‘ವಕ್ಫ್‌ ಆಸ್ತಿ ಅಲ್ಲಾಹನದ್ದು, ಮರಳಿ ಪಡೆಯಲು ಕಾಂಪ್ರಮೈಸ್‌ ಬೇಡ’ ಎಂದಿದ್ದ ಬೊಮ್ಮಾಯಿ; ಇಲ್ಲಿದೆ ದಾಖಲೆ

Date:

ಕರ್ನಾಟಕದಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಆಕ್ರಮಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಇಲ್ಲದ ವಿವಾದವನ್ನು ಮುನ್ನೆಲೆಗೆ ತಂದು, ಗದ್ದಲ ಎಬ್ಬಿಸುತ್ತಿದೆ. ಗಲಭೆ, ಸಂಘರ್ಷಗಳು ನಡೆಯುವಂತೆ ಮಾಡಿದೆ. ವಕ್ಫ್‌ ಆಸ್ತಿ ವಿಚಾರ ಇಟ್ಟುಕೊಂಡು ಬಿಜೆಪಿ ಹರಡುತ್ತಿರುವ ಕೋಮುದ್ವೇಷದಿಂದ ಹಾವೇರಿ ಜಿಲ್ಲೆಯ ಕಡಕೋಳದಲ್ಲಿ ಕೋಮು ಗಲಭೆ ನಡೆದಿದೆ.

ಆದರೆ, ಬಿಜೆಪಿಯೇ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ವಕ್ಫ್‌ ಆಸ್ತಿ ವಿಚಾರದಲ್ಲಿ ಅವರ ವರಸೆ ಬೇರೆಯೇ ಇತ್ತು. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು, ‘ವಕ್ಫ್‌ ಆಸ್ತಿ ಅಲ್ಲಾಹನದ್ದು. ಅದರ ವಿಚಾರದಲ್ಲಿ ಕಾಂಪ್ರಮೈಸ್‌ ಆಗಬಾರದು. ವಕ್ಫ್‌ ಆಸ್ತಿಗಳನ್ನು ವಕ್ಫ್‌ ಬೋರ್ಡ್‌ ವಶಪಡಿಸಿಕೊಳ್ಳಬೇಕು’ ಎಂದಿದ್ದರು. ವಕ್ಫ್‌ ಆಸ್ತಿ ವಿಚಾರದಲ್ಲಿ ಮುಸ್ಲಿಂ ಮುಖಂಡರಿಗೆ ಈ ರೀತಿ ಕಿವಿ ಮಾತು ಹೇಳಿದ್ದ ವಿಡಿಯೋ ದೊರೆತಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈಗ ಹರಿದಾಡಿರುವ ವಿಡಿಯೋ 2022ರಲ್ಲಿ ಬೆಂಗಳೂರಿನಲ್ಲಿ ಕೆಎಂಡಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಹೇಳಿದ್ದ ಮಾತುಗಳು ಹೀಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಕ್ಫ್‌ ಆಸ್ತಿ ಅಲ್ಲಾಹನದ್ದು. ಅದರಲ್ಲಿ ಕಾಂಪ್ರಮೈಸ್ ಮಾಡಬಾರದು. ನೀವು ಕಾಂಪ್ರಮೈಸ್‌ ಆದಲ್ಲಿ ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ. ಊಪರ್‌ವಾಲಾ(ಮೇಲಿನವನು) ನೋಡುತ್ತಿದ್ದಾನೆ. ಖುದಾನ ಜಮೀನನ್ನು ಲೂಟಿ ಮಾಡುತ್ತಿರಬೇಕಾದರೆ ನೀವೆಲ್ಲ ಕಣ್ಣು ಮುಚ್ಚಿ ಕುಳಿತರೆ, ಲೂಟಿ ಮಾಡುವವನಿಗಿಂತ ಲೂಟಿ ಮಾಡಲು ಬಿಟ್ಟವರೇ ದೊಡ್ಡ ಮುಜ್ರಿಂ(ತಪ್ಪಿತಸ್ಥ) ಆಗುತ್ತಾರೆ. ಖುದಾನ ಜಮೀನುಗಳನ್ನು ರಕ್ಷಿಸುವ ಅವಕಾಶ ಲಭಿಸಿರುವ ನೀವು ಪುಣ್ಯವಂತರು” ಎಂದಿದ್ದರು.

