Live Updates | ಪ್ರತಿಭಟನೆ,ಚಳವಳಿಗಳನ್ನು ನಿಲ್ಲಿಸಲು ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

23 Sep 2023, 06:35 PM

ಚಳವಳಿಗಳನ್ನು ನಿಲ್ಲಿಸಲು ಹೋಗುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ, ಚಳವಳಿಗಳು ಸಹಜ. ಅದು ಚಳುವಳಿಗಾರರ ಅಭಿಪ್ರಾಯ. ಅದನ್ನು ನಾವು ನಿಲ್ಲಿಸಲು ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾವೇರಿ ವಿವಾದಕ್ಕೆ ಸಂಬಂಧಿಸಿ ಇಂದು ಸಂಜೆ ಬೆಂಗಳೂರಿನಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

‘ಉಚ್ಛ ನ್ಯಾಯಾಲಯದ ಆದೇಶ ಬರುವ ಮುನ್ನವೇ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಾರೆ’ ಎಂದು ಬಿಜೆಪಿ, ಜೆಡಿಎಸ್‌ನವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ನ್ಯಾಯಾಲಯದಲ್ಲಿ ಸುಳ್ಳು ಹೇಳಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.

23 Sep 2023, 05:25 PM

ಮಾಜಿ ರಾಷ್ಟ್ರಪತಿ ಅಧ್ಯಕ್ಷ್ಯತೆಯಲ್ಲಿ ‘ಒಂದು ರಾಷ್ಟ್ರ ಒಂದು ಚುನಾವಣೆ’ ಸಮಿತಿಯ ಮೊದಲ ಸಭೆ

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯ ಮೊದಲ ಸಭೆ ಇಂದು ದೆಹಲಿಯಲ್ಲಿ ನಡೆದಿದೆ. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಗುಲಾಂ ನಬಿ ಆಝಾದ್ ಮತ್ತು ಇತರರು ಭಾಗವಹಿಸಿದ್ದರು.

ಈ ಸಭೆಯಲ್ಲಿ ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಮಾಡುವ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಮತ್ತು ರಾಜಕೀಯ ನಾಯಕರ ಅಭಿಪ್ರಾಯ ಏನು? ಇದರ ಸಾಧಕ-ಬಾಧಕಗಳೇನು? ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ವರದಿಯಾಗಿದೆ.


23 Sep 2023, 04:45 PM

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ‘ಕರ್ನಾಟಕ ಬಂದ್’ ದಿನಾಂಕ ಘೋಷಣೆ: ವಾಟಾಳ್ ನಾಗರಾಜ್

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಸೋಮವಾರ ಅಖಂಡ ಕರ್ನಾಟಕ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಸೆ.26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿರುವುದಕ್ಕೆ ನನ್ನ ವಿರೋಧವಿಲ್ಲ. ಅವರ ಜೊತೆಗೆ ಮಾತಾಡುತ್ತೇವೆ. ಎಲ್ಲರೂ ಒಟ್ಟಿಗೆ ಸೇರಿ ಅಖಂಡ ಕರ್ನಾಟಕ ಬಂದ್ ಮಾಡುವ ಬಗ್ಗೆಯೂ ಮನವಿ ಮಾಡುತ್ತೇವೆ. ಎಲ್ಲರೂ ಸೇರಿ ಬಂದ್ ಮಾಡಿದರೆ ಹೋರಾಟಕ್ಕೆ ಒಂದು ಶಕ್ತಿ ಬರಲಿದೆ ಎಂದರು.

ವಾಟಾಲ್

ಸೆ.26ಕ್ಕೆ ಬಂದ್: ‘ಬೆಂಗಳೂರು ಗೌರವ ಹಾಳು ಮಾಡಬೇಡಿ’ ಎಂದ ಡಿಸಿಎಂ ಡಿಕೆ ಶಿವಕುಮಾರ್

ಕಾವೇರಿ ವಿಚಾರವಾಗಿ ಸೆ.26ರಂದು ಬೆಂಗಳೂರು ಬಂದ್‌ ಸುದ್ದಿಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, “ಬೆಂಗಳೂರನ್ನು ಬಂದ್ ಮಾಡುವುದೆಂದರೆ ನಮ್ಮ ಹೃದಯವನ್ನು ನಾವೇ ಚುಚ್ಚಿಕೊಂಡಂತೆ. ನಾವು ಎಲ್ಲ ರೀತಿಯ ಸಹಕಾರವನ್ನು ರೈತರಿಗೆ ಕೊಟ್ಟಿದ್ದೇವೆ. ಬಂದ್ ಮಾಡುವುದರಿಂದ ಯಾವುದೇ ಉಪಯೋಗವಿಲ್ಲ. ರಾಜ್ಯದ ಪರವಾಗಿಯೇ ನಾವು ಇದ್ದೇವೆ. ದಯವಿಟ್ಟು ಅಂತಹ ತಪ್ಪುಗಳನ್ನು ಮಾಡುವುದಕ್ಕೆ ಹೋಗಬೇಡಿ. ಕರ್ನಾಟಕ ಸರ್ಕಾರವೇ ರಾಜ್ಯದ ಹಿತ ಕಾಪಾಡುತ್ತದೆ” ಎಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳು ರಾಜಕಾರಣ ಮಾಡುತ್ತಿದೆ. ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿಕೆಯವರು ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಸಂದರ್ಶನ ನೀಡಿದ್ದರು. ಪತ್ರಿಕಾ ಸಂದರ್ಶನ ನೋಡಿದರೆ ಎಲ್ಲರಿಗೂ ಗೊತ್ತಾಗುತ್ತದೆ.. ಪ್ರಧಾನಿ ಮಧ್ಯ ಪ್ರವೇಶಿಸಬೇಕೆಂದು ದೇವೇಗೌಡ್ರ ಹೇಳಿದ್ದಾರೆ. ನಾವು ರಾಜ್ಯದ ಜನರ ರಕ್ಷಣೆ ಮಾಡಲು ಹೊರಟಿದ್ದೇವೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿ ಕೆ ಶಿವಕುಮಾರ್

