಸಿ ದಾಟುತ್ತಿರುವುದಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ ಸ್ವಯಂಪ್ರೇರಿತ(ಸುಮೋಟೋ) ವಿಚಾರಣೆಗೆ ಮುಂದಾಗಿದೆ ಎಂದು ‘ಬಾರ್ & ಬೆಂಚ್’ ವರದಿ ಮಾಡಿದೆ.

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಭಿವ್ ಧನೋರಾ ಗ್ರಾಮದ ಮಕ್ಕಳು ಥರ್ಮಾಕೋಲ್ ತೆಪ್ಪ ಬಳಸಿ ದಾಟುತ್ತಿದ್ದ ವಿಡಿಯೋ ಕಳೆದ ವಾರ ದೇಶಾದ್ಯಂತ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ ಔರಂಗಾಬಾದ್‌ ಪೀಠ ಸ್ವಯಂಪ್ರೇರಿತ ವಿಚಾರಣೆಗೆ ಮುಂದಾಗಿದೆ ಎಂದು ವರದಿಯಾಗಿದೆ.

bombay high court

ಅಲ್ಲದೇ, ಈ ಸಂಬಂಧ ಆಂಗ್ಲಪತ್ರಿಕೆ ಟೈಮ್ಸ್‌ ಆಫ್‌ ಇಂಡಿಯಾ ಕಳೆದ ಆಗಸ್ಟ್ 27ರಂದು ಪ್ರಕಟಿಸಿದ್ದ ಸುದ್ದಿಯನ್ನು ನ್ಯಾಯಮೂರ್ತಿಗಳಾದ ರವೀಂದ್ರ ವಿ ಘುಗೆ ಮತ್ತು ವೈ ಜಿ ಖೋಬ್ರಾಗಡೆ ಅವರಿದ್ದ ವಿಭಾಗೀಯ ಪೀಠ ಗಮನಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಔರಂಗಾಬಾದ್ ಜಿಲ್ಲೆಯ ಭಿವ್ ಧನೋರಾ ಗ್ರಾಮದ 15 ಮಕ್ಕಳು ಪ್ರತಿದಿನ ಥರ್ಮಾಕೋಲ್‌ಗಳ ಮೇಲೆ ಕುಳಿತು ಜೈಕ್ವಾಡಿ ಅಣೆಕಟ್ಟು ಜಲಾಶಯ ದಾಟಿ ಶಾಲೆಗೆ ಹೋಗುತ್ತಿರುವ ಬಗ್ಗೆ ವರದಿ ಪ್ರಕಟವಾಗಿತ್ತು.

ನೀರಿನಲ್ಲಿ ವಿಷಪೂರಿತ ಹಾವುಗಳು ಇರುವುದರಿಂದ ಪರಿಸ್ಥಿತಿ ಭಯಾನಕವಾಗಿದೆ ಎಂದು ಇಬ್ಬರು ಮಕ್ಕಳ ತಂದೆ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿಗಾರರಿಗೆ ಮಾಹಿತಿ ನೀಡಿ, ತಮ್ಮ ಮಕ್ಕಳ ಕಷ್ಟವನ್ನು ತಿಳಿಸಿದ್ದರು.

school childre using thermacol in maharashtra

“ನನ್ನ ಮಕ್ಕಳು ನನ್ನಂತೆ ಅನಕ್ಷರಸ್ಥರಾಗಲು ನಾನು ಬಯಸುವುದಿಲ್ಲ. ಥರ್ಮಾಕೋಲ್ ಶೀಟ್‌ ಬಳಸಿ ನನ್ನ ಮಗಳು ಮತ್ತು ಮಗ ಶಾಲೆಗೆ ಹೋಗುತ್ತಿದ್ದಾರೆ. ನೀರಿನಲ್ಲಿ ವಿಷಕಾರಿ ಹಾವುಗಳಿರುವುದು ಭಯ ಹುಟ್ಟಿಸುತ್ತದೆ” ಎಂದು ವಿದ್ಯಾರ್ಥಿಯೋರ್ವರ ತಂದೆ ವಿವರಿಸಿದ್ದರು.