ಮುಂದುವರೆದು, “ಕರ್ನಾಟಕದಲ್ಲಿ ಸುಮಾರು 2,000 ಕೋಟಿ ವಕ್ಫ್ ಆಸ್ತಿಯನ್ನು ಈಗಾಗಲೇ ಖಾಸಗಿಯವರು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲಿ ಇಲ್ಲಿ ಅಲ್ಪಸ್ವಲ್ಪ ಜಮೀನು ಒಳಗೆ ಹಾಕಿದ್ದರೆ ಬೇರೆ ವಿಷಯ. ಸಂಪೂರ್ಣ ಆಸ್ತಿಗಳನ್ನೇ ಖಾಸಗಿಯವರು ಒಳಗೆ ಹಾಕಿಕೊಂಡಿದ್ದಾರೆ. ಇನ್ನೀಗ ಆಸ್ತಿಯ ಒಂದು ಮೂಲೆಯಲ್ಲಿ ನಾವು ಮಸೀದಿ ಕಟ್ಟುತ್ತೇವೆ ಎಂದರೆ ಅವರು ನಿಮಗೆ ಅವಕಾಶ ಕೊಡುತ್ತಾರಾ? ಆದ್ದರಿಂದ ಖಾಸಗಿಯವರು ವಶಪಡಿಸಿಕೊಂಡಿರುವ ವಕ್ಫ್‌ನ ಎಷ್ಟು ಆಸ್ತಿಗಳಿವೆಯೋ ಅದೆಲ್ಲವೂ ಮತ್ತೆ ವಕ್ಫ್‌ ಬೋರ್ಡಿಗೆ ಬರುವವರೆಗೂ ನೀವೆಲ್ಲ ಸುಮ್ಮನೆ ಕೂರಬಾರದು. ನಿಮ್ಮ ಜೊತೆಗೆ ನಾವಿದ್ದೇವೆ” ಎಂದು ಬೊಮ್ಮಾಯಿ ಅಬ್ಬರದ ಭಾಷಣ ಮಾಡಿದ್ದರು.

ಇದನ್ನು ಓದಿದ್ದೀರಾ? ಗ್ರೌಂಡ್ ರಿಪೋರ್ಟ್‌ | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು!

ಬೊಮ್ಮಾಯಿ ಭಾಷಣ ಮಾಡುವ ವೇಳೆ, ಅದೇ ವೇದಿಕೆಯಲ್ಲಿ ಬಿಜೆಪಿ ಸಂಸದ ಪಿ.ಸಿ ಮೋಹನ್, ಬಿಜೆಪಿ ನಾಯಕ ರಾಜು ಗೌಡ, ಆಗಿನ ವಕ್ಫ್‌ ಬೋರ್ಡ್‌ ಅಧ್ಯಕ್ಷರಾಗಿದ್ದ ಶಾಫಿ ಸಅದಿ ಸೇರಿದಂತೆ ಹಲವರು ಇದ್ದರು. ಯಾರೊಬ್ಬರೂ ಆಗ ತಕರಾರು ತೆಗೆದಿರಲಿಲ್ಲ. ಬೊಮ್ಮಾಯಿ ಹೇಳಿಕೆ ತಪ್ಪು ಎಂದಿರಲಿಲ್ಲ.

ಆದರೆ, ಈಗ ಇದೇ ಬೊಮ್ಮಾಯಿ ಮತ್ತು ಬಿಜೆಪಿಗರು, ಇದೇ ವಕ್ಫ್‌ ಆಸ್ತಿಯನ್ನು ವಿವಾದದ ಕೇಂದ್ರವನ್ನಾಗಿಸಿದ್ದಾರೆ. ರೈತರು ಉಳುಮೆ ಮಾಡುತ್ತಿರುವ ಆಸ್ತಿಯನ್ನು ವಕ್ಫ್‌ ವಶಕ್ಕೆ ಪಡೆಯಲು ನೋಟಿಸ್‌ ನೀಡಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಬೋರ್ಡ್‌ಗಾಗಿ ರೈತರನ್ನು ಬಲಿಕೊಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಒಂದು ಚಿಕ್ಕ ಸಮಸ್ಯೆಯನ್ನು ರಾಜ್ಯದ ವಿಚಾರವನ್ನಾಗಿ ಮಾಡಿ, ಕೋಮು ಸಂಘರ್ಷ ಹುಟ್ಟು ಹಾಕುತ್ತಿದ್ದಾರೆ. ಹಿಂದೆ, ಘಂಟಾಘೋಷವಾಗಿ, ‘ಒತ್ತುವರಿಯಾಗಿರುವ ವಕ್ಫ್‌ ಆಸ್ತಿಪಾಸ್ತಿಗಳನ್ನು ಹಿಂಪಡೆಯಿರಿ. ನಿಮ್ಮ ಜೊತೆಗೆ ನಾವಿದ್ದೇವೆ’ ಎಂದಿದ್ದ ಬೊಮ್ಮಾಯಿ, ಅಂತಹ ಹೇಳಿಕೆ ನೀಡಿದಾಗ ಮೌನವಾಗಿದ್ದ ಬಿಜೆಪಿ ನಾಯಕರು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ರೈತರ ರಕ್ಷಣೆ ಮಾಡುತ್ತೇವೆಂದು ಹೇಳುತ್ತಿದ್ದಾರೆ.

ಇದು ಚುನಾವಣೆಯ ಸಮಯ ಎಂಬುದನ್ನು ಜನ ನೆನಪಿನಲ್ಲಿಟ್ಟುಕೊಳ್ಳಬೇಕು. ಚುನಾವಣೆ ಮುಗಿದ ನಂತರ, ಹಿಂದು-ಮುಸ್ಲಿಮರು ಒಟ್ಟಾಗಿ ಬದುಕಬೇಕು ಎಂಬ ಕಟುಸತ್ಯವನ್ನು ಅರಿಯಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...