23 Sep 2023, 03:05 PM

‘ಸಿಂಗಂ’ ರೀತಿಯ ಸಿನಿಮಾಗಳಿಂದ ತಪ್ಪು ಸಂದೇಶ: ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ

‘ಸಿಂಗಂʼ ರೀತಿಯ ಚಿತ್ರಗಳಲ್ಲಿ ತೋರಿಸಿರುವಂತೆ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ ಸಿನಿಮೀಯ ʼಪೋಲೀಸ್’ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ ಎಂದು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಗೌತಮ್ ಪಟೇಲ್ ಹೇಳಿದ್ದಾರೆ. ಇಂಡಿಯನ್ ಪೊಲೀಸ್ ಫೌಂಡೇಶನ್ ತನ್ನ ವಾರ್ಷಿಕ ದಿನ ಮತ್ತು ಪೊಲೀಸ್ ಸುಧಾರಣಾ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಕಾನೂನಿನ ಪ್ರಕ್ರಿಯೆಯ ಬಗ್ಗೆ ಜನರು ವ್ಯಕ್ತಪಡಿಸುತ್ತಿರುವ ಅಸಹನೆಯ ಬಗ್ಗೆ ಉಲ್ಲೇಖಿಸಿದ್ದಾರೆ.

singham film

23 Sep 2023, 02:05 PM

ನಿಲ್ಲದ ಡಿಸಿಎಂ ಕೂಗು; ಆರು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟ ಶಾಸಕ ರಾಯರೆಡ್ಡಿ

ಸಮುದಾಯವಾರು ಮೂವರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ಬೇಡಿಕೆ ಇಟ್ಟ ಬೆನ್ನಲ್ಲೇ ಇದೀಗ ಶಾಸಕ ಬಸವರಾಜ ರಾಯರೆಡ್ಡಿ ಆರು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿದ್ದಾರೆ. ಈ ಮೂಲಕ ಕೆಎನ್ ರಾಜಣ್ಣ ಹೇಳಿಕೆಗೆ ರಾಯರೆಡ್ಡಿ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಎಲ್ಲ ಜಾತಿ-ಧರ್ಮಗಳು ಕಾಂಗ್ರೆಸ್​ಗೆ ಬೆಂಬಲ ನೀಡಿವೆ. ಹೀಗಾಗಿ ಅಲ್ಪಸಂಖ್ಯಾತ, ಎಸ್​​ಸಿ, ಎಸ್​ಟಿ, ಲಿಂಗಾಯತರಿಗೆ ಡಿಸಿಎಂ ಹುದ್ದೆ ನೀಡಿ ಎಂದು ರಾಯರೆಡ್ಡಿ” ಆಗ್ರಹಿಸಿದ್ದಾರೆ.

basavaraja rayareddy

23 Sep 2023, 01:30 PM

ಸೆಪ್ಟೆಂಬರ್ 26ರಂದು ಬೆಂಗಳೂರು ನಗರ ಬಂದ್​ಗೆ ಕರೆ

ಸೆಪ್ಟೆಂಬರ್ 26ರಂದು ಬೆಂಗಳೂರು ನಗರ ಬಂದ್​ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ಕೊಟ್ಟಿದೆ. ಫ್ರೀಡಂಪಾರ್ಕ್​ನಲ್ಲಿ ಕುರುಬೂರು ಶಾಂತಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸೆ. 26ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಟೌನ್​ಹಾಲ್​ನಿಂದ SBM ವೃತ್ತದವರೆಗೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಬೇಕು. ಫಿಲ್ಮ್ ಛೇಂಬರ್, ಐಟಿ ಕಂಪನಿಗಳು ಬೆಂಬಲ ಕೊಡಬೇಕು. ಇದು ನಮ್ಮ ಬಂದ್ ಅಲ್ಲ, ಬೆಂಗಳೂರಿನ ನಾಗರಿಕರ ಬಂದ್. ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದು ಕುರುಬೂರು ಶಾಂತಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕರ್ನಾಟಕ ಬಂದ್

23 Sep 2023 12:48 PM

ಯೋಗ್ಯತೆ ಇದ್ದರೆ ಸಮಸ್ಯೆ ಬಗೆಹರಿಸಿ, ಇಲ್ಲ ರಾಜೀನಾಮೆ ನೀಡಿ: ಯಡಿಯೂರಪ್ಪ ಕಿಡಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಎಡವಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಶನಿವಾರ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆ ಮೂಲಕ ಬೃಹತ್‌ ಪ್ರತಿಭಟನೆ ನಡೆಸಿತು. ಪ್ರತಿಭಟನೆ ವೇಳೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. “ನಿಮಗೆ ಯೋಗ್ಯತೆ ಇದ್ದರೆ ಸಮಸ್ಯೆ ಪರಿಹಾರ ಮಾಡಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಎಲ್ಲರೂ ಸೇರಿ ನಾವು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಬಿಜೆಪಿ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...