ಅಣೆಕಟ್ಟು ನಿರ್ಮಾಣವಾದ 47 ವರ್ಷಗಳಿಂದ ಇದೇ ಪರಿಸ್ಥಿತಿ ಇದೆ ಎಂಬುದನ್ನು ಗಮನಿಸಿರುವ ಬಾಂಬೆ ಹೈಕೋರ್ಟ್‌, ಪಿಐಎಲ್‌ ಅರ್ಜಿ ಸಿದ್ಧಪಡಿಸುವ ಸಂಬಂಧ ನ್ಯಾಯಾಲಯಕ್ಕೆ ಸಹಾಯ ಮಾಡಲು ವಕೀಲ ಪುಷ್ಕರ್ ಶೆಂಡೂರ್ನಿಕರ್ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಿಸಿತು.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವರದಿ ಪ್ರಕಟಿಸಿದ್ದ ಟೈಮ್ಸ್‌ ಆಫ್‌ ಇಂಡಿಯಾದ ವರದಿಗಾರರನ್ನು ಸಂಪರ್ಕಿಸಲು ಅಮಿಕಸ್‌ ಕ್ಯೂರಿ ಅವರಿಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ.

ಶೆಂಡೂರ್ನಿಕರ್ ಅವರು ಸೆಪ್ಟೆಂಬರ್ 4 ರಂದು (ಇಂದು) ಮನವಿ ಸಲ್ಲಿಸಲಿದ್ದು ನ್ಯಾಯಾಲಯ ಮುಂದಿನ ನಿರ್ದೇಶನಗಳನ್ನು ನೀಡಲಿದೆ ಎಂದು ‘ಬಾರ್ & ಬೆಂಚ್’ ತಿಳಿಸಿದೆ.

ಜನವರಿ 2022 ರಲ್ಲಿ, ಸತಾರಾ ಜಿಲ್ಲೆಯ ಖಿರ್ಖಂಡಿ ಗ್ರಾಮದ ಹೆಣ್ಣುಮಕ್ಕಳು ಶಾಲೆ ತಲುಪಲು ಕೊಯ್ನಾ ಅಣೆಕಟ್ಟು ಜಲಾಶಯದಲ್ಲಿ ತಾವೇ ದೋಣಿ ಹುಟ್ಟು ಹಾಕುತ್ತಿದ್ದಾರೆ ಎಂಬ ವರದಿ ಆಧರಿಸಿ ಹೈಕೋರ್ಟ್‌ ಪ್ರಧಾನ ಪೀಠ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.

ಹೆಣ್ಣು ಮಕ್ಕಳಿಗೆ ಸುರಕ್ಷಿತ ಮತ್ತು ಸೌಹಾರ್ದಯುತ ವಾತಾವರಣ ಕಲ್ಪಿಸಿದರೆ ಮಾತ್ರ ‘ಬೇಟಿ ಬಚಾವೋ, ಬೇಟಿ ಪಡಾವೋ'(ಹೆಣ್ಣು ಮಗುವನ್ನು ರಕ್ಷಿಸಿ, ಶಿಕ್ಷಣ ನೀಡಿ) ಎಂಬ ಘೋಷವಾಕ್ಯದ ಧ್ಯೇಯ ಸಾಕಾರಗೊಳ್ಳಲಿದೆ ಎಂದು ಅದು ಬುದ್ಧಿಮಾತು ಕೂಡ ಹೇಳಿತ್ತು. ಮಕ್ಕಳು ಶಾಲೆಗಳಿಗೆ ಯಾವುದೇ ತೊಂದರೆ ಎದುರಿಸದೆ ಹೋಗುವಂತಾಗಲು ಉತ್ತಮ ರಸ್ತೆಗಳನ್ನು ನಿರ್ಮಿಸಬೇಕು ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...