ಯುದ್ಧಕೋರರ ಪರ ನಿಲುವುಳ್ಳ ಮೋದಿ ಸರ್ಕಾರಕ್ಕೆ ಬೊಮ್ಮಾಯಿ ಮಾತಿನ ಎಚ್ಚರಿಕೆ ಘಂಟೆ!

Date:

ಇರಾನ್‌ ಮೇಲೆ ಯುದ್ಧದಾಹಿ ಅಮೆರಿಕ ಮತ್ತು ಅದರ ಬಾಲಂಗೋಚಿ ಇಸ್ರೇಲ್ ಯುದ್ಧ ಸಾರಿವೆ. ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ಅವರನ್ನು ಹತ್ಯೆಗೈದಿವೆ. ತೈಲ ಸಂಪತ್ತನ್ನು ಹೊಂದಿರುವ ಇರಾನ್‌ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕೆಂದು ಹವಣಿಸುತ್ತಿವೆ. ಅಮೆರಿಕ ಸರ್ವಾಧಿಕಾರದ ದಾಹಕ್ಕೆ ಮಧ್ಯಪ್ರಾಚ್ಯ ಯುದ್ಧಭೂಮಿಯಾಗಿ ಬದಲಾಗಿದೆ. ಆದರೂ, ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರ ಯುದ್ಧಕೋರ ಅಮೆರಿಕ-ಇಸ್ರೇಲ್‌ ಪರವಾದ ಧೋರಣೆಯನ್ನು ತಳೆದಿದೆ. ಇದೇ ಸಮಯದಲ್ಲಿ, ಬಿಜೆಪಿ ಸಂಸದರಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪಕ್ಷದ ಧೋರಣೆಗಿಂತ ಭಿನ್ನವಾಗಿ ಮಾತನಾಡಿದ್ದಾರೆ. ಅಮೆರಿಕವನ್ನು ಖಂಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, “ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ಜಂಟಿ ಯುದ್ಧ ಮತ್ತು ಇರಾನ್‌ ಪ್ರತಿದಾಳಿಯು ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು. ಮಧ್ಯಪ್ರಾಚ್ಯ ಇಡೀ ವಿಶ್ವದ ಆರ್ಥಿಕ ಮತ್ತು ಸಾಂಸ್ಕೃತಿಕ ಪ್ರದೇಶ. ಮೊದಲು ಜರಸಲೇಮ್‍ಗಾಗಿ ಯುದ್ಧ ನಡೆದಿತ್ತು. ಈಗ ಪೆಟ್ರೋಲಿಯಂ, ಧಾರ್ಮಿಕ ವಿಚಾರಕ್ಕೆ ಯುದ್ಧ ನಡೆಯುತ್ತಿದೆ. ಅಮೆರಿಕ ತೈಲ ಉತ್ಪನ್ನಗಳ ಮೇಲೆ ಹಿಡಿತ ಸಾಧಿಸಲು ನೋಡುತ್ತಿದೆ. ಅಮೆರಿಕ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೂರನೇ ವಿಶ್ವ ಯುದ್ದ ಆಗಲು ಚೀನಾ ಮತ್ತು ರಶ್ಯಾ ಇನ್ನೂ ಯುದ್ದಕ್ಕೆ ಇಳಿದಿಲ್ಲ. ಕಾದು ನೋಡುವ ತಂತ್ರ ಮಾಡುತ್ತಿವೆ. ಅವರೂ ಯುದ್ದಕ್ಕೆ ಇಳಿದರೆ ಬಹಳ ದೊಡ್ಡ ಅನಾಹುತ ಆಗಲಿದೆ. ಇದರಿಂದ, ಪರಿಣಾಮ ಬೀರಲಿದೆ. ಆಧುನಿಕ ಯುದ್ಧಗಳಲ್ಲಿ ಎಲ್ಲರೂ ಸೋಲುತ್ತಾರೆ; ವಿಶೇಷವಾಗಿ ಪರಮಾಣು ಸಾಮರ್ಥ್ಯದ ಹಿನ್ನೆಲೆಯಲ್ಲಿ ಮಾತುಕತೆ, ಚರ್ಚೆಗಳ ಮೂಲಕ ಪರಿಹರಿಸಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೊಮ್ಮಾಯಿ ಅವರ ಮಾತುಗಳು ಬಿಜೆಪಿಯ ಧೋರಣೆ-ನಿಲುವಿಗಿಂತ ಭಿನ್ನವಾಗಿವೆ. ಮಾತ್ರವಲ್ಲ, ಮಹತ್ವದ್ದೂ ಆಗಿವೆ. ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಬಲವಾದ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಸ್ರೇಲ್‌ಅನ್ನು ತಮ್ಮ ಪಿತೃ ರಾಷ್ಟ್ರವೆಂದು ಹೇಳಿಕೊಂಡಿದ್ದಾರೆ. ಇರಾನ್ ಮತ್ತು ಅಮೆರಿಕ-ಇಸ್ರೇಲ್‌ ನಡುವೆ ರಾಜತಾಂತ್ರಿಕ ಮಾತುಕತೆ ಅಗತ್ಯವೆಂದು ಹೇಳುತ್ತಿದ್ದರೂ, ಟ್ರಂಪ್‌ ಎದುರು ಶರಣಾಗಿರುವ ಮೋದಿ, ಇಸ್ರೇಲ್‌ಗೆ ಬೆಂಬಲ ಮುಂದುವರೆದಿದ್ದಾರೆ.

