ಹಿಂದೂಯೇತರರ ಮನೆಗೆ ಹೋದರೆ ಹೆಣ್ಣು ಮಕ್ಕಳ ಕಾಲು ಮುರಿಯಿರಿ: ಪ್ರಜ್ಞಾ ಠಾಕೂರ್ ವಿವಾದಾತ್ಮಕ ಹೇಳಿಕೆ

Date:

ನಿಮ್ಮ ಮನೆಯ ಹೆಣ್ಣು ಮಕ್ಕಳು ಹಿಂದೂಯೇತರರ ಮನೆಗೆ ಹೋದರೆ, ನಿಮ್ಮ ಮಾತು ಕೇಳದಿದ್ದರೆ ಅವರ ಕಾಲು ಮುರಿಯಿರಿ ಎಂದು ಭೋಪಾಲ್‌ನ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ ನಡುವೆ ಭಾರತೀಯ ಜನತಾ ಪಕ್ಷ(ಬಿಜೆಪಿ) ದ್ವೇಷ ಹರಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ತಿಂಗಳ ಆರಂಭದಲ್ಲಿ ಭೋಪಾಲ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಠಾಕೂರ್, ಹೆಣ್ಣುಮಕ್ಕಳು ತಮ್ಮ (ಪೋಷಕರ) ಇಚ್ಛೆಗೆ ವಿರುದ್ಧವಾಗಿ ವರ್ತಿಸಿದರೆ ದೈಹಿಕವಾಗಿ ಶಿಕ್ಷಿಸುವಂತೆ ಪೋಷಕರಿಗೆ ಕರೆ ನೀಡಿದ್ದಾರೆ. ಇದರ ವಿಡಿಯೋ ಸದ್ಯ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಸದ್ಯ ವೈರಲ್ ಆಗುತ್ತಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿಯನ್ನು ‘ಹಿಂದೂಗಳ ಮೇಲೆ ಮುಸ್ಲಿಮರ ದಾಳಿ’ ಎಂದು ಕರೆಯಬೇಕು: ಪ್ರಗ್ಯಾ ಠಾಕೂರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಮನಸ್ಸನ್ನು ಬಲಪಡಿಸಿಕೊಳ್ಳಿ. ನಮ್ಮ ಹೆಣ್ಣು ಮಕ್ಕಳು ನಮ್ಮ ಮಾತನ್ನು ಕೇಳದಿದ್ದರೆ, ಆಕೆ ಹಿಂದೂಯೇತರರ ಮನೆಗೆ ಹೋದರೆ, ಆಕೆಯ ಕಾಲುಗಳನ್ನು ಮುರಿಯಿರಿ. ಈ ಬಗ್ಗೆ ಯೋಚಿಸುವಾಗ ಹಿಂದೆ ಮುಂದೆ ನೋಡಬೇಡಿ” ಎಂದು ಹೇಳಿದ್ದಾರೆ.

“ಪೋಷಕರ ಮಾತು ಕೇಳದವರ, ವಿಧೇಯರಾಗಿರವರಿಗೆ ಶಿಕ್ಷೆ ನೀಡಬೇಕು. ಮಕ್ಕಳ ಒಳಿತಿಗಾಗಿ ಅವರಿಗೆ ಹೊಡೆಯುವುದರಲ್ಲಿ ತಪ್ಪೇನಿಲ್ಲ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ನಾವು ಕೆಲವೊಮ್ಮೆ ಅವರನ್ನು ಶಿಕ್ಷಿಸಬೇಕಾಗುತ್ತದೆ. ನಮ್ಮ ಹೆಣ್ಣು ಮಕ್ಕಳ ದೇಹ ತುಂಡು ತುಂಡಾಗಿ ಸಾಯುವಂತಾಗುವುದನ್ನು ತಡೆಯಲಾಗದು” ಎಂದಿದ್ದಾರೆ.

“ಮೌಲ್ಯಗಳನ್ನು ಅನುಸರಿಸದ, ಪೋಷಕರ ಮಾತನ್ನು ಕೇಳದ, ಹಿರಿಯರನ್ನು ಗೌರವಿಸದ ಮತ್ತು ಮನೆಯಿಂದ ಓಡಿಹೋಗಲು ಸಿದ್ಧರಾಗಿರುವ ಅಂತಹ ಹುಡುಗಿಯರ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಅವರನ್ನು ಮನೆಯಿಂದ ಹೊರಗೆ ಹೋಗಲು ಬಿಡಬೇಡಿ. ಅವರಿಗೆ ಹೊಡೆಯುವ ಮೂಲಕ, ಅವರಿಗೆ ಬುದ್ಧಿ ಹೇಳುವ ಮೂಲಕ, ಅವರನ್ನು ಪ್ರೀತಿಸುವ ಅಥವಾ ಬೈಯುವ ಮೂಲಕ ಅವರನ್ನು ತಡೆಯಿರಿ” ಎಂದು ಹೇಳಿದ್ದಾರೆ.

ಪ್ರಜ್ಞಾ ಠಾಕೂರ್ ಅವರ ಈ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ. “ಮಧ್ಯಪ್ರದೇಶದಲ್ಲಿ ಏಳು ಧಾರ್ಮಿಕ ಮತಾಂತರ ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದ್ದಾಗ ಇಷ್ಟೊಂದು ಸದ್ದು ಮತ್ತು ದ್ವೇಷ ಹರಡುತ್ತಿರುವುದು ಏಕೆ” ಎಂದು ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ಪ್ರಶ್ನಿಸಿದ್ದಾರೆ. ಈ ಹಿಂದೆಯೂ ಹಲವು ಬಾರಿ ಪ್ರಜ್ಞಾ ಅವರು ವಿವಾದಾತ್ಮಕ, ಧ್ವೇಷ ಭಾಷಣ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...