ಈ ಲೇಖನ ಓದಿದ್ದೀರಾ?: ಇರಾನ್‌ನ ಮಿತ್ರರು ಯಾರು? ರಷ್ಯಾ-ಚೀನಾ ನಿಲುವೇನು?

ಮಧ್ಯಪ್ರಾಚ್ಯದಲ್ಲಿ ಸಾವಿರಾರು ಕನ್ನಡಿಗರು ಸೇರಿದಂತೆ ಸುಮಾರು 1 ಕೋಟಿಗೂ ಹೆಚ್ಚು ಮಂದಿ ಭಾರತೀಯರು ನೆಲೆಸಿದ್ದಾರೆ. ಒಂದು ವೇಳೆ, ಯುದ್ಧವು ಭೀಕರತೆ ಪಡೆದುಕೊಂಡರೆ, ಅಲ್ಲಿರುವ ಭಾರತೀಯರು ಸೇರಿದಂತೆ ಮಧ್ಯಪ್ರಾಚ್ಯ ವಾಸಿಗಳ ಮಾರಣಹೋಮವೇ ನಡೆದುಹೋಗಲಿದೆ. ಇದರ ಅರಿವಿದ್ದರೂ, ಮೋದಿ ಸರ್ಕಾರವು ಯುದ್ಧಕೋರರ ಪರವಾಗಿ ನಿಂತಿದೆ.

ಇದೇ ಸಮಯದಲ್ಲಿ ಬಂದಿರುವ ಬೊಮ್ಮಾಯಿ ಅವರ ನಿಲುವು ಯುದ್ಧ ವಿರೋಧಿ ಮತ್ತು ಶಾಂತಿ-ಮಾತುಕತೆಯನ್ನು ಒತ್ತಾಯಿಸಿದೆ. ವೊಮ್ಮಾಯಿ ಮಾತುಗಳು ಭಾರತವು ಮೊದಲಿನಿಂದಲೂ ಪ್ರತಿಪಾದಿಸುತ್ತಿರುವ ‘ವಸುಧೈವ ಕುಟುಂಬಕಂ’ – ಅಂದರೆ ಇಡೀ ಜಗತ್ತೇ ಒಂದು ಕುಟುಂಬ ಎಂಬ ಆದರ್ಶವನ್ನು ಮತ್ತೆ ಒತ್ತಿ ಹೇಳುತ್ತವೆ. ಅಂತರರಾಷ್ಟ್ರೀಯ ನಿಯಮಗಳು ಒತ್ತಡದಲ್ಲಿರುವ ಇಂತಹ ಸಮಯದಲ್ಲಿ, ಮೌನವಾಗಿರುವ ಮೋದಿ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡುತ್ತವೆ. ಬೊಮ್ಮಾಯಿ ಮಾತುಗಳು ಮೋದಿ ಸೇರಿದಂತೆ ಬಿಜೆಪಿಗರ ಕಿವಿಹೊಕ್ಕಬೇಕು. ಭಾರತವು ತನ್ನ ಯುದ್ಧವಿರೋಧಿ ನಿಲುವನ್ನು ಬಲವಾಗಿ ಪ್ರತಿವಾದಿಸುವಂತಾಗಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...